TOP STORIES:

FOLLOW US

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ


ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.

ಹಗಲು-ರಾತ್ರಿ ಎನ್ನದೆ, ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮ. ಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ.

ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಹಾಗೂ ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಇನ್ಫಾರ್ಮೇಷನ್ ರವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕಿರುಚಿತ್ರ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ಅರ್ಪಿಸುವ, ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ. ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು, ಮಿತುನ್ ರಾಜ್ ವಿದ್ಯಾಪುರ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ತುಳುಚಿತ್ರರಂಗ ಹಾಗೂ ಕನ್ನಡ ಸಿನಿಮಾರಂಗದಿಂದಲೂ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ ಸಿಕ್ಕಿದೆ. ಆಗೋಸ್ಟ್ 22 ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »