ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ.
ಈ ಕುರಿತು ಏಪ್ರಿಲ್ 2ರಂದು ಸರಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಹೊರಬಂದಿದೆ. 2025ರ ಸೆಪ್ಟೆಂಬರ್ನಲ್ಲಿ ನೂತನವಾಗಿ ರಚಿಸಲಾದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ದೊರೆತಿರುವುದು ಅವರ ದೀರ್ಘಕಾಲದ ಪರಿಶ್ರಮಕ್ಕೆ ಸಿಕ್ಕ ಗೌರವವಾಗಿದೆ.
ಕಳೆದ 3 ದಶಕಗಳಿಂದ ನಿರಂತರವಾಗಿ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ಅವರು, ಡೀಮ್ಸ್ ಫಾರೆಸ್ಟ್ ವಿಷಯದಲ್ಲಿ ಜನಪರ ಹೋರಾಟ ನಡೆಸಿ ಜನಮನ ಗೆದ್ದಿದ್ದಾರೆ. ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಸಹಕಾರಿ ಸಂಘವನ್ನು ಸ್ಥಾಪಿಸಿ ಸೇವೆ ಸಲ್ಲಿಸಿರುವುದು ವಿಶೇಷ.
ರಾಜಕೀಯ ಕ್ಷೇತ್ರದ ಜೊತೆಗೆ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿಯೂ ಸಕ್ರಿಯರಾಗಿರುವ ಅವರು, ಎರಡು ಅವಧಿಗೆ ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಬೋರ್ಡ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನುಭವವೂ ಇವರದ್ದಾಗಿದೆ.
ಹೆಬ್ರಿ ತಾಲೂಕು ರಚನೆಗಾಗಿ ನಡೆದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಅವರು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಜೊತೆಗೆ ಹೆಬ್ರಿ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದು ಗಮನಾರ್ಹ.
ಇವರಿಗೆ ದೊರೆತಿರುವ ಈ ಗೌರವ ನಮ್ಮ ಬಿಲ್ಲವ ಸಮಾಜಕ್ಕೆ ಸಿಕ್ಕ ಗೌರವವಾಗಿದ್ದು, ಇನ್ನಷ್ಟು ಜನಪರ ಸೇವೆ ಮಾಡಲು ಅವರಿಗೆ ಶಕ್ತಿ ನೀಡಲಿ ಎಂದು ಹಾರೈಸುತ್ತೇವೆ.
ಹಾರ್ದಿಕ ಅಭಿನಂದನೆಗಳು






