TOP STORIES:

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು.

ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು.

ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.ಈ ಸಂಘಟನೆಯ ಒಂದಿಬ್ಬರ ಪರಿಚಯ ಬಿಟ್ಟರೆ ಉಳಿದವರಿಗೆ ನಾನು ಅಪರಿಚಿತ ಆದರೆ ನಾನು ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ನನಗೆ ನೀಡಿದ ಸ್ವಾಗತ, ಗೌರವ, ಪ್ರೀತಿಯ ಆತಿಥ್ಯ ಮುಕ್ತ ಮಾತುಕತೆ ಇವೆಲ್ಲವೂ ನನ್ನನ್ನು ಭಾವಪರವಶನನ್ನಾಗಿಸಿತು.

ಕಾರ್ಯಕ್ರಮದ ಬಳಿಕ ಸಮಾಜದ ಅಭಿವೃದ್ಧಿ ಯ ಬಗ್ಗೆ ಒಂದಿಷ್ಟು ವಿಚಾರ ವಿನಿಮಯ ನಡೆಯಿತು. ಜೀವನ ನಿರ್ವಹಣೆ ಗಾಗಿ ಜನ್ಮಭೂಮಿಯಿಂದ( ಭಾರತ) ಕರ್ಮಭೂಮಿಗೆ ( ದುಬೈ )ಆಗಮಿಸಿ ಇಲ್ಲಿ ಬಿಡುವಿಲ್ಲದ ಕರ್ತವ್ಯ ದ ಒತ್ತಡ ದ ನಡುವೆಯೂ ಸಮುದಾಯದ ವರನ್ನು ಒಗ್ಗೂಡಿಸಿ ಅಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಬಿಲ್ಲವಾಸ್ ಫ್ಯಾಮಿಲಿ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ.

ಕೆಲವೇ ಸಮಯ ಜತೆಗೆ ಕಳೆದರೂ ನಾನೂ ಈ ಕುಟುಂಬ ದ ಸದಸ್ಯರಲ್ಲಿ ಓರ್ವ ಎಂಬಂತೆ ಭಾಸವಾಯಿತು. ಮುಜುಗರ ದಿಂದ ಕಾರ್ಯಕ್ರಮ ಕ್ಕೆ ಹೋದ ನಾನು ನನ್ನ ಕುಟುಂಬವನ್ನೇ ಬಿಟ್ಟು ಬರುತ್ತಿರುವೇನೋ ಅನ್ನಿಸುವಷ್ಟು ಭಾರವಾದ ಹೃದಯದೊಂದಿಗೆ ವಿದಾಯ ಹೇಳಬೇಕಾಯಿತು.

ನೀವುಗಳು ನೀಡಿದ ಪ್ರೀತಿ ಗೌರವಾತಿಥ್ಯಕ್ಕೆ ಸದಾ ಚಿರಋಣಿ. ಈ ಪ್ರೀತಿ ವಿಶ್ವಾಸ ಸದಾ ಹೀಗೇ ಇರಲಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »