TOP STORIES:

ಹಾಸ್ಯ ಎಂದರೆ ಬೋಳಾರ್ – ಬೋಳಾರ್ ಎಂದರೆ ಹಾಸ್ಯ, ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ


ಅಭಿಪ್ರಾಯ ಸಂಗ್ರಹ

ದೈಜಿವರ್ಲ್ಡ್ ಟಿವಿಯ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮ ಟಿವಿ ಮುಖ್ಯಸ್ಥ, ಜನಪ್ರಿಯ ಪತ್ರಕರ್ತ ವಾಲ್ಟರ್ ನಂದಳಿಕೆ ಹಾಗೂ ತುಳುನಾಡ ತಲೈವ ಅರವಿಂದ್ ಬೋಳಾರ್ ನಡೆಸಿಕೊಡುವ ಕಾರ್ಯಕ್ರಮ. ನಟನೆಯ ಬಗ್ಗೆ ಮಾತನಾಡುವುದಾರೆ ತುಳುನಾಡಿನಲ್ಲಿ ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ. ತುಳುನಾಡಿನಲ್ಲಿ ಇದೀಗ ಹಾಸ್ಯ ಎಂದರೆ ಬೋಳಾರ್ ಹಾಗೂ ಬೋಳಾರ್ ಎಂದರೆ ಹಾಸ್ಯ ಎಂಬ ಸ್ಥಿತಿಯುಂಟಾಗಿದೆ.

ಅರವಿಂದ್ ಬೋಳಾರ್ ಇಷ್ಟೊಂದು ಮಟ್ಟಕ್ಕೆ ಬೆಳೆಯಲು ಕಾರಣ ಅವರ ಪ್ರತಿಭೆ ಹಾಗೂ ಲಕ್ಷಾಂತರ ಅಭಿಮಾನಿಗಳ ಆಶೀರ್ವಾದ. ಇದೀಗ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮಕ್ಕೆ ಬರೋಣ. ಕಾರ್ಯಕ್ರಮದ ಹದಿನಾಲ್ಕು ಸಂಚಿಕೆಗಳು ಈಗಾಗಲೇ ಮುಗಿದಿವೆ. ಈ ಸರಣಿಯಲ್ಲಿ ಇನ್ನು ಎಷ್ಟು ಸಂಚಿಕೆಗಳು ಬಾಕಿ ಇವೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ ಹದಿನಾಲ್ಕು ಸಂಚಿಕೆಗಳಲ್ಲೂ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡ ಬೋಳಾರರು ತನ್ನನ್ನು ಯಾಕೆ ತುಳುನಾಡ ಮಾಣಿಕ್ಯ ಅಥವಾ ತುಳುನಾಡ ತಲೈವ ಎಂಬ ಎಂದು ವೀಕ್ಷಕರು ಕರೆಯುತ್ತಾರೆ ಎಂದು ಸಾಬೀತುಪಡಿಸಿದ್ದಾರೆ. ಫಿಲೋಸಫಿ ಹಾಗೂ ಉತ್ತಮ ಸಂದೇಶಗಳೊಂದಿಗಿನ ಸ್ಕ್ರಿಪ್ಟ್ ಹೊಂದಿದ ಈ ಕಾರ್ಯಕ್ರಮದಲ್ಲಿ ಬೋಳಾರರು ನೂರಕ್ಕೆ ನೂರು ಶತಮಾನ ಹೊಸತನವನ್ನು ನೀಡುವಲ್ಲಿ ಸಫಲರಾಗಿದ್ದಾರೆ. ಕಳೆದ ವಾರ ಅವರು ಮಾಡಿದ Double Act ಅಂತೂ ಸ್ಥಳೀಯ ವಾಹಿನಿಗಳ ಇತಿಹಾಸದಲ್ಲಿ ಹೊಸ ಧಾಕಲೆಯನ್ನೇ ರಚಿಸಿದೆ. ಆಷ್ಟೊಂದು Perfection ಅದರಲ್ಲಿ ಇತ್ತು.

ಹಳೆ ಮಧ್ಯವನ್ನು ಹೊಸ ಬಾಟ್ಲಿಯಲ್ಲಿ ತುಂಬಿಸಿಕೊಟ್ಟಂತೆ ಪದೇ ಪದೇ ಹಳೆಯ ಹಾಸ್ಯ ಸಂಭಾಷಣೆ, ಕಲಾವಿದರ ಪೋಷಕರ ಹೆಸರು ಉಲ್ಲೇಖಿಸಿ “ ನಿನ್ನ ಅಮ್ಮೆ..ಎನ್ನ ಅಮ್ಮೆ” ಎಂದು ಅವರ ತೇಜೋವಧೆ ಮಾಡಿ, ಅಶ್ಲೀಲ ಮಾತುಗಳೊಂದಿಗೆ, ಸ್ಕ್ರಿಪ್ಟಿ ಬಗ್ಗೆ ಏನೆಂದು ಗೊತ್ತಿರದ, ಇನ್ನೂ Update ಆಗದ ಕೆಲವರು ಮಾಡುವ ಹಾಸ್ಯ ಕಾರ್ಯಕ್ರಮಗಳು ಜನರಿಂದ ತಿರಸ್ಕಾರಗೊಳ್ಳಲು ಆರಂಭವಾಗಿವೆ. ಕೆಲ ಕಾರ್ಯಕ್ರಮಗಳಿಗೆ ವೀಕ್ಷಕರಿಂದ ದೊರಕುವ ನೀರಸ ಪ್ರತಿಕ್ರಿಯೆಯೇ ಇದನ್ನು ತೋರಿಸುತ್ತದೆ. ಆದರೆ ಬೋಳಾರ್ ಕಾರ್ಯಕ್ರಮಗಳು ಮಾತ್ರ ವೀಕ್ಷಕರನ್ನು ಹಿಡಿದು ನಿಲ್ಲಿಸುವಲ್ಲಿ ಸಫಲವಾಗುತ್ತಿವೆ. ಕಾರಣ ಬೋಳಾರರು ಹೊಸತನವನ್ನು ನೀಡುತ್ತಿದಾರೆ. ಅವರ ಹಾಸ್ಯಗಳಲ್ಲಿ ಪ್ರಸ್ತುತ ವಿದ್ಯಾಮಾನಗಳ ಆಗುಹೋಗುಗಳು ನೇರವಾಗಿ ಪ್ರತಿಫಲಿಸುತ್ತಿವೆ.

ಉತ್ತಮ ಸ್ಕ್ರಿಪ್ಟ್ ಹಾಗೂ ತಾಂತ್ರಿಕ ವರ್ಗವನ್ನು ಅವರು ಬಳಸುತ್ತಿದ್ದಾರೆ. ಫತಿಫಲವೆಂಬಂತೆ ದಿನೇ ದಿನೇ ವೀಕ್ಷಕರನ್ನು ಮನಬಿಚ್ಚಿ ನಗಿಸುವ ಜೊತೆಗೆ , ಸಮಾಜಿಕವಾಗಿ ಚಿಂತಿಸಲೂ ಅವರು ಪ್ರೇರೇಪಿಸುತ್ತಾರೆ. ಸಮಾಜದಲ್ಲಿ ಓರ್ವ ಜವಬ್ದಾರಿಯುತ ಕಲಾವಿದನಾಗಿ ಬೋಳಾರ್ ಮಿಂಚಲು ಇದು ಕಾರಣವಾಗಿರಬಹುದು. ಚಿಂತನೆಯೊಂದಿಗೆ ನಮ್ಮನ್ನು ನಗಿಸುವ ಬೋಳಾರ್ ಅವರಿಗೆ ಧನ್ಯವಾದಗಳು.

ತುಳುನಾಡಿನ Updated ಕಲಾಭಿಮಾನಿಗಳ ಪರವಾಗಿ,


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »