TOP STORIES:

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್


ಒಬ್ಬ ವ್ಯಕ್ತಿ ತನ್ನ ನಿಸ್ವಾರ್ಥ ಸೇವೆಯಿಂದ ಇನ್ನೊಬ್ಬರ ಬದುಕಿನ ಚಿತ್ರಕ್ಕೆ ಬಣ್ಣದಿಂದ ಕೂಡಿದ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೋ ಆಗ ಮಾತ್ರ ವೇದಿಕೆ ಸಿಗುತ್ತದೆ ತನ್ನಲಿರುವ ಪ್ರತಿಭೆಯ ಜೊತೆಗೆ ಇನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್.
ಮಂಗಳೂರಿನ ಪುತ್ತುರ್ ನಲ್ಲಿ ಪುಟ್ಟ ಹಳ್ಳಿಯಲ್ಲಿ ಜನಿಸಿದ ಇವರು, ಬೆಳೆದ್ದದು ಬೆಳ್ತಂಗಡಿ ತಾಲೂಕಿನ ಮಡ್ಯಾಂತರು. ಸಣ್ಣ ವಯಸ್ಸಿನಿಂದಲೇ ಹಾಡುವುದು ಎಂದರೆ ಪಂಚಪ್ರಾಣ. ಮನೆಯಲ್ಲಿ ಯಾರ ಪ್ರೋತ್ಸಾಹ ಸಿಗಲಿಲ್ಲ ಆದರೂ ಸಂಗೀತದ ಹುಚ್ಚ ಬಿಡಲಿಲ್ಲ. ತುಳುಚಿತ್ರರಂಗ, ರಂಗ ಭೂಮಿಯಲ್ಲಿ ಹಾಡಲು ಮೊದಲು ಬಾರಿಗೆ ಅವಕಾಶ ಕಲ್ಪಿಸಿಕೊಟ್ಟು ಸ್ನೇಹ ಮ್ಯೂಸಿಕ್ ನ ಪ್ರಶಾಂತ್ ಭಾರದ್ವಾಜ್ ಇವರ ಜೊತೆ ಅನೇಕ ಕಾರ್ಯಕ್ರಮಗಲ್ಲಿ 400 ಕ್ಕೂ ಹೆಚ್ಚು ವೇದಿಕೆಗಳಲ್ಲಿ ತನ್ನ ಪ್ರತಿಭೆಯನ್ನು ತೋರಿಸಿದ ಇವರು ಕಾರಣಾಂತರದಿಂದ ಸಂಗೀತದಿಂದ ದೂರಾನೇ ಉಳಿದರು.

ನಂತರ 2006 ರಲ್ಲಿ ಗಾಯನದ ಜೊತೆ ಸಂಗೀತ ನಿರ್ದೇಶಕರಾಗಿ ರಂಗಭೂಮಿ ಪ್ರವೇಶಮಾಡಿದ ಇವರು ಮತ್ತೆ ಹಿಂದೆ ನೋಡಲಿಲ್ಲ, ಒಂದು ಕಾಲದಲ್ಲಿ ನಾಟಕದಲ್ಲಿ ಹಿನ್ನಲೆ ಹಾಡುಗಾರ ನಾಗಿದ್ದ ಇವರು ನಾಟಕ ಸೂಪರ್ ಹಿಟ್ ಆಗುವುದರಲ್ಲಿ ಎರಡು ಮಾತಿಲ್ಲ ಮತ್ತು ಆ ಕಾಲದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಡುಗಾರರು ಆಗಿದ್ದರು ಸ್ಥಳೀಯ ನಾಟಕ ನಿಂತು, ಟೀಮ್ ನಾಟಕ ಆದಾಗ ಲ್ಯಾಪ್ ಟಾಪ್ ಸಂಗೀತ ಶುರು ಆದಾಗ ರಂಗ ಭೂಮಿಯಿಂದ ದೂರ ಸರಿದು ಸಂಗೀತ ರಸ ಮಂಜರಿ ಕಾರ್ಯಕ್ರಮ ನೀಡಲು ಶುರು ಮಾಡಿದ ಇವರು ಅನೇಕ ಹೊಸ ಪ್ರತಿಭೆಗಳು ಪರಿಚಯ ಮಾಡಿ ಕೊಟ್ಟು ಅವರಿಗೆ ವೇದಿಕೆ ಕಲ್ಪಿಸಿ ಕೊಟ್ಟರು.

20ವರ್ಷದಿಂದ ಸಂಗೀತ ಕ್ಷೇತ್ರದಲ್ಲಿ ಇದ್ದ ಇವರು ಕಳೆದ ನಾಲ್ಕು ವರ್ಷದಿಂದ ಉತ್ತಮ ಸಂಗೀತ ನಿರೂಪಕರಾಗಿ ಹೆಸರು ಗಳಿಸಿದ್ದಾರೆ.

ಇಡೀ ಜಗತ್ತಿನಲ್ಲಿ ಮಹಾಮಾರಿ ಕೋರೋಣ ಬಂದು ಲಾಕ್ಡೌನಿಂದ ಬೇಸತ್ತ ಜನರ ಮನಸ್ಸನ್ನು ಮುದಗೊಳಿಸಲು ಸಂಗೀತ ಫೇಸ್ಬುಕ್ ಲೈವ್ ಪ್ರೋಗ್ರಾಮ್ ಪ್ರಾರಂಭಿಸಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ 40ಕ್ಕೂ ಹೆಚ್ಚು ಲೈವ್ ಪ್ರೋಗ್ರಾಮ್ ಯಶಸ್ವಿ ಮಾಡಿ ಅನೇಕ ಪ್ರತಿಭೆಗಳ ಪರಿಚಯ ಮಾಡಿ ಅವರಿಗೆ ಮುನ್ನಡೆಯಲು ಅವಕಾಶ ಮಾಡಿಕೊಟ್ಟ ಹೆಮ್ಮೆ ಇವರದ್ದು. ಇವರ ಈ ಲೈವ್ ಪ್ರೋಗ್ರಾಮ್ ಲಕ್ಷಾಂತರ ವೀಕ್ಷಕರು ನೋಡುವುದರ ಮೂಲಕ ಇವರ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯಿತ್ತು.

ತನ್ನ ಪ್ರತಿಭೆ ಜೊತೆ ಇನ್ನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಇವರ ಒಳ್ಳೆಯ ಮನಸ್ಸಿಗೆ ದೇವರ ಅನುಗ್ರಹ ಸದಾ ಇರಲಿ ಸಂಗೀತದಲ್ಲಿ ಇನ್ನಷ್ಟು ಎತ್ತರದ ಸಾಧನೆ ಮಾಡವಲಿ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡುವ.

ಪ್ರಶಾಂತ್ ಅಂಚನ್ – ಮಸ್ಕತ್ತ್ (Billava warriors)


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »