TOP STORIES:

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ ಮತ್ತು ಸಹಕಾರದ ಜೀವನವನ್ನು ನಾವು ಅನುಸರಿಸಿಕೊಂಡು ಬಂದಿದ್ದೇವೆ. ಕಾಲಕ್ರಮೇಣ ಪರ ಊರುಗಳು, ಪರ ದೇಶಗಳತ್ತ ತೆರಳಿ, ಅಲ್ಲಿ ಕೂಡಾ ಯಶಸ್ವಿ ಬದುಕನ್ನು ಕಟ್ಟಿಕೊಂಡಿದ್ದೇವೆ.

 

ಈ ಪುಟ್ಟ ದೇಶವಾದ ಓಮಾನ್‌ನಲ್ಲಿಯೂ ನಮ್ಮ ಕೂಟಗಳ ಮುಖೇನ ಒಂದಾಗಿ, ದೈವ,ದೇವಾಲಯ ನಿರ್ಮಾಣದಿಂದ ಹಿಡಿದು ಅನೇಕ ಸಾಮಾಜಿಕ ಹಾಗೂ ಮಾನವೀಯ ಕೊಡುಗೆಗಳ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇವೆ. ದುಡಿದು ಉಳಿಸಿದ ಹಣದಿಂದ ಸಾಧ್ಯವಾದಷ್ಟು ನಮ್ಮವರಿಗೂ, ಅಗತ್ಯವಿರುವ ಬಂಧು-ಮಿತ್ರರಿಗೂ ಆಸರೆಯಾಗುತ್ತಿದ್ದೇವೆ. ಅದರ ಜೊತೆಗೆ, ನಮ್ಮ ಕರ್ಮಭೂಮಿಗೂ ಏನಾದರೂ ನಮ್ಮಿಂದ ಕೊಡುಗೆ ಇರಬೇಕು ಎಂಬ ನಿಟ್ಟಿನಲ್ಲಿ ಕೈಗೊಂಡ ಅತ್ಯಂತ ಮಹತ್ವದ ಸೇವೆಯೇ ರಕ್ತದಾನ ಶಿಬಿರ

 

ಒಂದು ಸಮಯದಲ್ಲಿ ಓಮಾನ್ ನಲ್ಲಿ ರಕ್ತದಾನ ಶಿಬಿರಗಳು ಹೆಚ್ಚಾಗಿ ಭಾರತೀಯ ಸಾಮಾಜಿಕ ಸಂಸ್ಥೆಗಳ ಮೂಲಕ ಅಥವಾ ಕೆಲವು ಕಂಪನಿಗಳ ಸಹಕಾರದಿಂದ ನಡೆಯುತ್ತಿದ್ದವು. ಆ ದಿನಗಳಲ್ಲಿ ಕರ್ನಾಟಕದ ಕಡೆಯಿಂದ, ವಿಶೇಷವಾಗಿ ಸಮುದಾಯಿಕವಾಗಿ ಇಂತಹ ಶಿಬಿರಗಳು ಹೆಚ್ಚಾಗಿ ನಡೆಯುತ್ತಿರಲಿಲ್ಲ. ಆದರೆ 2017ರಲ್ಲಿ ನಮ್ಮ ಬಿಲ್ಲವ ಬಂಧುಗಳು ಒಂದಾಗಿ ಮೊದಲ ಬಾರಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿ, ಸುಮಾರು 65 ಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಭದ್ರವಾದ ಚಾಲನೆ ನೀಡಿದರು.

 

ಅದರ ನಂತರದ ದಿನಗಳಲ್ಲಿ ನಮ್ಮ ಶಿಬಿರಗಳು ಸಾವಿರ ಯುನಿಟ್‌ಗಿಂತಲೂ ಹೆಚ್ಚು ರಕ್ತವನ್ನು ದಾನವಾಗಿ ಓಮನ್ ಬ್ಲಡ್ ಬ್ಯಾಂಕ್ ಗೆ ನೀಡಿರುವುದು ಗಮನಾರ್ಹ ಸಾಧನೆ. ರಕ್ತ ಶೇಖರಣೆ ಕಡಿಮೆಯಾದಾಗ ಅಥವಾ ವಿಶೇಷವಾಗಿ O ಪಾಸಿಟಿವ್ ರಕ್ತದ ಅಗತ್ಯವಿದ್ದ ಸಂದರ್ಭಗಳಲ್ಲಿ, ರಕ್ತ ಬ್ಯಾಂಕ್‌ಗಳಿಂದ ನಮ್ಮನ್ನು ನೇರವಾಗಿ ಸಂಪರ್ಕಿಸುವ ಮಟ್ಟಿಗೆ ನಮ್ಮ ಸೇವೆ ವಿಶ್ವಾಸಾರ್ಹವಾಗಿ ಬೆಳೆದಿದೆ.

 

ನಮ್ಮ ಶಿಬಿರಗಳ ಯಶಸ್ಸನ್ನು ಕಂಡು, ಇತರ ಜಾತಿ ಸಮುದಾಯದ ವರು ಹಾಗೂ ಅನ್ಯ ಧರ್ಮದವರೂ ಕೂಡಾ ನಮ್ಮ ಮಾದರಿಯನ್ನು ಅನುಸರಿಸಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾದರು. ಈ ಮೂಲಕ ನಮ್ಮ ಬಿಲ್ಲವ ಬಂಧುಗಳ ಸೇವೆ ಮಸ್ಕತ್‌ನಲ್ಲಷ್ಟೇ ಅಲ್ಲದೆ ಇತರ ಗಲ್ಫ್ ದೇಶಗಳಲ್ಲಿಯೂ ಪ್ರಶಂಸೆಗೆ ಪಾತ್ರವಾಯಿತು.

 

ರಕ್ತದಾನ ಶಿಬಿರವು ಕೇವಲ ದಾನದ ಕಾರ್ಯಕ್ರಮವಾಗಿರಲಿಲ್ಲ; ಅದು ನಮ್ಮತನದ, ಸೇರಿಕೆಯ ಮತ್ತು ಸಹೋದರತ್ವದ ಸಂಕೇತವಾಗಿತ್ತು. ನೂಲ ಹುಣ್ಣುಮೆಯ ತಿಂಗಳಲ್ಲಿ ನಡೆದ ಶಿಬಿರದಲ್ಲಿ ರಾಕಿ ಕಟ್ಟುವ ಕಾರ್ಯವನ್ನು ಮಾಡಲಾಗಿತ್ತು. ರಕ್ತ ದಾನಿಗಳಗಿ ನಮ್ಮ ಬಿಲ್ಲವ ಮಹಿಳಾ ಬಳಗವು ಪುರುಷರಷ್ಟೆ ಉತ್ಸಾಹ ತೋರಿದರು. ಕೋವಿಡ್‌ ನಂತರದ ಸಮಯದಲ್ಲಿಯೂ ಶಿಬಿರ ಅಯೂಜನೆ ನಡೆದವು ಮಾನವೀಯ ಸಂಬಂಧಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎನ್ನುವ ಸಾರ್ಥಕ ಭಾವನೆ ನಮ್ಮಲ್ಲಿ ಎಂದಿಗೂ…..

ತಾವೂ ಬನ್ನಿ ತಮ್ಮವರ ಕರೆ ತನ್ನಿ ಜೀವ ಉಳಿಸುವ ಕಾರ್ಯಕ್ಕೆ ಜೈ ಎನ್ನಿ.

 

🙏🙏🙏

ಮಾನ್ಯದಲಿ

ಶಿವಾನಂದ ಕೋಟ್ಯಾನ್.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »