TOP STORIES:

ಡಾ. ಯೋಗೀಶ್ ಕೈರೋಡಿ ಎಂಬ ವಿದ್ವತ್ ಪ್ರತಿಭೆ


ಹುಲ್ಲಿನಷ್ಟು ಸಾಧನೆ ಮಾಡಿ ಬೆಟ್ಟದಷ್ಟು ಪ್ರಚಾರ ಪಡೆಯುವ ಕಾಲವಿದು. ಕೊಡುಗೆಗಿಂತ ಪ್ರಚಾರವೇ ಅಧಿಕವಾದರೆ ಬಹಳ ಕಾಲ ಉಳಿಯದು. ಕೆಲವರದ್ದು ಹಾಗಲ್ಲ, ಅವರ ಕೆಲಸವೇ ಮಾತನಾಡುತ್ತದೆ. ಬಹುಕಾಲ ಉಳಿಯುತ್ತದೆ. ಅಂತಹ ಪ್ರತಿಭಾ ಸಂಪನ್ನ ಡಾ. ಯೋಗೀಶ್ ಕೈರೋಡಿರವರು . ನಾನು ಇವರ ಬಗ್ಗೆ ಬಹುಕಾಲದಿಂದ ಬಲ್ಲೆ. ನಿಮ್ಮ ಬಗ್ಗೆ ಬರೆಯುತ್ತೇನೆಂದಾಗ ಮುಗುಳ್ನಕ್ಕು ನಿರಾಕರಿಸುತ್ತಲೇ, ಬಂದರು. ಕೈರೋಡಿಯವರ ಬಗ್ಗೆ ಬರೆಯಲೇಬೇಕೆಂಬ ತುಡಿತದ ಫಲವೇ ಈ ಲೇಖನ.ಬಹುತೇಕ ಎಲ್ಲರಂತೆ ತುಳು ನಾಟಕ ಯಕ್ಷಗಾನ ನೋಡುತ್ತಲೇ, ವಿದ್ಯಾರ್ಥಿ ಜೀವನ ಸಮೃದ್ಧಗೊಳಿಸಿದವರು. ಸಾಂಪ್ರದಾಯಿಕ ಬೇಸಾಯದ ಗದ್ದೆಯ ಪರಿಮಳ ಅನುಭವಿಸುತ್ತಲೇ, ಬಾಲ್ಯದ ಸವಿ ಉಂಡವರು. ಊರ ಹೃದಯ ಭಾಗದಲ್ಲಿದ್ದ. ತನ್ನ ತಂದೆಯ ಹೊಟೇಲಿಗೆ ಬರುವ ವಿವಿಧ ಭಾವಭಂಗಿ, ಮಾತುಕತೆಗಳ ತಿರುಳು ಸ್ವಾರಸ್ಯದ ಜೀವನ ಶಿಕ್ಷಣದ ತಳಹದಿಯಲ್ಲಿ, ಬೆಳೆದ ಕೈರೋಡಿಯವರ ಪ್ರತಿಭೆಯ ವಿಕಾಸಕ್ಕೆ ವಿಸ್ತಾರ ಅವಕಾಶಗಳು ಒದಗಿಬಂತು.

ತುಳು ನಾಟಕಗಳಲ್ಲಿ ಹಾಸ್ಯ ಪಾತ್ರ ನಿರ್ವಹಿಸಿ ಪ್ರೇಕ್ಷಕ ಸಮೂಹವನ್ನು ನಗೆಗಡಲಲ್ಲಿ ತೇಲಿಸಿದರು. ಯಕ್ಷಗಾನದಲ್ಲಿ ಕಿರೀಟ ವೇಷಧಾರಿಯಾಗಿ, ರಾಜಗಾಂಭಿರ್ಯದ ಮಾತುಗಾರಿಕೆಯ ಮೂಲಕ ಕಣ್ಮನ ಸೆಳೆದರು.

ರಂಗಸ್ಥಳದ ನಡೆನುಡಿಯ ಸೊಬಗನ್ನು ಕಂಡವರೆಲ್ಲಾ ಕೈರೋಡಿಯವರು ಮುಂದೊಂದು ದಿನ ನಾಟಕ, ಯಕ್ಷಗಾನದ ಮೇರು ಕಲಾವಿದರಾಗುತ್ತಾರನೆಂದೇ ಭಾವಿಸಿದ್ದರು. ಪದವಿ ವಿದ್ಯಾರ್ಥಿ ಯಾಗಿದ್ದಾಗಲೇ, ಅವರು ಬರೆದ ಬಂಗಾರ್ದ ಬಲೆ ತುಳು ನಾಟಕದ ಸನ್ನಿವೇಶಗಳು ಹಿಂದಿಗೂ ಜನಮನದಲ್ಲಿ ಹಸಿರಾಗಿ ಉಳಿದಿದೆ.ಸಹಕಾರಿ ಮಹಾಮಂಡಳ ಬೆಂಗಳೂರಿನಲ್ಲಿ, ಆಯೋಜಿಸಿದ್ದ ರಾಜ್ಯಮಟ್ಟದ ಚರ್ಚಾಸ್ಪರ್ಧೆಯಲ್ಲಿ ಪುರಸ್ಕಾರ ಪಡೆದವರು.

ಸ್ನಾತಕೋತ್ತರ ಪದವಿ ಪಡೆದ ಯೋಗೀಶ್ ಕೈರೋಡಿಯವರು ಕಾಲೇಜು ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದರು.ತನ್ನ ಕಾರ್ಯ ಕ್ಷೇತ್ರವನ್ನು ತರಗತಿಯ ಕೊಠಡಿಗೆ ಸೀಮಿತಗೊಳಿಸದೆ ಸಾರ್ವಜನಿಕ ಸಭೆ ಸಮಾರಂಭಗಳ ನಿರೂಪಕರಾಗಿ, ಮುಖ್ಯ ಭಾಷಣಕಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ದಶಕಗಳಕಾಲ ಜಿಲ್ಲೆಯಾದ್ಯಂತ ತೊಡಗಿಸಿಕೊಂಡು ಚಿರಪರಿಚಿತರಾದರು. ಪ್ರಚಲಿತ ವಿಷಯ ಆಧರಿಸಿ ಬರೆದ ಲೇಖನಗಳು ಉದಯವಾಣಿ, ಪ್ರಜಾವಾಣಿಯಲ್ಲಿ, ಪ್ರಕಟವಾಗಿದೆ. ಮಾತು ಮತ್ತು ಬರಹವನ್ನು ತನ್ನ ಅಭಿವ್ಯಕ್ತಿಯ ಪ್ರಧಾನ ಮಾಧ್ಯಮವನ್ನಾಗಿಸಿ
ಬೆಳೆದರು.

ವಿವಿಧ ವಿಷಯ ಮತ್ತು ಪ್ರಕಾರಗಳಿಗೆ ಸಂಬಂಧಿಸಿದ ಆರು ಕೃತಿಗಳು ಪ್ರಕಟಗೊಂಡಿದೆ. ಇವರ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯು (2011)ರಲ್ಲಿ ದೊರೆತಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಕಿರು ಸಂಶೋಧನಾ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಪದವಿ ಕನ್ನಡ ಹಾಗೂ ತುಳು ಭಾಷಾ ಪಠ್ಯಪುಸ್ತಕಗಳ ಸಂಪಾದಕರಾಗಿಯೂ, ಕಾರ್ಯನಿರ್ವಹಿಸಿದ್ದಾರೆ.ಕೆಲ ಕಾಲ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, ಸಂಶೋಧನಾ ಸಹಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಶಿಕ್ಷಣ ಪಡೆದ ಯುವಕರಿಗೆ ಬೇಸಾಯವೆಂದರೆ ಅಲರ್ಜಿ. ಆದರೆ ಕೈರೋಡಿ ಹಾಗಲ್ಲ, ತನ್ನ ಹಿರಿಯರಿಂದ ಬಳುವಳಿಯಾಗಿ ಬಂದ ಕೃಷಿಭೂಮಿಯಲ್ಲಿ ಭತ್ತದ ಬೇಸಾಯ ಮಾಡುತ್ತಾರೆ.ಅಡಿಕೆಯೊಂದಿಗೆ ಮಿಶ್ರ ಬೆಳೆಯ ಕಡೆಗೂ ಆಸಕ್ತಿ ತೋರಿಸಿದ್ದಾರೆ. ಸಾಧ್ಯವಾದಷ್ಟು ಆಹಾರ ಸ್ವಾಲಂಬನೆ ಆಗಬೇಕೆಂಬುದು ಅವರ ಸಂಕಲ್ಪ.

ಕೆಲವು ವರ್ಷಗಳ ಹಿಂದೆ ಸಮಾಜಸೇವಾ ಸಂಘ-ಸಂಸ್ಥೆಗಳ ಚಟುವಟಿಕೆಯಲ್ಲಿ ಕೈರೋಡಿ ಮುಂಚೂಣಿಯಲ್ಲಿ ಕಂಡುಬರುತ್ತಿದ್ದರು.ನೇರ – ನಿರರ್ಗಳ ಸ್ವಾರಸ್ಯಕರ ಮಾತಿನ ಮೋಡಿಯಲ್ಲಿ ಸಭಿಕರನ್ನು ಮಂತ್ರಮುಗ್ಧಗೊಳಿಸುತ್ತಿದರು.

ಸಮಾಜದ ಉನ್ನತಿಗೆ ರಚನಾತ್ಮಕ ಕಾರ್ಯಗಳಾಗಬೇಕು ಚಿಂತನ- ಮಂಥನಗಳಾಗಬೇಕೆಂದು ನಿರ್ಧಾರಕ್ಕೆ ಬಂದ ಕೈರೋಡಿಯವರು ಸಾರ್ವಜನಿಕ ವೈಭವ ಹಾಗೂ ಭಾಷಣದ ಮೇಲಿನ ನಂಬಿಕೆ ಕಳೆದುಕೊಂಡರು. ಆದರೆ ಇವರು ಕೈಕಟ್ಟಿ ಕುಳಿತುಕೊಂಡಿಲ್ಲ. ಸಮಾಜದ ಒಳಿತಿಗೆ ತನ್ನ ಪಾಲಿನ ಕೊಡುಗೆ ನೀಡುತ್ತಲೆ ಇದ್ದಾರೆ. ಯುವಕರು ದಾರಿ ತಪ್ಪಿದ್ದಾರೆ ಎಂದು ಸಾರ್ವಜನಿಕ ವೇದಿಕೆಯಲ್ಲಿ, ಕೂಗಾಡುವುದು ನಿರರ್ಥಕ. ಯುವಕರ ಮನಸ್ಸನ್ನು ಸಕರಾತ್ಮಕವಾಗಿ ರೂಪಿಸುವ ರಚನಾತ್ಮಕ ಕಾರ್ಯಗಳಾಗಬೇಕೆಂದು ಇವರ ನಂಬಿಕೆ. ಆರೋಗ್ಯಪೂರ್ಣ ಮನಸ್ಸು ರೂಪಿಸಿದರೆ ಉಳಿದೆಲ್ಲವೂ ಸಾಧಿತವಾಗುತ್ತದೆ. ಎಂಬುದು ಇವರ ಚಿಂತನೆ. ಇವರು ಮೌನವಾಗಿ ರೂಪಿಸಿದ್ದ ಮದ್ಯಮುಕ್ತ ಮದರಂಗಿ ಜಿಲ್ಲೆಯಲ್ಲಿ ಉಂಟುಮಾಡಿದ ಕ್ರಾಂತಿಕಾರಿ ಬದಲಾವಣೆ ಸದ್ದುಗದ್ದಲವಿಲ್ಲದ ಸಮಾಜಪರ ಕಾಳಜಿಗೆ ಸಾಕ್ಷಿ.

ವಿದ್ಯಾರ್ಥಿಗಳ ಪಾಲಿನ ನೆಚ್ಚಿನ ಉಪನ್ಯಾಸಕ, ಕಲಾವಿದ, ಸಾಹಿತಿ, ಸಂಶೋಧಕ, ಸಮಾಜಪರ ಚಿಂತಕ ಡಾ.ಯೋಗೀಶ್ ಕೈರೋಡಿಯವರ ಸಾಧನೆಯ ಹಾದಿಗೆ ಇವಿಷ್ಟು ಅಕ್ಷರದ ಮಾಲಾರ್ಪಣೆ.

Credits: ಪಟ್ಲ ಯತೀನ್ ಪೂಜಾರಿ ಕಡೇಶಿವಾಲಯ

Email us: billavaswarriors@gmail.com

www.billavaswarriors.com


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »