TOP STORIES:

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು.

ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು.

ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.ಈ ಸಂಘಟನೆಯ ಒಂದಿಬ್ಬರ ಪರಿಚಯ ಬಿಟ್ಟರೆ ಉಳಿದವರಿಗೆ ನಾನು ಅಪರಿಚಿತ ಆದರೆ ನಾನು ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ನನಗೆ ನೀಡಿದ ಸ್ವಾಗತ, ಗೌರವ, ಪ್ರೀತಿಯ ಆತಿಥ್ಯ ಮುಕ್ತ ಮಾತುಕತೆ ಇವೆಲ್ಲವೂ ನನ್ನನ್ನು ಭಾವಪರವಶನನ್ನಾಗಿಸಿತು.

ಕಾರ್ಯಕ್ರಮದ ಬಳಿಕ ಸಮಾಜದ ಅಭಿವೃದ್ಧಿ ಯ ಬಗ್ಗೆ ಒಂದಿಷ್ಟು ವಿಚಾರ ವಿನಿಮಯ ನಡೆಯಿತು. ಜೀವನ ನಿರ್ವಹಣೆ ಗಾಗಿ ಜನ್ಮಭೂಮಿಯಿಂದ( ಭಾರತ) ಕರ್ಮಭೂಮಿಗೆ ( ದುಬೈ )ಆಗಮಿಸಿ ಇಲ್ಲಿ ಬಿಡುವಿಲ್ಲದ ಕರ್ತವ್ಯ ದ ಒತ್ತಡ ದ ನಡುವೆಯೂ ಸಮುದಾಯದ ವರನ್ನು ಒಗ್ಗೂಡಿಸಿ ಅಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಬಿಲ್ಲವಾಸ್ ಫ್ಯಾಮಿಲಿ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ.

ಕೆಲವೇ ಸಮಯ ಜತೆಗೆ ಕಳೆದರೂ ನಾನೂ ಈ ಕುಟುಂಬ ದ ಸದಸ್ಯರಲ್ಲಿ ಓರ್ವ ಎಂಬಂತೆ ಭಾಸವಾಯಿತು. ಮುಜುಗರ ದಿಂದ ಕಾರ್ಯಕ್ರಮ ಕ್ಕೆ ಹೋದ ನಾನು ನನ್ನ ಕುಟುಂಬವನ್ನೇ ಬಿಟ್ಟು ಬರುತ್ತಿರುವೇನೋ ಅನ್ನಿಸುವಷ್ಟು ಭಾರವಾದ ಹೃದಯದೊಂದಿಗೆ ವಿದಾಯ ಹೇಳಬೇಕಾಯಿತು.

ನೀವುಗಳು ನೀಡಿದ ಪ್ರೀತಿ ಗೌರವಾತಿಥ್ಯಕ್ಕೆ ಸದಾ ಚಿರಋಣಿ. ಈ ಪ್ರೀತಿ ವಿಶ್ವಾಸ ಸದಾ ಹೀಗೇ ಇರಲಿ.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »