TOP STORIES:

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಬಿಲ್ಲವ ಗಾನ ತರಂಗ ಸೀಸನ್ 1 : ಬಹುಮಾನ ವಿತರಣಾ ಸಮಾರಂಭ


ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ತಂಡವು ಸಾಮಾಜಿಕ ಜಾಲತಾಣದ ಮೂಲಕ ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿ ಆ ಮೂಲಕ ಅವರ ಬೆಳವಣಿಗೆಗೆ ಕಾರ್ಯೋನ್ಮುಖ ವಾಗಿರುವುದು ಸಂತಸದ ವಿಷಯ. ಕೊರೋನಾ ಸಮಯದಲ್ಲಿ ಒಳ್ಳೆಯ ಚಿಂತನೆಯ ಮೂಲಕ ಸಮಯವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿದೆ. ಎಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದರು.

ಕುದ್ರೋಳಿ ದೇವಳದಲ್ಲಿ ನಡೆದ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಬಿಲ್ಲವ ಗಾನ ತರಂಗ ಸೀಸನ್-1 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಪರಮಾನಂದ ಸಾಲ್ಯಾನ್ ಮಾತನಾಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಉಪಯೋಗಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಪ್ರತಿಭೆಗಳಿಗೆ ತಮ್ಮ ಒತ್ತು ನೀಡಿ ಅವರನ್ನು ಬೆಳಕಿಗೆ ಬರುವ ಕೆಲಸ ಸಾರ್ಥಕವಾಗಿದೆ. 94 ಸ್ಪರ್ಧಿಗಳಲ್ಲಿ ಅಂತಿಮ ಆಯ್ಕೆ ಕಷ್ಟದ ಕೆಲಸ. ವಿಶ್ವವ್ಯಾಪಿ ಈ ಎಲ್ಲಾ ಸ್ಪರ್ಧಿಗಳನ್ನು ಪರಿಚಯಿಸಿದ ಕಾರ್ಯ ಶ್ಲಾಘನೀಯ ಎಂದರು.ರೇಡಿಯೋ ಜಾಕಿ ಮತ್ತು ಸಮಾಜಸೇವಕಿ ರಶ್ಮಿ ಉಳ್ಳಾಲ್ ಮಾತನಾಡಿ ಕಲಿಕೆ ನಿರಂತರ. ಧನಾತ್ಮಕ ಚಿಂತನೆಯನ್ನು ಯುವ ಮನಸ್ಸುಗಳು ತುಂಬಿ ಕೊಳ್ಳಬೇಕಾಗಿದೆ. ಸಿಕ್ಕ ಅವಕಾಶಗಳನ್ನು ಉಪಯೋಗಿಸುವ ಮೂಲಕ ನಾವು ಬೆಳೆಯ ಬೇಕಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾ ನಿಲಯದ ನಾರಾಯಣ ಗುರು ಅಧ್ಯಯನಪೀಠದ ಸಲಹಾ ಸಮಿತಿಯ ಸದಸ್ಯರಾದ ನಮಿತಾ ಶ್ಯಾಮ್ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ಇನ್ನಷ್ಟು ಸ್ಪರ್ಧೆಗಳಿಗೆ ನಮ್ಮ ಸಹಕಾರವಿದೆ. ಬಿಲ್ಲವ ಸೇವಾ ಮಾಣಿಕ್ಯದಾರ ಸಮಾಗಮ ಮಾಡುತ್ತಿರುವ ಕಾರ್ಯಗಳು ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಬಿರುವೆರ್ ಕುಡ್ಲ ಮೂಡಬಿದ್ರೆ ಘಟಕದ ರಾಜ್ ಪವಿ ಬಿಲ್ಲವ ಉಪಸ್ಥಿತರಿದ್ದರು.
ಸನ್ಮಾನ: ಕಾರ್ಯಕ್ರಮದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 98.5 ಪಡೆದ ನಿರೀಕ್ಷಾ ಪೂಜಾರಿಯನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ನಿರ್ಮಾಣದ ಗೆಜ್ಜೆಗಿರಿತ ಮಾಣಿಕ್ಯ ಅಪ್ಪೆ ದೇಯಿಬೈದೆದಿ ಸುಗಿಪು ಧ್ವನಿಸುರುಳಿಯಲ್ಲಿ ಹಾಡಿದ ವಾತ್ಸಲ್ಯ ಪೂಜಾರಿಯನ್ನು ಗೌರವಿಸ ಲಾಯಿತು.ಬಿಲ್ಲವ ಗಾನ ತರಂಗ ವಿಜೇತರು: ಪ್ರಥಮ-ಲಹರಿ ಕೋಟ್ಯಾನ್, ದ್ವಿತೀಯ ರಂಜಿತ್ ಪೂಜಾರಿ ಮೊಗರು, ತೃತೀಯ ಅನುರಾಧ ಚಂದ್ರೇಶ್. ಸಮಾಧಾನಕರ ಬಹುಮಾನ: ಸಚಿನ್ ಪೂಜಾರಿ, ನಿಶ್ಮಿತಾ, ಸಂತೋಷ್ ಪೂಜಾರಿ,ಸಹನಾ ಕರ್ಕೇರ. ಬೆಸ್ಟ್ ರಾಕ್ ಮೆಲೋಡಿ -ಆದಿತ್ಯ ಕರ್ಕೇರ ಪಡೆದುಕೊಂಡಿರುತ್ತಾರೆ.

ಸಮಾರಂಭದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಪದಾಧಿಕಾರಿಗಳಾದ ದಿನೇಶ್ ಸುವರ್ಣ ರಾಯಿ, ಶಿವಕುಮಾರ್ ಮರಕ್ಕೂರು, ಶ್ರೇಯಸ್, ಅನುಪ್ ಉಪಸ್ಥಿತರಿದ್ದರು.
ರೇಣುಕ ಕಣಿಯೂರು ಸ್ವಾಗತಿಸಿ, ಅಜಿತ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಚ್ಚೇಂದ್ರ ಅಂಬಾಗಿಲು ನಿರೂಪಿಸಿ, ದೀಪಕ್ ಬೀರ ವಂದಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »