TOP STORIES:

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »