TOP STORIES:

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ


ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ ದೈವಗಳು. ಅದೆಷ್ಟೋ ಕಾಲದ ಹೊಡೆತಕ್ಕೆ ಮಣ್ಣಿನಡಿಗೆ ಸೇರಿದ ದೈವಸ್ಥಾನಗಳು ಕೂಡ ಕಾಲ ಬಂದಾಗ ತಮ್ಮ ಇರುವಿಕೆಯನ್ನು ತೋರಿಸಿ ತಮಗೆ ಬೇಕಾದ ಸ್ಥಾನಮಾನಗಳನ್ನು ಕಟ್ಟಿಸಿಕೊಂಡು ನಂಬಿದವರಿಗೆ ಇಂಬುಕೊಟ್ಟವರು.

ಇಂತಹ ದೈವಾರಾಧನೆಯಲ್ಲಿ ಗರಡಿಗಳು ಕೂಡ ಕಾಯ ಬಿಟ್ಟು ಮಾಯ ಸೇರಿದ ಅವಳಿ ಕಾರಣೀಕ ಪುರುಷರ ಆರಾಧನ ಕೇಂದ್ರ. ಪ್ರಸ್ಥುತ 250 ಮಿಕ್ಕಿ ಗರಡಿಗಳು ಇದ್ದರು ಕೂಡ ಕೆಲವು ಗರಡಿಗಳು ಮಣ್ಣಿನ ಅಡಿಯಲ್ಲಿ ಜೀರ್ಣಾವಸ್ಥೆಯಲ್ಲಿ ಇದೆ. ಹೆಸರಿಗೆ ಮಾತ್ರ ಲೆಕ್ಕದಲ್ಲಿ ಇದೆ. ಅಂತಹುದೇ ಗರಡಿಗಳಲ್ಲಿ ಮೈಂದಡಿ ಗರಡಿಯು ಒಂದು. ಶ್ರೀ ಕ್ಷೇತ್ರ ಕಟೀಲಿಗೆ ಹೋಗುವ ದಾರಿಯಲ್ಲಿ ಸಿಗುವ ನಿಡ್ಡೋಡಿ ಎಂಬ ಗ್ರಾಮದಲ್ಲಿ ಮೈಂದಡಿ ಎನ್ನುವ ಪುಟ್ಟ ಊರು. ಹಸಿರು ಕಾಂತಿಯಿಂದ ಈ ಹಳ್ಳಿ ಕಂಗೊಳಿಸುತ್ತಾ ಇದ್ದು ಎಲ್ಲರು ನೆಮ್ಮದಿಯಿಂದ ಒಟ್ಟಾಗಿ ಜೀವಿಸುತ್ತಿರುವ ಊರು. ಕಾಲದ ಹೊಡೆತಕ್ಕೆ ಸಿಕ್ಕಿ ಈ ಹಿಂದೆ ವಿಜೃಂಭಣೆಯಿಂದ ನಡೆಯುತ್ತಿದ್ದ ಗರಡಿ ಜಾತ್ರೆ ಕಾಲಗರ್ಭದಲ್ಲಿ ಹುದುಗಿ ಹೋಗಿದೆ. 66 ಗರಡಿ 33 ತಾವುಗಳೆಂಬ ನಾಣ್ಣುಡಿಯಂತೆ ಈ ಗರಡಿಯು ಕೂಡ 66 ಗರಡಿಯಲ್ಲಿ ಸೇರಿರಬಹುದೆಂಬ ನಂಬಿಕೆಯಿದೆ. ಇಲ್ಲಿ ಅಳಿದು ಉಳಿದಿರುವ ಶಕ್ತಿ ಕಲ್ಲು, ದಂಬೆ ಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಇವೆಲ್ಲ ಇದಕ್ಕೆ ಸಾಕ್ಷಿಯೆಂಬಂತೆ ಇದೆ. ಸುಮಾರು 150 ವರ್ಪಗಳ ಹಿಂದೆ ಬಹು ಸಡಗರದಿಂದ ನಡೆಯುತ್ತಿದ್ದ ನೇಮೋತ್ಸವವು ಯಾಕಾಗಿ ನಿಂತಿದೆ ಎನ್ನುವ ಮಾಹಿತಿ ಯಾರಿಗೂ ಇಲ್ಲ. ನೋಡಿದ ಕೇಳಿದ ಜನರು ಇರಲು ಸಾಧ್ಯವಿಲ್ಲ. ಆದರೆ 5 ಕಡೆಗಳಿಂದ ದೈವಗಳು ಮತ್ತು ಬೈದೇರುಗಳ ಭಂಡಾರ ಬಂದು ನೇಮೋತ್ಸವ ಆಗುತ್ತಿದ್ದ ಬಗ್ಗೆ ಅಲ್ಪ ಸ್ವಲ್ಪ ಮಾಹಿತಿಯಿದೆ. ಭಾವದ ಮನೆಯಿಂದ ಕೊಡಮಂದಾಯ ದೈವದ ಭಂಡಾರ, ಪಾತ್ರಬೈಲು ಮನೆಯಿಂದ ಸರಳ ಜುಮಾದಿ ಭಂಡಾರ, ಮಚ್ಚಾರು ಮನೆಯಿಂದ ಬೈದೇರುಗಳ ಭಂಡಾರ, ನಂದೊಟ್ಟು ಮನೆಯಿಂದ ಕಾಂತೇರ್ ಜುಮಾದಿ ಭಂಡಾರ ಮತ್ತು ಇನ್ನೊಂದು ಕಡೆಯಿಂದ ಜಾರಂದಾಯನ ಭಂಡಾರ ಮೈಂದಡಿ ಎನ್ನುವ ಸ್ಥಳದಲ್ಲಿ ಇರುವ ದೈವಸ್ಥಾನಕ್ಕೆ ಮತ್ತು ಗರಡಿಗೆ ಒಟ್ಟಾಗಿ ಬಂದು ಧ್ವಜಾರೋಹಣ ಆಗಿ ನೇಮೋತ್ಸವ ಆಗುತ್ತಿತ್ತಂತೆ. ಇಡೀ ಊರಿಗೆ ಇದು ಜಾತ್ರೆ. ಗ್ರಾಮಸ್ಥರು ಎಲ್ಲರು ಒಟ್ಟಾಗಿ ದೈವಗಳ ಮತ್ತು ಬೈದೇರುಗಳ ಭಂಡಾರ ಮನೆಯವರ ಮುಂದಾಳತ್ವದಲ್ಲಿ ನಡೆಸುತ್ತಿದ್ದರಂತೆ. ಆದರೆ ಯಾವುದೋ ಒಂದು ವಿಷ ಗಳಿಗೆಯಲ್ಲಿ ಎಲ್ಲವು ನಿಂತು ಹೋಗಿ ಮೈಂದಡಿಯಲ್ಲಿರುವ ದೈವಸ್ಥಾನ ಮತ್ತು ಗರಡಿ ಧರಶಾಹಿಯಾಗಿದೆ. ಈ ಬಗ್ಗೆ ಊರಿನ ಸಂಬಂಧಪಟ್ಟವರಿಂದ ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದ್ದು ಅತೀ ಬೇಗನೆ ಆಗಬಹುದೆಂಬ ನಂಬಿಕೆಯಿದೆ. ಒಂದಂತು ಸತ್ಯ ಯಾವ ಕಾಲಕ್ಕೆ ಯಾವುದು ಆಗಬೇಕೆನ್ನುವುದು ದೈವ ನಿರ್ಣಯ. ದೈವಗಳ ಮತ್ತು ಬೈದೇರುಗಳ ನಿರ್ಣಯ ಯಾವ ರೀತಿ ಇದೆಯೆಂಬುದು ಯಾರಿಗೂ ತಿಳಿದಿಲ್ಲ. ಆದರೆ ಆಗುತ್ತೆ ಎನ್ನುವುದು ಸಾರ್ವಕಾಲಿಕ ಸತ್ಯ. ಗ್ರಾಮಸ್ಥರೆಲ್ಲ ಈ ಬಗ್ಗೆ ಉತ್ಸುಕತೆಯಿಂದ ಕಾಯುತ್ತಿದ್ದು ಎಲ್ಲರು ಒಂದು ಕಡೆ ಸೇರಿ ಈ ಬಗ್ಗೆ ಚರ್ಚಿಸಲು ಮಾತ್ರ ಬಾಕಿಯಿರುತ್ತದೆ. ಇಲ್ಲಿನ‌ ಪಳೆಯುಳಿಕೆಗಳಾದ ದೈವಗಳ ದೈವಸ್ಥಾನ, ಬೈದೇರುಗಳ ಗರಡಿ, ದಂಬೆಕಲ್ಲು, ಶಕ್ತಿಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಹೊರಗಿನಿಂದ ಅಲ್ಪಸ್ವಲ್ಪ ಕಾಣುತ್ತಿದ್ದು ಚಿತ್ರಣವನ್ನು ನೋಡುವಾಗ ಮೈ ರೋಮಾಂಚಣಗೊಳ್ಳುತ್ತದೆ. ಇಂದಿಗೂ ಅಲ್ಲಿರುವ ಶಕ್ತಿಗಳು ಭಕ್ತರ ಬರುವಿಕೆಗೆ ಕಾದಿದೆಯೋ ಎನ್ನುವಂತೆ ಭಾಸವಾಗುತ್ತಿದೆ.

Credits: ನಮ್ಮ ಬಿಲ್ಲವೆರ್


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »