ಕನ್ನಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ಜೂನ್ 18,2025 ರಂದು, ಬೆಂಗಳೂರಿನಲ್ಲಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ,ಮಾತುಕತೆ ನಡೆಸಿದರು.
ಈ ವೇಳೆ, ಕನ್ನಡ ಭವನದಲ್ಲಿ ನಡೆಸುತ್ತಿರುವ ವಿವಿಧ ಕನ್ನಡಪರ ಚಟುವಟಿಕೆಗಳು ಹಾಗೂ ಅಲ್ಲಿನ ಕನ್ನಡಿಗರಿಗೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಬಲವನ್ನು ನೀಡುವ ಸಂಘದ ಧ್ಯೇಯೋದ್ದೇಶಗಳನ್ನು ಪ್ರಸ್ತುತಪಡಿಸಿದರು.
ಡಾ. ಆರತಿ ಕೃಷ್ಣ ಅವರು ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಂಘ ಬಹರೈನ್ ಹಮ್ಮಿಕೊಂಡಿರುವ ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳಿಗೆ, ವಿಶೇಷವಾಗಿ ಕನ್ನಡ ಭವನದ ಸೌಕರ್ಯಗಳ ಅಭಿವೃದ್ಧಿ ಯೋಜನೆಗೆ ಹಾಗೂ ಅನಿವಾಸಿ ಕನ್ನಡಿಗರ ಹಿತಾಸಕ್ತಿಗೆ ತನ್ನ ಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.