TOP STORIES:

FOLLOW US

ಕೋವಿಡ್ ಮಾರ್ಗಸೂಚಿಪಾಲಿಸಿ ಮಂಗಳೂರು ದಸರಾ ಆಚರಣೆ


ಕೋವಿಡ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಹೇಳಿದರು.

ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಹಿನ್ನಲೆಯಲ್ಲಿ ಮಂಗಳೂರು ದಸರಾ ಈ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ದಸರಾ ಸಂದರ್ಭ ಕ್ಷೇತ್ರದ ಭೇಟಿ ನೀಡುವ ಸಂದರ್ಭ ಸ್ಯಾನಿಟೈಸರ್ , ಮಾಸ್ಕ್, ಥರ್ಮಲ್ ಸ್ಕ್ಯಾನ್ ಬಳಸಲು ಸೂಚನೆ ನೀಡಲಾಗುವುದು. ಇದಕ್ಕೆ ನಿದೇ೵ಶನ ನೀಡಲು ಪ್ರತಿನಿತ್ಯ 150ರಿಂದ 200ಸಂಖ್ಯೆಯ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರು ಮಾತನಾಡಿ, ಕೋವಿಡ್ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆಯನ್ನು ನಡೆಸುವುದು ಅನಿವಾರ್ಯವಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ-ನಿರ್ಗಮನ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ದಸರಾ ಯಶಸ್ವಿಯಾಗಲು ಎಲ್ಲರ ಸಹಕಾರವೂ ಅಗತ್ಯ ಎಂದರು.

ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾದ೵ನ ಪೂಜಾರಿ ಅಭಿಲಾಷೆ, ಮಾರ್ಗದಶ೵ನದಂತೆ ಈ ಬಾರಿಯ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಸರಕಾರ ಮಾಗ೵ಸೂಚಿ ಅನುಸರಿಸಿ, ಧಾರ್ಮಿಕ ನಂಬಿಕೆ, ಸಂಪ್ರದಾಯ ಪ್ರಕಾರ ದಸರಾ ಮಹೋತ್ಸವ ನಡೆಯಲಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಇದಕ್ಕಾಗಿ ಕಾಯ೵ಕತ೵ರ ತಂಡವನ್ನು ರಚಿಸಲಾಗುವುದು ಎಂದರು.

ಸಭೆಯಲ್ಲಿ ಹಾಜರಿದ್ದ ನಾನಾ ಸಂಘಸಂಸ್ಥೆಗಳ ಮುಖಂಡರು, ಕ್ಷೇತ್ರದ ಭಕ್ತಾದಿಗಳು, ಮಹಿಳಾ ಸಮಿತಿ ಸದಸ್ಯರು ತಮ್ಮ ಸಲಹೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕಕೇ೵ರಾ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »