TOP STORIES:

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ


ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು ಹಾಕುವುದನ್ನು ಪ್ರತಿ ರಂಗದಲ್ಲೂ ಕಾಣಸಿಗುತ್ತದೆ. ಕಿರುತೆರೆ, ಸಿನಿಮಾ ರಂಗದಲ್ಲಿ ರಂಗಭೂಮಿ, ನಟನೆ, ಮಾಡೆಲಿಂಗ್ ಕ್ಷೇತ್ರದ ಪರಿಚಯವಿದೆಯೇ ಎಂಬ ಪ್ರಶ್ನೆ ಮಾಮೂಲು.

ಅಂತೆಯೇ ಮನದ ಮೂಲೆಯಲ್ಲಿದ್ದ ನಟಿಯಾಗಬೇಕೆಂಬ ಸಣ್ಣ ಕನಸು ಕೋಸ್ಟಲ್ ವುಡ್ನ ‘ಎನ್ನ’ ಎಂಬ ತುಳು ಚಿತ್ರದ ನಾಯಕಿಯಾಗಿ ಆಯ್ಕೆಯಾಗುವುದರೊಂದಿಗೆ ನನಸಾಗಿ ಜನರಿಂದ ಪ್ರಶಂಸೆಗೆ ಪಾತ್ರರಾದವರೇ ಶ್ರುತಿ ಆರ್. ಪೂಜಾರಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಅವರಾಲು ಮಟ್ಟು ಎಂಬ ಸಣ್ಣ ಗ್ರಾಮದ ರಮೇಶ್ ಪೂಜಾರಿ ಮತ್ತು ರೇವತಿ ಪೂಜಾರಿ ದಂಪತಿಗಳ ಪುತ್ರಿಯಾದ ಶ್ರುತಿಯವರು ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರೈಸಿ, ಪದವಿ ಶಿಕ್ಷಣವನ್ನು ಮುಲ್ಕಿಯ ವಿಜಯ ಕಾಲೇಜಿನಲ್ಲಿ ಮುಗಿಸಿದರು. ತದನಂತರ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಬಿಡುವಿನ ವೇಳೆಯಲ್ಲಿ ತನ್ನದೇ ಫೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆ ಮೂಲಕ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ತನ್ನ ಹೊಸ ತುಳು ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಹಂಬಲದಲ್ಲಿದ್ದ ನಿರ್ದೇಶಕ ವಿಶ್ವನಾಥ ಕೋಡಿಕಲ್ ರ ‘ಎನ್ನ’ ಚಿತ್ರದ ಅಡಿಷನ್ ನಡೆಯುತ್ತಿತ್ತು. ಅದರಲ್ಲಿ ಶ್ರುತಿಯವರು ಭಾಗವಹಿಸಿ ಕೊಟ್ಟ ಸಂಭಾಷಣೆಯನ್ನು ನಟನೆಯೊಂದಿಗೆ ಒಪ್ಪಿಸಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗುತ್ತಾರೆ. ಅಲ್ಲಿ ಒಂದಷ್ಟು ಧೈರ್ಯ ಬಂದರೂ ನಟನೆ, ಸಂಭಾಷಣೆ, ಕ್ಯಾಮರ ಇದರ ಬಗೆಗೆ ಸರಿಯಾದ ಅನುಭವ ಇರದೆ ಭಯವಿತ್ತು. ಮುಂದೆ ಚಿತ್ರದ ಪೂರ್ವ ತಯಾರಿಯ ಹಂತದಲ್ಲಿ ಸಾಕಷ್ಟು ತರಬೇತಿ ಪಡೆದೆ ಜೊತೆಗೆ ಹೆಚ್ಚಿನವರು ಹೊಸಬರೇ ಆಗಿದ್ದರಿಂದ ಯಾವುದೇ ರೀತಿಯ ತೊಂದರೆಯಾಗದೆ ಉತ್ತಮವಾಗಿ ಅಭಿನಯಿಸಿದೆ ಎನ್ನುತ್ತಾರೆ‌.

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ಬಹುಷ: ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿದಿತ್ತೇನೋ ಎನ್ನುವ ಅವರು ತನ್ನ ಬದುಕಿನಲ್ಲಿ ಬಂದ ಒಂದೊಳ್ಳೆ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ಮುಂದೆ ಉತ್ತಮ ಅವಕಾಶದ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ. ಇನ್ನಷ್ಟು ಅವಕಾಶಗಳು ಇವರಿಗೆ ಲಭಿಸಲಿ ಎಂದು ಹಾರೈಸುವ.

 


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »