TOP STORIES:

FOLLOW US

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Share:

More Posts

Category

Send Us A Message

Related Posts

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »