TOP STORIES:

FOLLOW US

ಸಿನಿಮಾರಂಗದ ಬಹುಮುಖ ಪ್ರತೀಭೆ ಕಾಮಿಡಿ – ಕಿಲಾಡಿ ಅನೀಶ್ ಪೂಜಾರಿ ವೇಣೂರು


ಬೆಳ್ತಂಗಡಿ ತಾಲ್ಲೂಕಿನ ಮೂಡುಕೋಡಿ ಗ್ರಾಮದ ಹೊಸೊಕ್ಲು ಮನೆಯ ಕೋಟ್ಯಪ್ಪ ಪೂಜಾರಿ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಅವರು ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ವೇಣೂರು ವಿದ್ಯೊದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ, ವಾಮದಪದವು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಅನೀಶ್‌ ಅವರು ಸಂಗೀತ, ನೃತ್ಯ, ಛದ್ಮವೇಷ, ಪ್ರಹಸನ, ನಾಟಕ, ಏಕಪಾತ್ರಾಭಿನಯ ಮುಂತಾದವುಗಳಲ್ಲಿ ಎತ್ತಿದ ಕೈ. ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕನಾಗಿ, ಶಿಬಿರಾರ್ಥಿಯಾಗಿ, ತರಬೇತುದಾರನಾಗಿ ಸುಮಾರು ಹನ್ನೆರಡು ವಿಶೇಷ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಶಿಬಿರಗಳಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಅನೇಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಕನಾಗಿ, ವೈವಿಧ್ಯಮಯ ಕಾರ್ಯಕ್ರಮಗಳ ಸಂಯೋಜಕನಾಗಿ, ತರಬೇತುದಾರನಾಗಿ ತೊಡಗಿಸಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.

ಕಲಾ ಚಟುವಟಿಕೆಯ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ಅನೀಶ್‌ ಗುರುತಿಸಿಕೊಂಡಿದ್ದಾರೆ. ಯುವ ಕವಿಯಾಗಿ ಕನ್ನಡ, ತುಳು ಕವನಗಳ ರಚನೆ ಮಾಡಿದ್ದಾರೆ. ಹಲವು ನಾಟಕಗಳಿಗೆ ಗೀತೆ ರಚನೆ ಮತ್ತು ಗಾಯನ ಹಾಡಿದ್ದಾರೆ. 35ಕ್ಕೂ ಹೆಚ್ಚು ನಾಟಕಗಳಲ್ಲಿ ಬಣ್ಣ ಹಚ್ಚಿದ್ದಾರೆ. ಅವರ ರಚನೆಯ ‘ಮರ್ಲ್ ಕಟ್ಟೊರ್ಚಿ’ ತುಳು ಹಾಸ್ಯಮಯ ನಾಟಕ ಮೊದಲ ಪ್ರದರ್ಶನದಲ್ಲೇ ಯಶಸ್ವಿ ಪ್ರದರ್ಶನ ಕಂಡಿದೆ. ಬೆಳ್ತಂಗಡಿ ಶ್ರೀಗುರುಮಿತ್ರ ಸಮೂಹದ ಸಾಂಸ್ಕೃತಿಕ ತಂಡದ ಉಪಾಧ್ಯಕ್ಷನಾಗಿ, ಹಲವಾರು ನಾಟಕ ತಂಡಗಳ ಸದಸ್ಯನಾಗಿ ಗುರುತಿಸಿಕೊಂಡಿದ್ದಾರೆ. ತಾಲ್ಲೂಕು, ಜಿಲ್ಲಾ, ವಿಭಾಗ, ರಾಜ್ಯ ಮಟ್ಟದ ಯುವಜನ ಮೇಳ, ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೆಚ್ಚುಗೆ ಗಳಿಸಿದ್ದಾರೆ.

ಜೀ ಕನ್ನಡದ ರಿಯಾಲಿಟಿ ಶೋಗಳಾದ ಕಾಮಿಡಿ ಕಿಲಾಡಿಗಳು, ಕಿಲಾಡಿ ಕುಟುಂಬ, ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಮುಂತಾದ ಶೋಗಳಲ್ಲಿ ಭಾಗವಹಿಸಿ ಇಡೀ ಕರ್ನಾಟಕದಾದ್ಯಂತ ಮೆಚ್ಚುಗೆ ಗಳಿಸಿದ್ದಾರೆ. ತುಳುವಿನ ಅಪ್ಪೆ ಟೀಚರ್,ಕನ್ನಡ ಕಾನೂರಾಯಣ,ಮಹಾನವ್ಯ,ಭೂನಾಟಕ ಮಂಡಳಿ,ಐ ಲವ್ ಯು, 0% ಲವ್ ಸ್ಟೋರಿ, ಮುಂತಾದ ಸಿನಿಮಾಗಳಲ್ಲಿ…ಬಣ್ಣ ಹಚ್ಚಿದ್ದಾರೆ.

ಇವರು ಬರೆದಿರುವ ರಂಗನಾಟಕ ನೇತ್ರೆ, ಈಗಾಗಲೇ 15ಕ್ಕೂ ಹೆಚ್ಚು ಪ್ರದರ್ಶನ ಕಂಡು ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಈ ನಾಟಕವು ಪಡೆದಿದೆ. ಸ್ಮಿತೇಶ್ ಎಸ್ ಬಾರ್ಯರವರು ನಿರ್ದೇಶಿಸಿರುವ ಅಂತರಂಗ ಕಿರುಚಿತ್ರಕ್ಕೆ ರಾಜ್ಯಮಟ್ಟದ ಉತ್ತಮ ನಟ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಹಾಗೂ ಈ ಚಿತ್ರಕ್ಕೆ ಐದು ರಾಜ್ಯ ಪ್ರಶಸ್ತಿಗಳು ಸಂದಿವೆ‌. ಪ್ರಸ್ತುತ ವೇಣೂರಿನ ಹಲವು ಯುವಕರೊಂದಿಗೆ ಸೇರಿಕೊಂಡು ಕಲಾಕಾರ್ ಎಂಬ ಸಂಸ್ಥೆಯಲ್ಲಿ‌ ಕಾರ್ಯನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ”ಕನಸು ಮಾರಾಟಕ್ಕಿದೆ” ಎಂಬ ಚಲನಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬೆರದು ಸ್ವತಃ ನಟಿಸಿದ್ದಾರೆ. “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರವಾಗಿದೆ. ವಾರಗಳ ಹಿಂದೆಯಷ್ಟೆ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಜನಪ್ರೀಯತೆಯನ್ನು ಹೂಂದಿದೆ.

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »