TOP STORIES:

FOLLOW US

ಯುವಕರಿಗೆ ಸ್ಫೂರ್ತಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದವರು ತಮ್ಮಯರು: ಮಹಾಬಲೇಶ್ವರ ಹೆಬ್ಬಾರ್ ಬಂಟ್ವಾಳ ಯುವವಾಹಿನಿಯಿಂದ ಬಿ.ತಮ್ಮಯ ಸಂಸ್ಮರಣೆ


ಬಂಟ್ವಾಳ: ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದು, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಯುವವಾಹಿನಿಯನ್ನು ಬೆಳೆಸುವ ಮೂಲಕ ಬಿ.ತಮ್ಮಯರು ಯುವಕರಿಗೆ ಸ್ಫೂರ್ತಿದಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಟಿ. ಹೆಬ್ಬಾರ್ ಹೇಳಿದರು.

ತುಳುಲಿಪಿ ಶಿಕ್ಷಕರಾಗಿ, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಯುವವಾಹಿನಿ ಬಂಟ್ವಾಳದ ಸ್ಥಾಪಕಾಧ್ಯಕ್ಷ ಬಿ.ತಮ್ಮಯ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಬಂಟ್ವಾಳ ಯುವವಾಹಿನಿ ಗುರುವಾರ ಸಂಜೆ ಯುವವಾಹಿನಿ ಸಭಾಭವನದಲ್ಲಿ ಆಯೋಜಿಸಿದ್ದು, ಈ ವೇಳೆ ತಮ್ಮಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ನುಡಿನಮನ ಸಲ್ಲಿಸಿದ ಹೆಬ್ಬಾರ್, ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.

ಈ ವೇಳೆ ಮಾತನಾಡಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಡಾ. ತುಕಾರಾಮ ಪೂಜಾರಿ, ತಮ್ಮಯರ ಜ್ಞಾನಸಂಪತ್ತು ಅಗಾಧ, ಅವರು ಸ್ನೇಹಜೀವಿಯಾಗಿದ್ದುಕೊಂಡು, ಇತಿಹಾಸದ ಕುರಿತು ಸಾಕಷ್ಟು ಅಧ್ಯಯನ ನಡೆಸಿದ್ದರು ಎಂದರು.
ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷ ಲೋಕನಾಥ್ ಶೆಟ್ಟಿ, ದ.ಕ. ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಉಪಾಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಬಂಟ್ವಾಳ ತಾಲೂಕು ಕಂದಾಯ ನಿರಿಕ್ಷಕ ನವೀನ್ ಬೆಂಜನಪದವು ತಮ್ಮಯರ ನೆನಪುಗಳನ್ನು ಮೆಲುಕು ಹಾಕಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ.ಇಂದಿರೇಶ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಮಾಜಿ ಅಧ್ಯಕ್ಷ ಶ್ರೀಧರ ಅಮೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಲೋಕೇಶ ಸುವರ್ಣ ಅಲೆತ್ತೂರು ವಂದಿಸಿದರು.

ಕಾರ್ಯಕ್ರಮದಲ್ಲಿ ತಮ್ಮಯ ಅವರ ಪುತ್ರ ನಿಶಾಂತ್, ಬಂಟ್ವಾಳ ಗ್ಯಾರೇಜ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಬಿ, ಪಿಂಚಣಿದಾರರ ಸಂಘದ ಕಾರ್ಯದರ್ಶಿ ನೀಲೋಜಿ ರಾವ್, ಬಿ.ಸಿ.ರೋಡ್ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಸಮಿತಿಯ ಶಿವಶಂಕರ್, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ, ಸಲಹೆಗಾರರಾದ ಅಣ್ಣು ಪೂಜಾರಿ, ಪ್ರೇಮನಾಥ್ ಕೆ, ಬಂಟ್ವಾಳ ತಾಲೂಕು ಕಚೇರಿಯ ಜನಾರ್ಧನ್, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಸಹಿತ ತಮ್ಮಯರ ಅಭಿಮಾನಿಗಳು ಉಪಸ್ಥಿತರಿದ್ದರು.
ರಾಜೇಶ್ ಸುವರ್ಣ ಸ್ವಾಗತಿಸಿದರು, ಯತೀಶ್ ಕಾರ್ಯಕ್ರಮ ನಿರ್ವಹಿಸಿದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »