TOP STORIES:

ಕಾಂತಬಾರೆ ಬುದಾಬಾರೆ ತುಳುನಾಡ ಶಕ್ತಿಗಳ ಕಥೆ


ಮುಲ್ಕಿ ಸೀಮೆಯ ಅವಳಿ ವೀರರಾದ ಕಾಂತಬಾರೆ ಬೂದ ಬಾರೆಯರು ಕೋಟಿ ಚೆನ್ನಯರ ನಂತರದ ಕಾಲ ಘಟ್ಟದಲ್ಲಿ ಹುಟ್ಟಿ ತಮ್ಮದೇಯಾದ ಇತಿಹಾಸ ಸೃಷ್ಟಿಸಿದರು.ಮುಲ್ಕಿ ಸೀಮೆಯ ಸಾಮಂತರಸರ ಆಳ್ವಿಕೆಯ ಚಂದ್ರರಾಜ ಬಲ್ಲಾಳನು ಮುಲ್ಕಿ ಕೊಲ್ಲೂರಿನ ಸೀಮಂತೂರಿನಲ್ಲಿ ರಾಜ್ಯಭಾರ ಮಾಡಿಕೊಂಡಿದ್ದನು. ಅವನ ಪಟ್ಟದ ರಾಣಿ ಪುಲ್ಲ ಪೆರ್ಗಡ್ತಿ, ಮಕ್ಕಳಿಲ್ಲದ ಇವರು ಸಂತಾನ ಭಾಗ್ಯಕ್ಕಾಗಿ ಕದ್ರಿ ಮಂಜುನಾಥನಿಗೆ ಹರಕೆ ಸಲ್ಲಿಸಲು ಪರಿಹಾರ ಸಮೇತರಾಗಿ ದಂಡಿಗೆಯಲ್ಲಿ ಹೋಗುವಾಗ ಸುರತ್ಕಲ್ ಕಜೇರಿ ಎಂಬಲ್ಲಿ ಹೊಲ ಕಾಯುತ್ತಿದ್ದ ಏಳರ ಹರೆಯದ ಬಿಲ್ಲವ ಬಾಲಕಿ ಆಚು ಮಾತಿನ ಚತುರೋಕ್ತಿಗಳಿಗೆ ಮನಸೋತರು. ಹಿಂದಿರುಗಿ ಬರುವಾಗ ಅವಳ ಹಿರಿಯರ ಮನ ಒಪ್ಪಿಸಿ ಆಕೆಯನ್ನು ತಮ್ಮೊಂದಿಗೆ ಬೀಡಿಗೆ ಕರೆ ತರುತ್ತಾರೆ. ಆಕೆಯ ಜೊತೆಯಲ್ಲಿ ಬಂದ ಉಲ್ಲಾಯ ದೈವಕ್ಕೆ ಕೆಳಗಿನ ಗುಡ್ಡೆ ಮನೆಯಲ್ಲಿ ಸ್ಥಾನಕಟ್ಟಿ ಆರಾಧನೆ ಸಲ್ಲಿಸುತ್ತಾರೆ. ಮುಂದೆ ಆಕೆಯನ್ನು ತನ್ನ ಒಕ್ಕಲಾದ ವರಪಾಡಿ ಕುಂದಯ ಬಾರೆಗೆ ಮದುವೆ ಮಾಡಿ ಕೋಡುತ್ತಾರೆ. ಆಚು ಗರ್ಭವತಿಯಾಗಿ ಸೀಮಂತದ ಬಳಿಕ ತವರಿಗೆ ಹೋಗುವ ದಾರಿಯಲ್ಲಿ ಕೊಲ್ಲೂರಿನ ತಾಕಟೆ ಮರದ ಬಳಿ ಹೆರಿಗೆ ನೋವು ಕಾಣಿಸಿಕೊಂಡು ಅಲ್ಲಯೇ ದೈವಾಂಶ ಸಂಭೂತರಾದ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಾಳೆ, ತಾಕಟೆ ಮರಕ್ಕೆ ತೊಟ್ಟಿಲು ಕಟ್ಟಿ ಶಿಶುಗಳನ್ನು ತೂಗುತ್ತಾಳೆ, ಸುದ್ದಿ ತಿಳಿದ ಪೆರ್ಗಡ್ತಿ, ಬಾಣಂತಿ & ಮಕ್ಕಳನ್ನು ಬೀಡಿಗೆ ಕರೆದೊಯ್ಯುತ್ತಾಳೆ. ಕೆಲವು ದಿನಗಳಲ್ಲಿ ಆಚು ಕೈಲಾಸವಾಸಿಯಾಗುತ್ತಾಳೆ. ರಾಣಿಯು ಅವಳಿ ಮಕ್ಕಳಿಗೆ ಕಾಂತಾಬಾರೆ ಬೂದಬಾರೆ ಎಂದು ಹೆಸರಿಟ್ಟು ಅಕ್ಕರೆಯಿಂದ ಸಲಹುತ್ತಾರೆ.

ನಂತರದಲ್ಲಿ ಪೆರ್ಗಡ್ತಿಗೂ ಮಕ್ಕಳಾಗುತ್ತದೆ. ಅವಳಿ ಮಕ್ಕಳು ಅಂದಿನ ಪ್ರಸಿದ್ಥ ಗುರುಕುಲವಾಗಿದ್ದ ಹಳೆಯಂಗಡಿ ಹತ್ತಿರದ ದೈಬಿತ್ತಿಲ್ (ಸಸಿಹಿತ್ತಿಲು) ಸಾಮಂತ ಗರಡಿಯಲ್ಲಿ ಯುದ್ಥ ವಿದ್ಯಾ ಪಾರಂಗತರಾಗುತ್ತಾರೆ. ಪ್ರಾಯಬದ್ಥರಾಗಿ ಮುಲ್ಕಿ ಸೀಮೆಯ ಗಡಿ ರಕ್ಷಣೆ ಮಾಡುತ್ತಾ, ಶತ್ರುಗಳ ತಂಟೆ ನಿವಾರಿಸುತ್ತಾ ಅರಸರ ಎಡಬಲವಾಗುತ್ತಾರೆ. ಮಾಗಣೆಯಲ್ಲಿ ಹೊಲಗಳನ್ನು ನಿರ್ಮಿಸಿ ಕೃಷಿ ಕಾಯಕ ಮಾಡಿ ಇತರರಿಗೂ ನೆರವಾಗುತ್ತಾರೆ. ಸಾಮಂತರ ರಾಜ್ಯಭಾರ ಸುಸೂತ್ರಗೊಳಿಸಲು, ಗುತ್ತು ಭಾವಗಳನ್ನು ನಿರ್ಮಿಸಿ ಪಹರೆಯವರನ್ನು ನೇಮಿಸಿ ಬೊಕ್ಕಸಕ್ಕೆ ಕಂದಾಯ ಸಂದಾಯದ ಏರ್ಪಾಡು ಮಾಡುತ್ತಾರೆ. ಅರಸರಿಂದ ಕೊಲ್ಲೂರ ಗುಡ್ಡೆಯ ಮರ್ದನಾಯ್ಗರಿಗೆ ಗಡಿ ಪಟ್ಟವನ್ನು ಮಾಡಿಸುತ್ತಾರೆ. ಬಲ್ಲಾಳರು ವಿಧಿವಶರಾದಾಗ ಸೀಮೆಯ ಆಡಳಿತದಲ್ಲಿ ಪೆರ್ಗಡ್ತಿಗೆ ಬೆಂಬಲವಾಗಿ ನಿಂತು ಆಕೆಯ ಮಗಳಾದ ದುಗ್ಗುವಿಗೆ ಐಕಳ ಬಾವದ ಬೀಸಬನ್ನಾರನೊಂದಿಗೆ ವಿವಾಹ ಮಾಡಿಸುತ್ತಾರೆ. ರಾಜ್ಯದ ಮೇಲೆ ದಂಡೆತ್ತಿ ಬಂದ ಮೂಡಬಿದಿರೆಯ ಚೌಟ ಅರಸು ಕುಬೇರನನ್ನು ಎದುರಿಸಿ ವೀರ ದುಗ್ಗಣ್ಣ ಕೊಂಡೆಯನ್ನು ಕೊಂದು ಕುಬೇರನನ್ನು ಸೋಲಿಸುತ್ತಾರೆ.

ಪೆರ್ಗಡ್ತಿ ಪುತ್ರ ಚೆನ್ನರಾಯ ಸಾವಂತನಿಗೆ ಪಟ್ಟ ಕಟ್ಟಿಸಿ, ಪರಂಗಡಿ(ಹಳೆಯಂಗಡಿ) ಬಳಿಯ ಪಡು ಪಣಂಬೂರಿನಲ್ಲಿ ನೂತನ ಅರಮನೆ ನಿರ್ಮಿಸಿ, ತಾವು ಸೀಮೆಯ ಕಾವಲಿಗೆ ನಿಲ್ಲುತ್ತಾರೆ. ಕಾರ್ಕಳದ ಬೈಲಸೂಡ ಅರಸರಿಗೆ ಯುದ್ಥದಲ್ಲಿ ನೆರವಾಗಿ ಜಯ ಒದಗಿಸುತ್ತರೆ. ತಮ್ಮ ಜೊತೆಯಲ್ಲಿ ಬಂದ ಉಳ್ಳಾಯ ಜುಮಾದಿ ಸಾರಮಾನ್ಯ ದೈವಗಳಿಗೆ ಉಳೆಪಾಡಿ ಗುಡ್ಡೆಯಲ್ಲಿ ಸ್ಥಾನ ಕಟ್ಟಿಸಿ ಆರಾಧಿಸುತ್ತಾರೆ. ಗುಡ್ಡೆನಾಯ್ಗರಿಗೆ ನೂರ ಒಂದು ಮುಡಿ ಸಾಗುವಳಿ ಜಮೀನು ಮಾಡಿಕೊಡುತ್ತಾರೆ. ಕೆಳಗಿನ ಗುಡ್ಡೆಯಲ್ಲಿ ಕಾಡು ಕಡಿದು ಏಳು ಎಕರೆ ಬಾಕಿಮಾರು ಗದ್ದೆಗೆ ಪುನಾರು ಪುಚ್ಚಾಡಿ ಬೈಲಿನಿಂದ ಕಾಲುವೆ ನಿರ್ಮಿಸಿ ನೀರು ಒದಗಿಸುತ್ತಾರೆ. ಪಡುಪಣಂಬೂರುನಲ್ಲಿಯೂ ಇಂತಹುದೆ ಕೃಷಿ ಕಾಯಕ ಹಾಗೂ ನೀರಾವರಿ ಏರ್ಪಡಿಸುತ್ತಾರೆ.

ಅಸಾಮಾನ್ಯ ವೀರರಾಗಿ ಮೆರೆದ ಈ ಅವಳಿ ವೀರರು ಕಾಯಬಿಟ್ಟು ಮಾಯಸೇರಿದ ಬಳಿಕ ಅವರನ್ನು ಕಾರಣಿಕ ಪುರುಷರೆಂದು ಆರಾಧಿಸಲಾಯಿತು. ಮುಲ್ಕಿ ಉಳೆಪಾಡಿ ಮಿತ್ತಗುಡ್ಡೆಯಲ್ಲಿ ಕಾಂತಬಾರೆ ಬೂದಬಾರೆ ಗರಡಿಯಿದೆ. ಅವರು ಸ್ಥಾಪಿಸಿದ ದೈವಗಳ ಗರಡಿಯಿದೆ. ಗುಡ್ಡೆ ಸಾನದ ಮನೆಯಲ್ಲಿ ಬಾರೆಯರ ಪಟ್ಟದ ಉಂಗುರ& ಅವರು ಯುದ್ಥಗಳಲ್ಲಿ ಬಳಸುತ್ತಿದ್ದ ಬಿಲ್ಲು ಬಾಣಗಳು ಮುಂತಾದ ಮುವತ್ತೆರಡೂ ಆಯುಧಗಳನ್ನು ರಕ್ಷಿಸಿ ಇಡಲಾಗಿದೆ. ಅವರು ಧರಿಸುತ್ತಿದ್ದ ಉಡುಪುಗಳನ್ನು ಈಗಲೂ ಕಾಯ್ದಿರಿಸಲಾಗಿದೆ. ಅವರ ಕಾಲದ ಆಯತಾಕಾರದ ಮರದ ಪೆಟ್ಟಿಗೆಯೂ ಇದೆ. ವರ್ಷಾವಧಿ ಕಾವೇರಿ ಸಂಕ್ರಮಣದಂದು ಇವುಗಳನ್ನು ಹೊರಗೆ ತೆಗೆದು ಪೂಜೆ ಪುರಸ್ಕಾರ ಸಲ್ಲಿಸಲಾಗುತ್ತದೆ. ಅವರ ಬಿಲ್ಲುಗಳು 7ಅಡಿಗಳಷ್ಟು ಉದ್ದವಿರುವುದನ್ನು ಗಮನಿಸಿದರೆ ಈ ಅವಳಿ ವೀರರು ಆಜಾನುಬಾಹು ದೇಹ ಪ್ರಕೃತಿಯವರಾಗಿದ್ದರೆಂದು ತಿಳಿಯುತ್ತದೆ. ಇವರ ಕಾರ್ಯಕ್ಷೇತ್ರದ ಪ್ರದೇಶದ ಉದ್ದಗಲಕ್ಕೂ ಕಂಡು ಬರುವ ಕುರುಗಳು ಅವರ ಪವಾಡ ಸದೃಶ ಸಾಧನೆಗಳ ಅವಶೇಷಗಳು, ಅವರ ಆರಾಧನಾ ಕೇಂದ್ರಗಳು,ಸೀಮಂತೂರು & ಏಳಿಂಜೆಯಲ್ಲಿ ದೊರೆತಿರುವ ವೀರಗಲ್ಲು, ಅವರ ಕುರಿತಾದ ಜನ ಜನಿತ ಕಥೆಗಳು, ಪಾಡ್ದನಗಳೂ ಐತಿಹ್ಯದ ಮಹತ್ವದ ದಾಖಲೆಗಳಾಗಿದೆ.

Credits: ತುಳುನಾಡ ಬಿಲ್ಲವರು
-(ರಮಾನಾಥ ಕೋಟೆಕಾರ್)

ಪೆ.ಟೈ:- ಸುದರ್ಶನ್ ಪೂಜಾರಿ ಶ್ರೀ ದುರ್ಗಾ.

Email us: billavaswarriors@gmail.com

www.billavaswarriors.com


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »