TOP STORIES:

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ


ಮಂಗಳೂರು: ಮಂಗಳೂರಿನ ಬೊಂಡಂತ್ತಿಲ ಗ್ರಾಮದ ಸಂಜೀವ ಕೊಟ್ಯಾನ್ ಮತ್ತು ಯಶೋದ ದಂಪತಿಗಳ ಕೊನೆಯ ಪುತ್ರಿಯಾಗಿ 26/4/1993 ರಲ್ಲಿ ಜನಿಸಿದರು. ನಾಲ್ಕು ಸಹೋದರಿಯ ಪ್ರೀತಿಯ ತಂಗಿಯಾಗಿರುವ ಇವರದ್ದು ಚಿಕ್ಕ ಮತ್ತು ಚೊಕ್ಕದಾದ ಸಂಸಾರ.

ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲೆ ಬೊಂಡಂತ್ತಿಲ,ಪ್ರೌಢ ವಿದ್ಯಾಭ್ಯಾಸವನ್ನು ಸಂತ ಜೆರೋಸ ಬಾಲಕಿಯರ ಪ್ರೌಢಶಾಲೆ ಜೆಪ್ಪು ಹಾಗೂ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು,ಕಾರ್ಸ್ರ್ಟಿಟ್ ಹಾಗೂ ಪದವಿಯನ್ನು ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಗೊಕಾರ್ಣಥೇಶ್ವರ ಕಾಲೇಜು,ಮಂಗಳೂರಿನಲ್ಲಿ ಮಾಡಿರುತ್ತಾರೆ.ಪ್ರಸ್ತುತ ಸ್ಪರ್ಶ್ ರಿಸ್ಕ್ ಮ್ಯಾನೇಜರ್ ಕಂಪೆನಿಯಲ್ಲಿ ಸ್ಟಾಪ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ…

ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಇವರು ಹಲವು ಪ್ರಶಸ್ತಿಗಳನ್ನು ತನ್ನಗಾಗಿಸಿದ್ದಾರೆ.ಓಟದಲ್ಲಿ ಮುಂದು ಇದ್ದ ಇವರು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದರೆ. ಹಲವು ಸಂಸ್ಥೆಗಳು ಏರ್ಪಡಿಸಿದ್ದ ಕ್ರೀಡೆಯಲ್ಲಿ ಭಾಗವಹಿಸಿದ ಇವರು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡಿದ್ದಾರೆ. ‘ಯುವವಾಹಿನಿ’ ನಡೆಸಿದ ‘ಕ್ರೀಡಾಕೂಟ-2020’ ರಲ್ಲಿ ಓಟದ ವಿಭಾಗದಲ್ಲಿ ವಿಜೇತರಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ..

ಕೇವಲ ಕ್ರೀಡ ಕ್ಷೇತ್ರದಲ್ಲಿ ಅಲ್ಲದೇ ಸಾಂಸ್ಕೃತಿಕ ಕ್ಷೇತ್ರದಲ್ಲು ತನ್ನ ಪ್ರತಿಭೆಯನ್ನು ಮುಂದುವರಿಸಿರುವ ಇವರು ಕಾಲೇಜಿನಲ್ಲಿ ಇರುವಾಗಲೇ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸೈ ಎನಿಸಿಕೊಂಡವರು ಇವರು.ತನ್ನ ಅದ್ಭುತ ಸ್ವರದಿಂದ ಮನೆಮಾತಗಿರುವ ಇವರು ಹಲವು ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. ಇವರು ಮಾಡಿರುವ ಪ್ರಥಮ ಆಲ್ಬಮ್ ಸಾಂಗ್ನಲ್ಲೆ ಎಲ್ಲರ ಮೆಚ್ಚುಗೆ ಪಾತ್ರರಾದರು. *’ಕುಡ್ಲ ತುಳು ಕವರ್’* ಟೈಟಲ್ ನಲ್ಲಿ ಮೂಡಿಬಂದ *’ಮುಕ್ಕಬುಲಾ….ಮುಕ್ಕಬುಲಾ..’* ತಮಿಳು ಸಾಂಗ್ ಸೈಲಿಯ *’ಮೈಕಾಳ… ಕೊಡಿಯಾಳ…ಕುಡ್ಲ..’* ಎನ್ನುವ ತುಳು ಆಲ್ಬಮ್ ಸಾಂಗ್ ಗೆ ಧ್ವನಿಯಾಗಿ ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದಿದ್ದಾರೆ ಮತ್ತು ಈ ಆಲ್ಬಮ್ ಸಾಂಗ್ ಕೇವಲ ಒಂದು ದಿನದಲ್ಲಿ ಒಂದು ಲಕ್ಷಕ್ಕೂ ಮೀರಿ ವೀಕ್ಷಣೆಯಾಗಿರುವುದು ಇವರ ಗಾಯನಕ್ಕೆ ದೊಡ್ಡ ಹೆಜ್ಜೆಯನ್ನು ತಂದುಕೊಟ್ಟಿತ್ತು.ತದನಂತರ *’ಅಪ್ಪೆನ ಸಿರಿಪಾದ’* ತುಳು ಸ್ಟೇಟಸ್ ಸಾಂಗ್ ಮತ್ತು ಇತ್ತೀಚಿಗೆ ಬಿಡುಗಡೆಯಾದ *’Exam ಉಂಡೆ?’* ಎಂಬ ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. *’ಅಮ್ಮ ಕಟೀಲೇಶ್ವರಿ’…* ತುಳು ಭಕ್ತಿಗೀತೆ ಆಲ್ಬಮ್ ಸಾಂಗ್ ನಲ್ಲಿ ಹಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿರುತ್ತಾರೆ. *ಸ.ರಿ.ಗ.ಮ.ಪ ವಿಡಿಯೋ ಆಲ್ಬಮ್ ಅವಾರ್ಡ್ 2019* ರವರು ನಡೆಸಿದ ಸ್ಪರ್ಧೆಯಲ್ಲಿ *ಬೆಸ್ಟ್ ಫಿಮೇಲ್ ಸಿಂಗರ್* ಅವಾರ್ಡ್ ನ್ನು ಪಡೆದುಕೊಂಡಿರುವುದು ಇವರು ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸ್ಪೂರ್ತಿಯಾಗಿದೆ ಹಾಗೂ ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಗಾಯಕಿಯಾಗಿಯೂ ಹೊರಹೊಮ್ಮಿದ್ದಾರೆ. ಇಷ್ಟೇ ಅಲ್ಲದೆ *’ಮನಸ್ಸ್ ದ ಪಾತೆರ’* ಎನ್ನುವ ತುಳು ಕಿರುಚಿತ್ರದಲ್ಲಿ ಬಣ್ಣ ಹಚ್ಚಿ ನಟನೆ ಕ್ಷೇತ್ರದಲ್ಲು ತನ್ನನ್ನು ತಾನು ತೊಡಗಿಸಿಕೊಂಡು ಮುನ್ನುಗ್ಗುತ್ತಿರುವ ಬಹುಮುಖ ಪ್ರತಿಭೆ.

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ನಿಮ್ಮ ಗಾಯನವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಅರಸಿಬರಲಿ ಎನ್ನುವ ಶುಭಾಶಯಗಳೊಂದಿಗೆ,ಗಾಯನ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ, ಆರ್ಶಿವಾದಿಸೋಣ ಎನ್ನುವ ಕೋರಿಕೆ.

Credits: ರಾಜೇಶ್ ಎಸ್ ಬಲ್ಯ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »