TOP STORIES:

FOLLOW US

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು


ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ ದಂಪತಿಗಳ ಪ್ರೀತಿಯ ಮಗ, ಸಣ್ಣ ಪ್ರಾಯದಲ್ಲಿಯೇ ತುಳು ಭಾಷೆಯಲ್ಲಿ ಎಲ್ಲಿ ಇಲ್ಲದ ಅಭಿಮಾನ.

ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಗಿಸಿದ ಇವರು ಐಟಿಐ ಟ್ರಿನಿಟಿ ಕಾಲೇಜ್ ಉದ್ಯಾವರ ಇಲ್ಲಿ ಎಮ್. ಆರ್. ಎ. ಸಿ ಮುಗಿಸಿ ನಂತರ ಕದ್ರಿ ಹಿಲ್ಸ್ ಐ.ಟಿ. ಐ ಮಂಗಳೂರ ಮತ್ತು ಎನ್. ಎ. ಸಿ ಯನ್ನು ಕೆ. ಎಮ್. ಎಫ್ ನಲ್ಲಿ ಮುಗಿಸಿದ ಇವರು ಪ್ರಸ್ತುತ ಟ್ರಿನಿಟಿ ಐ.ಟಿ.ಐ ಕಾಲೇಜ್ ಉದ್ಯಾವರದಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರು ಶ್ರೀ ಜನತಾ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ ಸಮಿತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಹಾಗೆಯೇ ಎ. ಆರ್ ಫ್ರೆಂಡ್ ಅಂಬಾಗಿಲು 10 ವರ್ಷದಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಉಡುಪಿ, ಮಂಗಳೂರು, ಚಿಕ್ಕಮಂಗಳೂರ, ಶಿವಮೊಗ್ಗ ಹೀಗೆಯೇ ವಿವಿಧ ಕಡೆಗಳಲ್ಲಿ ತಮ್ಮ ನಿರೂಪಣೆಯ ಸೊಗಡುನ್ನು ತೋರಿಸಿದ್ದಾರೆ. ತುಳುಭಾಷೆಯ ಮೇಲೆ ಇದ್ದ ಅಭಿಮಾನಕ್ಕೆ ಮತ್ತು ವಾಕ್ ಚಾತುರ್ಯಕ್ಕೆ ಶ್ರೀ ಕ್ಷೇತ್ರ ಕಾಣಿಯೂರ್ ಸ್ವಾಮಿ ಇವರಿಗೆ ತುಳುನಾಡ ಸ್ವರ ತುಡರ್ ಎನ್ನುವ ಬಿರುದನ್ನು ನೀಡಿದ್ದಾರೆ. ಮಕ್ಕಿ ಮನೆ ಕಲಾವೃಂದ ಸಂಭ್ರಮ 2019ರಲ್ಲಿ ಗೌರವ ಪುರಸ್ಕಾರ ನೀಡಿ ಗೌರವಿಸಿತ್ತು ಮತ್ತು ಹಳೆ ವಿದ್ಯಾರ್ಥಿಗಳ ಸಂಘ ನಿಟ್ಟೂರ್ ಇಲ್ಲಿಯೂ ಅಭಿನಂದನ ಪತ್ರ ನೀಡಿ ಗೌರವಿಸಿದರು.

ತುಳುಭಾಷೆಯ ಸಂಸ್ಕೃತಿಯನ್ನು ತಮ್ಮ ನಿರೂಪಣೆಯಲ್ಲಿ ಬಿತ್ತರಿಸಿದ ಇವರ ಮೊದಲು ವೀರಾಂಜನೇಯ_ಗುಡಿ ಅಂಬಾಗಿಲುಯಲ್ಲಿ ಹನುಮಾನ್ ಜಯಂತಿ ದಿನ ತುಳು ವಾಕ್ ಚಾತುರ್ಯಕ್ಕೆ ಎಲ್ಲರ ಮನ ಗೆದ್ದ ಇವರು ತನ್ನದೇ ಅಭಿಮಾನಿ ಬಳಗ ಹೊಂದಿದ್ದಾರೆ.

ಕುಡ್ಲ ಚಾನಲ್ ಕಂಬಳ ಹೀಗೆ ಅನೇಕ ಸಾಂಸ್ಕ್ರಿತಿಕ ಕಾರ್ಯಕ್ರಮದಲ್ಲಿ ತನ್ನ ಮಾತಿನ ಚತುರತೆಯನ್ನು ತೋರಿಸಿದ್ದಾರೆ. ಹೀಗೆ ನಿರೂಪಣೆ ಅಲ್ಲದೆ ತಾಲೀಮ್ ನಲ್ಲಿ ತನ್ನ ಪ್ರತಿಭೆ ಯನ್ನು ತೋರಿಸಿ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ 5ವರ್ಷ ದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ತುಳು ಭಾಷೆ, ಸಂಸ್ಕೃತಿಯನ್ನು ಜನರ ಮನಮುಟ್ಟುವಂತೆ ಮಾಡಿದ ಇವರು ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಇವರಿಗೆ ಇನ್ನಷ್ಟು ಅವಕಾಶಗಳು ಒದಗಿ ಬರಲಿ
ನಿರೂಪಣೆ ಇವರಿಗೆ ಇನ್ನಷ್ಟು ಹೆಸರು ತರಲಿ ತುಳು ಭಾಷೆ ಸಂಸ್ಕೃತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ತುಳುನಾಡ ದೈವ ದೇವರುಗಳ ಆಶೀರ್ವಾದ ಸದಾ ಇರಲಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವ.

By: ಪ್ರಶಾಂತ್ ಅಂಚನ್ ಮಸ್ಕತ್ತ್

Email us: billavaswarriors@gmail.com

 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »