TOP STORIES:

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಣೆ


ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಿಸಲಾಯಿತು.

ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ಸುರತ್ಕಲ್ ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಸಹಕಾರದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಭಾನುವಾರ ದ.ಕ ಹಾಗೂ ಉಡುಪಿ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ನಡೆಯಿತು.

ಬಡ ಕುಟುಂಬದಲ್ಲಿ ಹುಟ್ಟಿ, ಸರಳತೆ ಮೈಗೂಡಿಸಿಕೊಂಡು, ಸಮಾಜಸೇವೆ ಮೂಲಕ ಬಡಜನರ ಏಳಿಗೆಗೆ ಶ್ರಮಿಸಿದವರು ಜೆ.ಪಿ.ನಾರಾಯಣ ಸ್ವಾಮಿ. ಅವರು ತಮ್ಮ ಜೀವಿತಾವಧಿಯಲ್ಲಿ ಸಹಸ್ರಾರು ಮಂದಿಗೆ ಸಹಾಯ ಮಾಡಿದ್ದರು ಎಂದು ಬೆಂಗಳೂರಿನ ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಟ್ರಸ್ಟಿ ಕುಸುಮಾ ಅಜಯ್ ಉದ್ಘಾಟಿಸಿ ಮಾತನಾಡಿದರು.

ನಾವು ಮಾಡುವ ಆಸ್ತಿ ಯಾವತ್ತೂ ಶಾಶ್ವತ ಅಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಕೌಶಲಗಳನ್ನು ಬೆಳೆಸಿಕೊಂಡು ಜ್ಞಾನಾರ್ಜನೆ ಮೂಲಕ ಸಮಾಜ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಜೆ.ಪಿ. ನಾರಾಯಣ ಸ್ವಾಮಿಯವರು ತಮ್ಮ ಜೀವಿತಾವಧಿಯಲ್ಲಿ ಅಸಂಖ್ಯಾತ ಬಡವರು, ಅಶಕ್ತರಿಗೆ ಸಹಾಯಹಸ್ತ ನೀಡಿದ್ದಾರೆ. ಅನೇಕ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪ್ರೋತ್ಸಾಹಿಸಿದ್ದ ಅವರು ಎಲ್ಲರಿಗೂ ದಾರಿದೀಪವಾಗಿದ್ದರು. ಶ್ರೀಯುತರು ವಿಧಿವಶರಾದ ಮೇಲೆ ಅವರ ಪುತ್ರ ಜೆ.ಪಿ.ಸುಧಾಕರ್ ಅವರು ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಎಂಬ ಸೇವಾ ಸಂಸ್ಥೆ ಸ್ಥಾಪಿಸಿ ತಂದೆಯ ಆದರ್ಶಗಳನ್ನು ಪಾಲಿಸುತ್ತ ಬಂದಿದ್ದಾರೆ ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಪ್ರತಿಷ್ಠಾನದ ಸ್ಥಾಪನೆಯಾದ 2 ವರ್ಷಗಳಿಂದ ಕರ್ನಾಟಕದಾದ್ಯಂತ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧ ನೀಡುತ್ತ ಬರಲಾಗಿದೆ. ಈ ವರ್ಷ ಕರ್ನಾಟಕ ರಾಜ್ಯಾದ್ಯಂತ 77 ಲಕ್ಷ ರೂ. ಪ್ರೋತ್ಸಾಹಧನವನ್ನು ವಿತರಿಸಲಾಗಿದೆ. ಅಲ್ಲದೆ ವೃದ್ಧರು, ಅಶಕ್ತರು, ಆರ್ಥಿಕವಾಗಿ ಹಿಂದುಳಿದವರು, ಬಡ ಅನಾರೋಗ್ಯಪೀಡಿತರಿಗೆ ಆರ್ಥಿಕ ಸಹಾಯ ನೀಡುತ್ತ ಬರಲಾಗುತ್ತಿದೆ. ಆರೋಗ್ಯ ಶಿಬಿರ, ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ, ಪದವೀಧರ ಯುವತಿ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಸಾರ್ವಜನಿಕರ ಸೇವೆಗೂ ಗಮನಹರಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಜೆ.ಪಿ.ನಾರಾಯಣ ಸ್ವಾಮಿ ಜಯಂತಿ ದಿನ ಸಮಾಜದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿರುವ ಹಿರಿಯರು, ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಸಮಾಜ ಸೇವೆಗೈದವರಿಗೆ ಜೆಪಿಎನ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು.

ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಜೆ.ಪಿ.ನಾರಾಯಣ ಸ್ವಾಮಿ ಟ್ರಸ್ಟ್‌ ಟ್ರಸ್ಟಿ ಅಜಯ್ ಉಪಸ್ಥಿತರಿದ್ದರು. ಚಂದ್ರಶೇಖರ ನಾನಿಲ್ ಸ್ವಾಗತಿಸಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »