TOP STORIES:

ಸಾಧಕರ ಹಾದಿ ಜೊತೆ ಸ್ವರ್ಣ ಜ್ಯೋತ್ಸ್ನ ಎಮ್ ಮಾಣಿ ಇವರ ಸಾಧನೆಯ ಕಥೆ


ಸಾಧನೆಯ ಹಾದಿಯಲ್ಲಿ ಸಾಗುವುದು ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ವಸ್ವವನ್ನು ಅದಕ್ಕಾಗಿಯೇ ಮುಡಿಪಾಗಿಟ್ಟರೂ ಕಮ್ಮಿನೇ. ತನ್ನ ಸರ್ವಸ್ವವನ್ನೇ ನೃತ್ಯಕ್ಕಾಗಿ ಮುಡಿಪಾಗಿರಿಸಿಕೊಂಡು ಹಂತ ಹಂತ ವಾಗಿ ಬೆಳೆಯುತ್ತಿರುವ ಪ್ರತಿಭೆಯೇ ಈ ಸ್ವರ್ಣ ಜ್ಯೋತ್ಸ್ನಾ.


ಇವರು ಶ್ರೀಮತಿ  ರಮಾ ಮತ್ತು ಶ್ರೀ ದಿ| ಅಶೋಕ ಪೂಜಾರಿ ದಂಪತಿಗಳ ಒಬ್ಬಳೇ ಮಗಳಾಗಿ 23/05/2000ದಂದು ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಜನ್ಮ ಪಡೆದರು. ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಣಿ, ಪ್ರೌಢ ಶಿಕ್ಷಣವನ್ನು ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು, ಪುತ್ತೂರು ಇಲ್ಲಿ ಹಾಗೂ ಫ್ಯಾಷನ್ ಡಿಸೈನಿಂಗನ್ನು ಪುತ್ತೂರು ಗ್ಲೋರಿಯಾ ಕಾಲೇಜ್ ಆಫ್ ಫ್ಯಾಷನ್ ಡಿಸೈನಿಂಗ್ ನಲ್ಲಿ Bsc ಪದವೀಧರೆಯಾಗಿದ್ದಾರೆ.

ಬಾಲ್ಯದಿಂದಲೇ ಈಕೆ ನೃತ್ಯ ಪ್ರವೀಣೆ. ತನ್ನ 2 ವರ್ಷ 9 ತಿಂಗಳು ಮಗುವಿನಿಂದಲೇ ಮೊದಲ ವೇದಿಕೆ ಏರಿದರು. ಸಾಧನೆಯ ಹಾದಿ  2500ಕ್ಕೂ ಹೆಚ್ಚು ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿರುತ್ತಾರೆ. ದಕ್ಷಿಣ ಕನ್ನಡ, ತುಮಕೂರು, ಬೆಂಗಳೂರು ಹೀಗೆ ಕರ್ನಾಟಕದಾದ್ಯಂತ ನೃತ್ಯ ಪ್ರದರ್ಶನ ನೀಡಿರುತ್ತಾರೆ. ಮನೆಯಲ್ಲಿ ತೀರಾ ಬಡತನ ಇದ್ದರೂ ಇವರ ಛಲ ಸಾಧನೆಯಲ್ಲಿ ಕಡಿಮೆಯಿಲ್ಲ. ಇವರ ತಂದೆ ತಾಯಿ ಪ್ರೀತಿಸಿ ಮದುವೆಯಾಗಿದ್ದರು. ಮೊದ ಮೊದಲು ಜೀವನ ಸುಖವಾಗಿಯೇ ಇತ್ತು. ಆದರೆ, ತಂದೆಯ ತೀರಾ ಕುಡುಕತನ ನೆಮ್ಮದಿಯ ಜೀವನಕ್ಕೆ ಅಡಿಗಾಲಾಯಿತು. ತನ್ನ ತಾಯಿಗೆ ನೃತ್ಯ ಕಲೆ ತುಂಬಾ ಇಷ್ಟ. ಅದೇ ರೀತಿ ತನ್ನ ಒಬ್ಬಳೇ ಮಗಳನ್ನು ನೃತ್ಯ ಪ್ರವೀಣೆಯನ್ನಾಗಿಸಬೇಕು ಎಂಬ ಬಹುದೊಡ್ಡ ಕನಸು. ಇವರು ಕೂಡ ನೃತ್ಯ ಎಂದರೆ ಹಾಡು ಕೇಳಿದಾಗಲೆಲ್ಲ ಕುಣಿದಾಡುತ್ತಿದ್ದರು. ನೃತ್ಯ ತರಬೇತಿಗೆ ಸೇರಿಸೋಣ ಎಂದರೆ, ಆರ್ಥಿಕವಾಗಿ ಹಿಂದುಳಿದಿರುವುದಲ್ಲದೆ ತಂದೆಯ ಪ್ರೋತ್ಸಾಹವೂ ಸಿಗದಾಗಿತ್ತು. ಛಲ ಬಿಡದ ತಾಯಿ ತಾನು ಬಟ್ಟೆ ಹೊಲಿದು ಸಂಪಾದಿಸಿದ ಹಣದಲ್ಲಿ ಇವರನ್ನು ಚಿಕ್ಕ ಮಗುವಿನಲ್ಲೇ ಕದ್ದುಮುಚ್ಚಿ ನೃತ್ಯ ತರಬೇತಿಗೆ ಕಳುಹಿಸುತ್ತಾರೆ. ಇದು ತಂದೆಗೆ ಗೊತ್ತಾಗಿ ದೊಡ್ಡ ಜಗಳವೇ ಆಗುತ್ತದೆ. ಆದರೆ ತಾಯಿ ಎದೆಗುಂದದೆ ಮತ್ತೆ ಮಗಳಿಗೆ ಬೇಕಾದ ಪ್ರೋತ್ಸಾಹವನ್ನು ಧಾರೆ ಎರೆಯುತ್ತಾರೆ. ಇವರಿಗೆ ಒಂದೊಂದಾಗಿ ವೇದಿಕೆ ಸಿಗಲು ಶುರುವಾಯಿತು. ತಂದೆ ಯಾವುದೇ ಕಾರ್ಯಕ್ರಮಕ್ಕೆ ಹೋಗಲು ಬಿಡುತ್ತಿರಲಿಲ್ಲ. ಆದರೂ ಕನಸಿನ ಕೂಸನ್ನು ಇಬ್ಬರೂ ಬಿಡಲಾಗದೆ ಹಲವಾರು ವೆದಿಕೆಗಳಲ್ಲಿ ಮನರಂಜನೆ ನೀಡುತ್ತಾರೆ. ಇವರ ನೃತ್ಯವನ್ನು ನೋಡುತ್ತಾ ತಾಯಿಯ ಆ ಖುಷಿಗೆ ಮಿತಿಯೇ ಇರುತ್ತಿರಲಿಲ್ಲ. ಆದರೆ, ಕಾರ್ಯಕ್ರಮ ಮುಗಿದು ಮನೆಗೆ ಬಂದರೆ ತಂದೆ ಚಿಲಕ ಹಾಕಿಕೊಂಡು ಮಲಗಿರುತ್ತಾರೆ. ಎಷ್ಟೇ ಕೂಗಿದರೂ ಎಚ್ಚರವಾಗದಂತೆ ಮಲಗುತ್ತಿದ್ದರು. ತಾಯಿ ಮತ್ತು ಮಗಳು ಇಬ್ಬರೂ ಹೊರಗಡೆನೇ ಮಲಗಿ ಬೆಳಗಾಗಿಸುವ ಪರಿಸ್ಥಿತಿ. ಅದೆಷ್ಟೋ ಬಾರಿ ಹೀಗೆ ಅನುಭವಿಸಿದ್ದಾರೆ. ಅದಕ್ಕೆ ಸರಿಯಾಗಿ ಊರವರ ಕೀಳು ಮಾತುಗಳು. ಒಬ್ಬ ಬಡ ಹೆಣ್ಣುಮಗಳು ಸಾಧನೆಯ ಕನಸು ಕಂಡರೆ ನೋಡೋರೆಲ್ಲ ಹೀಗೇ ಏನೆನೋ ಅರ್ಥಗಳನ್ನು ಕಲ್ಪಿಸಿ ಕೊಡುವುದು ಈ ಸಮಾಜದ ಕೆಟ್ಟ ಚಟ ಅನ್ನಬಹುದು. ಹೀಗೆ ತಂದೆ ಜಗಳ ಆಡಿ ಆಡಿ ಕುಡಿದು ಕುಡಿದೇ ಒಂದು ದಿನ ಕೊನೆಯುಸಿರೆಳೆದರು. ಇವರ ಬಾಲ್ಯದಿಂದಲೂ ಬಂದ ಈ ಕಷ್ಟಗಳನ್ನು ನೆನೆಸಿಕೊಂಡರೆ ಯಾವ ಸಾಧನೆಯೂ ಬೇಡ ಅನ್ನುವ ರೀತಿ ಇತ್ತು. ಆದರೆ, ತಾಯಿಯ ಛಲದಿಂದ ಮಗಳು ಕೂಡ ಛಲ ಬಿಡದೆ ಕಷ್ಟಗಳನ್ನು ಕಣ್ಣೀರಲ್ಲಿ ಆಚೆಗೆರೆದು ಜಯಶಾಲಿಯಾಗಿ ನಿಂತಿದ್ದಾರೆ.

ಶಿಕ್ಷಣದ ವಿಷಯಕ್ಕೆ ಬಂದರೆ, ಇವರು 95% ಅಂಕಗಳಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿನಿ. ಇವರ ಅರ್ಧದಷ್ಟು ವಿದ್ಯಾಭ್ಯಾಸದ ಖರ್ಚನ್ನು ಖ್ಯಾತ ಉದ್ಯಮಿ “ಜಯಂತ್ ನಡುಬೈಲು” ಇವರು ಬರಿಸಿದ್ದಾರೆ ಅನ್ನೋದು ಇವರಿಗೆ ಖುಷಿಯ ವಿಚಾರ. ಹಾಗೇ ಇನ್ನಿತರ ಹಲವಾರು ಸಂಘ ಸಂಸ್ಥೆಗಳು ಆ ರೀತಿ  ಈ ರೀತಿ ಸಹಾಯ ಮಾಡ್ತೀವಿ ಅಂತ ನಾಲ್ಕು ಜನರ ಎದುರು ಹೇಳಿದ್ದಲ್ಲದೆ ಏನೂ ಸಹಾಯ ಮಾಡಿಲ್ಲ ಅನ್ನೋದು ಇವರಿಗೆ ಬೇಸರ ತಂದಿದೆ. ಇವರು ಯಾವುದೇ ಕಾರ್ಯಕ್ರಮಕ್ಕೆ ಇಂತಿಷ್ಟೇ ಸಂಭಾಷಣೆಗಳನ್ನು ಕೊಡಿ ಅಂತ ಕೇಳದೆ, ಬಂದ ಅವಕಾಶಗಳನ್ನು ತಿರಸ್ಕರಿಸಿದೆ, ಇಷ್ಟದಿಂದ ಭರತನಾಟ್ಯ ಪ್ರದರ್ಶನ ಕೊಡುತ್ತಿದ್ದರು. ಅವರು ಕೊಟ್ಟರೆ ಸಂಭಾವನೆ ತಗೋತಿದ್ರು. ಇಲ್ಲಾಂದ್ರೆ ಅವರು ಕೊಟ್ಟ ಗೌರವ ಕಾಣಿಕೆ ಹಿಡ್ಕೊಂಡು ಹಿಂದೆ ಬರ್ತಾ ಇದ್ರು. ಇಂತಹ ನೋವು ಅದೆಷ್ಟೋ ಕಲಾವಿದರು ಅನುಭವಿಸಿರುತ್ತಾರೆ. ಯಾವುದೇ ಸಂಘ ಸಂಸ್ಥೆಗಳಾಗಲಿ ಈ ರೀತಿ ಬಿಟ್ಟಿಯಾಗಿ ಕಲಾವಿದರನ್ನು ಬಳಸಿಕೊಂಡಾಗ ಸ್ವಲ್ಪ ಯೋಚನೆ ಮಾಡಿ. ಕಲಾವಿದರ ಜೀವನವೇ ಅವರ ಕಲೆಯಲ್ಲಿ ಆಧಾರಿತವಾಗಿ ಇರುತ್ತದೆ.

ಇವರು ವೇದಿಕೆಗೆ ಬಂದು ಭರತನಾಟ್ಯ ಪ್ರದರ್ಶನ ಕೊಡುತ್ತಿದ್ದರೆ ಸಿಲ್ಲೆ ಚಪ್ಪಾಳೆಗಳಿಗೆ ಕೊರತೆಯೇ ಇಲ್ಲ. ಯಾಕೆಂದ್ರೆ, ಇವರ ನಾಟ್ಯ ಶೈಲಿ ಜನರನ್ನು ಹುಬ್ಬೇರಿಸುವಂತೆ ಮಾಡುತ್ತದೆ. ಅದಕ್ಕಾಗಿ ಇವರಿಗೆ ಸಂದ ಬಿರುದುಗಳು, ಕಲಾ ಜ್ಯೋತಿ, ಸಿರಿ ಗನ್ನಡ, ಪ್ರತಿಭಾ ಸಂಪನ್ನ, ಕಲಾ ಸರಸ್ವತಿ. ಅಲ್ಲದೆ ಡೆನ್ನಾನ ಡೆನ್ನಾನ ಎಂಬ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೇಷ್ಠ ಕಲಾವಿದೆಯೆಂದು ಸನ್ಮಾನ ಪಡೆದಿರುತ್ತಾರೆ. ಭರತ ನಾಟ್ಯವನ್ನು “ಸುದರ್ಶನ್ ಭಟ್” ಹಾಗೂ ಸಂಗೀತವನ್ನು “ಶ್ಯಾಮಲಾ ಕುಂಟೂರು” ಇವರಿಂದ  ಕಲಿತು ಪ್ರಾಥಮಿಕ ಶಾಲಾ ಶಿಕ್ಷಕಿ “ಗೀತಾ ನಾರಾಯಣ್” ಬೆನ್ನೆಲುಬಾಗಿ ನಿಂತಿದ್ದು ಇವರ ಖುಷಿಗೆ ಕಾರಣವಾಗಿದೆ ಮತ್ತು ಇವರ ತಾಯಿಯೇ ಇವರ ಎಲ್ಲಾ ಕೆಲಸಗಳಿಗೆ ರೋಲ್ ಮಾಡೆಲ್.

ಇವರಿಗೆ ನೃತ್ಯ, ಹಾಡು ಎಂದರೆ ಎಲ್ಲಿಲ್ಲದ ಪ್ರೀತಿ. ತಾನು ಸದಾ ಅದರ ನೆರಳಲ್ಲೇ ಬದುಕುವ ದೊಡ್ಡ ಕನಸನ್ನು ಹೊಂದಿರುವ ಈ ಬಾಲಿಕೆಗೆ ಇನ್ನಷ್ಟು ಹತ್ತು ಹಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವಂತೆ ದೇವರು ಕರುಣಿಸಲಿ. ಇವರ ಜೀವನ ಎಂದಿಗೂ ಸಂತೋಷದಿಂದ ಕೂಡಿ, ನಾಲ್ಕು ಜನರ ಪ್ರೀತಿಯಿಂದ ಬದುಕಲಿ ಎಂದು ಆಶಿಸೋಣ.

ನಮ್ಮ ಕಲಾವಿದರು ನಮ್ಮ ಹೆಮ್ಮೆ
✒ #ಸಾಯಿ_ದೀಕ್ಷಿತ್_ಪುತ್ತೂರು


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »