TOP STORIES:

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ ಸಮಯದಲ್ಲಿ ಈ ರೀತಿಯಾದಾಗ ಏನು ಮಾಡಬೇಕು? ಅದಕ್ಕೂ ಮೊದಲು ಈ ರೀತಿ ಬಿಕ್ಕಳಿಕೆ ಏಕೆ ಬರುತ್ತದೆ (Hiccups Causes)? ಅದಕ್ಕೆ ಕಾರಣವೇನು? ಇದನ್ನು ಕಡಿಮೆ ಮಾಡಲು ಯಾವ ರೀತಿ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.

ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.

ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.

ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »