TOP STORIES:

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಅವರು ಭಾಜನರಾಗಿದ್ದಾರೆ.

ಬೆಂಗಳೂರಿನ ಡಿ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ವೈದ್ಯಲೋಕದಲ್ಲಿ ಸೇವೆ ಸಲ್ಲಿಸಿದ ಅಪ್ರತಿಮ ಸಾಧಕರಿಗೆ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಚಿವ ಭೈರತಿ ಸುರೇಶ್‌, ಮಾಜಿ ಸಚಿವ ಡಾ.ಕೆ ಸುಧಾಕರ್‌, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಮಣಿಪಾಲ್ ಸಮೂಹ ಆಸ್ಪತ್ರೆ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್‌, ಪ್ರದಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ ಇದ್ದರು.

ಆರೋಗ್ಯ ಕ್ಷೇತ್ರದಲ್ಲಿ ‌ಡಾ. ಸದಾನಂದ ಪೂಜಾರಿ ಅವರ ಗಮರ್ನಾಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ ವಿಭಾಗದ ಮುಖ್ಯಸ್ಥರಾಗಿರುವ ಇವರು ಬಡರೋಗಿಗಳ ಜೀವರಕ್ಷಕ ಎಂದೇ ಹೇಳಿದರೂ ತಪ್ಪಗಲಾರದು.

ಡಾ. ಸದಾನಂದ ಪೂಜಾರಿ ಅವರು ಮಂಗಳೂರಿನಲ್ಲಿ ಮೂತ್ರರೋಗ ತಜ್ಞರಾಗಿ ಹೆಸರುವಾಸಿಯಾಗಿದ್ದಾರೆ. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಾರೆ. ಅವರು ಸಮಾಜಮುಖಿ ಸೇವೆಗಾಗಿ ಹೆಸರುವಾಸಿಯಾಗಿದ್ದಾರೆ.

ಡಾ. ಸದಾನಂದ ಪೂಜಾರಿಯವರು ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಮಾಯಿಲಪ್ಪ ಪೂಜಾರಿ ಮತ್ತು ಶ್ರೀಮತಿ ರೇವತಿ ದಂಪತಿಯ ಸುಪುತ್ರನಾಗಿ ಜನಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಮತ್ತು ಪಿ.ಯು.ಸಿ ಶಿಕ್ಷಣವನ್ನು ಎಸ್.ಡಿ.ಯಂ. ಕಾಲೇಜು ಉಜಿರೆಯಲ್ಲಿ ಪೂರೈಸಿ ಮಂಗಳೂರಿನ ಕೆ.ಎಂ.ಸಿ.ಯಲ್ಲಿ ಎಂ.ಬಿ.ಬಿ.ಎಸ್ ಮತ್ತು ಜನರಲ್ ಸರ್ಜರಿಯಲ್ಲಿ ಎಂ.ಎಸ್. ಪದವಿಯನ್ನು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪಡೆದಿದ್ದಾರೆ. ಸೂಪರ್ ಸ್ಪೆಷಲಿಸ್ಟ್ ಎಂಸಿಎಚ್‌ ಯುರಾಲೊಜಿ ಅನ್ನು ಬೆಂಗಳೂರು ಮೆಡಿಕಲ್ ಕಾಲೇಜುನಲ್ಲಿ ಪಡೆದಿರುತ್ತಾರೆ.

ಡಾ. ಸದಾನಂದ ಪೂಜಾರಿ ಅವರು ಈಗಾಗಲೇ 5000 ಕ್ಕಿಂತಲೂ ಹೆಚ್ಚು ಶಸ್ತ್ರ ಚಿಕಿತ್ಸೆಗಳನ್ನು ನಡೆಸಿರುತ್ತಾರೆ. ಇವರ ಸೇವೆಯ ಜೊತೆ ಜೆ.ಸಿ.ಐ ಯಿಂದ ಅತ್ಯುತ್ತಮ ಯಂಗ್ ಇಂಡಿಯನ್ ಅವಾರ್ಡ್. ಕರ್ನಾಟಕ ಸೇವಾ ಪ್ರತಿಷ್ಠಾನದಿಂದ ಸಾಮಾಜಿಕ ಸೇವಾ ಪುರಸ್ಕಾರ, ಪ್ರತಿಷ್ಠಿತ ಐಎಂಎ ಪ್ರಶಸ್ತಿ, ಬೆಸ್ಟ್ ಸರ್ಜನ್ ಅವಾರ್ಡ್ ಹಾಗೂ ಯುವವಾಹಿನಿ, ಲಯನ್ಸ್‌ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »