TOP STORIES:

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »