TOP STORIES:

FOLLOW US

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು.

ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು.

ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.ಈ ಸಂಘಟನೆಯ ಒಂದಿಬ್ಬರ ಪರಿಚಯ ಬಿಟ್ಟರೆ ಉಳಿದವರಿಗೆ ನಾನು ಅಪರಿಚಿತ ಆದರೆ ನಾನು ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ನನಗೆ ನೀಡಿದ ಸ್ವಾಗತ, ಗೌರವ, ಪ್ರೀತಿಯ ಆತಿಥ್ಯ ಮುಕ್ತ ಮಾತುಕತೆ ಇವೆಲ್ಲವೂ ನನ್ನನ್ನು ಭಾವಪರವಶನನ್ನಾಗಿಸಿತು.

ಕಾರ್ಯಕ್ರಮದ ಬಳಿಕ ಸಮಾಜದ ಅಭಿವೃದ್ಧಿ ಯ ಬಗ್ಗೆ ಒಂದಿಷ್ಟು ವಿಚಾರ ವಿನಿಮಯ ನಡೆಯಿತು. ಜೀವನ ನಿರ್ವಹಣೆ ಗಾಗಿ ಜನ್ಮಭೂಮಿಯಿಂದ( ಭಾರತ) ಕರ್ಮಭೂಮಿಗೆ ( ದುಬೈ )ಆಗಮಿಸಿ ಇಲ್ಲಿ ಬಿಡುವಿಲ್ಲದ ಕರ್ತವ್ಯ ದ ಒತ್ತಡ ದ ನಡುವೆಯೂ ಸಮುದಾಯದ ವರನ್ನು ಒಗ್ಗೂಡಿಸಿ ಅಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಬಿಲ್ಲವಾಸ್ ಫ್ಯಾಮಿಲಿ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ.

ಕೆಲವೇ ಸಮಯ ಜತೆಗೆ ಕಳೆದರೂ ನಾನೂ ಈ ಕುಟುಂಬ ದ ಸದಸ್ಯರಲ್ಲಿ ಓರ್ವ ಎಂಬಂತೆ ಭಾಸವಾಯಿತು. ಮುಜುಗರ ದಿಂದ ಕಾರ್ಯಕ್ರಮ ಕ್ಕೆ ಹೋದ ನಾನು ನನ್ನ ಕುಟುಂಬವನ್ನೇ ಬಿಟ್ಟು ಬರುತ್ತಿರುವೇನೋ ಅನ್ನಿಸುವಷ್ಟು ಭಾರವಾದ ಹೃದಯದೊಂದಿಗೆ ವಿದಾಯ ಹೇಳಬೇಕಾಯಿತು.

ನೀವುಗಳು ನೀಡಿದ ಪ್ರೀತಿ ಗೌರವಾತಿಥ್ಯಕ್ಕೆ ಸದಾ ಚಿರಋಣಿ. ಈ ಪ್ರೀತಿ ವಿಶ್ವಾಸ ಸದಾ ಹೀಗೇ ಇರಲಿ.


Share:

More Posts

Category

Send Us A Message

Related Posts

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share       ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »