TOP STORIES:

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಲ್ಲವ ಮುಖಂಡರು, ಸರಕಾರದ ಎಲ್ಲಾ ಮೀಸಲಾತಿ, ಸವಲತ್ತು ಸೌಲಭ್ಯಗಳು ಜನಸಂಖ್ಯೆಯ ಆಧಾರದ ಮೇಲೆಯೇ ನಿರ್ಧಾರ ಆಗುತ್ತದೆ. ನಮ್ಮ ಹೆಸರಿನ ಜೊತೆಗೆ ನಾವು ನಮ್ಮ ‘ಬರಿ’ ನಮೂದಿಸುವ ಪರಿಪಾಠ ಬೆಳೆಸಿಕೊಂಡಿದ್ದರೂ ಜಾತಿ ಎನ್ನುವ ಕಾಲಂನಲ್ಲಿ “ಬಿಲ್ಲವ” ಎಂಬ ಹೆಸರಿನಿಂದಲೇ ಗುರುತಿಸಿಕೊಂಡು ನಮ್ಮ ಸಮಾಜದ ಸರಿಯಾದ ಜನಸಂಖ್ಯೆಯ ಲೆಕ್ಕ ಸಿಗಬೇಕೆಂದು ವಿನಂತಿ ಮಾಡುತ್ತಿದ್ದೇವೆ. ಕಾಂತರಾಜು ಆಯೋಗದ ವರದಿಯಲ್ಲಿ ಸರಕಾರದ ಈಡಿಗ 26 ಪಂಗಡಗಳಲ್ಲಿ ಬಿಲ್ಲವ ಮತ್ತು ಪೂಜಾರಿ ಎಂದು ಎರಡಾಗಿ ಪ್ರತ್ಯೇಕವಾಗಿ ನಮೂದಿಸಿದ್ದರೂ ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಕೆಲವೊಂದು ವ್ಯತ್ಯಾಸಗಳಾಗುವ ಸಾಧ್ಯತೆಗಳೂ ಇವೆ.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮ ನಿಯನ್ (ರಿ.) ಕುದ್ರೋಳಿ ಇದರ ಅಧ್ಯಕ್ಷ ನವೀನ್ ಡಿ. ಡಿ. ಸುವರ್ಣ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ಆಡಳಿತ ಸಮಿತಿ ಅಧ್ಯಕ್ಷ ಯರಾಜ್ ಹೆಚ್. ಸೋಮಸುಂದರಮ್, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಆಡಳಿತ ಸಮಿತಿ ಅಧ್ಯಕ್ಷ ಮಹೇಶ್‌ ಅಂಚನ್, ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಬಿಲ್ಲವರ ಒಕ್ಕೂಟ, ಚಿಕ್ಕಮಗಳೂರು ಅಧ್ಯಕ್ಷ ಹೆಚ್.ಎಂ. ಸತೀಶ್, ಬಿಲ್ಲವ ಸಮಾಜ ಸೇವಾ ಸಂಘ, ಬ್ರಹ್ಮಾವರ, ಉಡುಪಿ , ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ನಾರಾಯಣಗುರು ಅರ್ಬನ್ ಕೋ.ಆಪ್. ಬ್ಯಾಂಕ್ ಲಿ. ಚೆರ್‌ಮೆನ್ ಹರಿಶ್ಚಂದ್ರ ಅಮೀನ್, ಪರಮೇಶ್ವರ ಪೂಜಾರಿ ಮಂಗಳೂರು ಉಪಸ್ಥಿತರಿದ್ದರು


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »