TOP STORIES:

ಸಿನಿಮಾರಂಗದ ಬಹುಮುಖ ಪ್ರತೀಭೆ ಕಾಮಿಡಿ – ಕಿಲಾಡಿ ಅನೀಶ್ ಪೂಜಾರಿ ವೇಣೂರು


ಬೆಳ್ತಂಗಡಿ ತಾಲ್ಲೂಕಿನ ಮೂಡುಕೋಡಿ ಗ್ರಾಮದ ಹೊಸೊಕ್ಲು ಮನೆಯ ಕೋಟ್ಯಪ್ಪ ಪೂಜಾರಿ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಅವರು ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ವೇಣೂರು ವಿದ್ಯೊದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ, ವಾಮದಪದವು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಅನೀಶ್‌ ಅವರು ಸಂಗೀತ, ನೃತ್ಯ, ಛದ್ಮವೇಷ, ಪ್ರಹಸನ, ನಾಟಕ, ಏಕಪಾತ್ರಾಭಿನಯ ಮುಂತಾದವುಗಳಲ್ಲಿ ಎತ್ತಿದ ಕೈ. ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕನಾಗಿ, ಶಿಬಿರಾರ್ಥಿಯಾಗಿ, ತರಬೇತುದಾರನಾಗಿ ಸುಮಾರು ಹನ್ನೆರಡು ವಿಶೇಷ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಶಿಬಿರಗಳಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಅನೇಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಕನಾಗಿ, ವೈವಿಧ್ಯಮಯ ಕಾರ್ಯಕ್ರಮಗಳ ಸಂಯೋಜಕನಾಗಿ, ತರಬೇತುದಾರನಾಗಿ ತೊಡಗಿಸಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.

ಕಲಾ ಚಟುವಟಿಕೆಯ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ಅನೀಶ್‌ ಗುರುತಿಸಿಕೊಂಡಿದ್ದಾರೆ. ಯುವ ಕವಿಯಾಗಿ ಕನ್ನಡ, ತುಳು ಕವನಗಳ ರಚನೆ ಮಾಡಿದ್ದಾರೆ. ಹಲವು ನಾಟಕಗಳಿಗೆ ಗೀತೆ ರಚನೆ ಮತ್ತು ಗಾಯನ ಹಾಡಿದ್ದಾರೆ. 35ಕ್ಕೂ ಹೆಚ್ಚು ನಾಟಕಗಳಲ್ಲಿ ಬಣ್ಣ ಹಚ್ಚಿದ್ದಾರೆ. ಅವರ ರಚನೆಯ ‘ಮರ್ಲ್ ಕಟ್ಟೊರ್ಚಿ’ ತುಳು ಹಾಸ್ಯಮಯ ನಾಟಕ ಮೊದಲ ಪ್ರದರ್ಶನದಲ್ಲೇ ಯಶಸ್ವಿ ಪ್ರದರ್ಶನ ಕಂಡಿದೆ. ಬೆಳ್ತಂಗಡಿ ಶ್ರೀಗುರುಮಿತ್ರ ಸಮೂಹದ ಸಾಂಸ್ಕೃತಿಕ ತಂಡದ ಉಪಾಧ್ಯಕ್ಷನಾಗಿ, ಹಲವಾರು ನಾಟಕ ತಂಡಗಳ ಸದಸ್ಯನಾಗಿ ಗುರುತಿಸಿಕೊಂಡಿದ್ದಾರೆ. ತಾಲ್ಲೂಕು, ಜಿಲ್ಲಾ, ವಿಭಾಗ, ರಾಜ್ಯ ಮಟ್ಟದ ಯುವಜನ ಮೇಳ, ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೆಚ್ಚುಗೆ ಗಳಿಸಿದ್ದಾರೆ.

ಜೀ ಕನ್ನಡದ ರಿಯಾಲಿಟಿ ಶೋಗಳಾದ ಕಾಮಿಡಿ ಕಿಲಾಡಿಗಳು, ಕಿಲಾಡಿ ಕುಟುಂಬ, ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಮುಂತಾದ ಶೋಗಳಲ್ಲಿ ಭಾಗವಹಿಸಿ ಇಡೀ ಕರ್ನಾಟಕದಾದ್ಯಂತ ಮೆಚ್ಚುಗೆ ಗಳಿಸಿದ್ದಾರೆ. ತುಳುವಿನ ಅಪ್ಪೆ ಟೀಚರ್,ಕನ್ನಡ ಕಾನೂರಾಯಣ,ಮಹಾನವ್ಯ,ಭೂನಾಟಕ ಮಂಡಳಿ,ಐ ಲವ್ ಯು, 0% ಲವ್ ಸ್ಟೋರಿ, ಮುಂತಾದ ಸಿನಿಮಾಗಳಲ್ಲಿ…ಬಣ್ಣ ಹಚ್ಚಿದ್ದಾರೆ.

ಇವರು ಬರೆದಿರುವ ರಂಗನಾಟಕ ನೇತ್ರೆ, ಈಗಾಗಲೇ 15ಕ್ಕೂ ಹೆಚ್ಚು ಪ್ರದರ್ಶನ ಕಂಡು ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಈ ನಾಟಕವು ಪಡೆದಿದೆ. ಸ್ಮಿತೇಶ್ ಎಸ್ ಬಾರ್ಯರವರು ನಿರ್ದೇಶಿಸಿರುವ ಅಂತರಂಗ ಕಿರುಚಿತ್ರಕ್ಕೆ ರಾಜ್ಯಮಟ್ಟದ ಉತ್ತಮ ನಟ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಹಾಗೂ ಈ ಚಿತ್ರಕ್ಕೆ ಐದು ರಾಜ್ಯ ಪ್ರಶಸ್ತಿಗಳು ಸಂದಿವೆ‌. ಪ್ರಸ್ತುತ ವೇಣೂರಿನ ಹಲವು ಯುವಕರೊಂದಿಗೆ ಸೇರಿಕೊಂಡು ಕಲಾಕಾರ್ ಎಂಬ ಸಂಸ್ಥೆಯಲ್ಲಿ‌ ಕಾರ್ಯನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ”ಕನಸು ಮಾರಾಟಕ್ಕಿದೆ” ಎಂಬ ಚಲನಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬೆರದು ಸ್ವತಃ ನಟಿಸಿದ್ದಾರೆ. “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರವಾಗಿದೆ. ವಾರಗಳ ಹಿಂದೆಯಷ್ಟೆ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಜನಪ್ರೀಯತೆಯನ್ನು ಹೂಂದಿದೆ.

 


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »