TOP STORIES:

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್


ಒಬ್ಬ ವ್ಯಕ್ತಿ ತನ್ನ ನಿಸ್ವಾರ್ಥ ಸೇವೆಯಿಂದ ಇನ್ನೊಬ್ಬರ ಬದುಕಿನ ಚಿತ್ರಕ್ಕೆ ಬಣ್ಣದಿಂದ ಕೂಡಿದ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೋ ಆಗ ಮಾತ್ರ ವೇದಿಕೆ ಸಿಗುತ್ತದೆ ತನ್ನಲಿರುವ ಪ್ರತಿಭೆಯ ಜೊತೆಗೆ ಇನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್.
ಮಂಗಳೂರಿನ ಪುತ್ತುರ್ ನಲ್ಲಿ ಪುಟ್ಟ ಹಳ್ಳಿಯಲ್ಲಿ ಜನಿಸಿದ ಇವರು, ಬೆಳೆದ್ದದು ಬೆಳ್ತಂಗಡಿ ತಾಲೂಕಿನ ಮಡ್ಯಾಂತರು. ಸಣ್ಣ ವಯಸ್ಸಿನಿಂದಲೇ ಹಾಡುವುದು ಎಂದರೆ ಪಂಚಪ್ರಾಣ. ಮನೆಯಲ್ಲಿ ಯಾರ ಪ್ರೋತ್ಸಾಹ ಸಿಗಲಿಲ್ಲ ಆದರೂ ಸಂಗೀತದ ಹುಚ್ಚ ಬಿಡಲಿಲ್ಲ. ತುಳುಚಿತ್ರರಂಗ, ರಂಗ ಭೂಮಿಯಲ್ಲಿ ಹಾಡಲು ಮೊದಲು ಬಾರಿಗೆ ಅವಕಾಶ ಕಲ್ಪಿಸಿಕೊಟ್ಟು ಸ್ನೇಹ ಮ್ಯೂಸಿಕ್ ನ ಪ್ರಶಾಂತ್ ಭಾರದ್ವಾಜ್ ಇವರ ಜೊತೆ ಅನೇಕ ಕಾರ್ಯಕ್ರಮಗಲ್ಲಿ 400 ಕ್ಕೂ ಹೆಚ್ಚು ವೇದಿಕೆಗಳಲ್ಲಿ ತನ್ನ ಪ್ರತಿಭೆಯನ್ನು ತೋರಿಸಿದ ಇವರು ಕಾರಣಾಂತರದಿಂದ ಸಂಗೀತದಿಂದ ದೂರಾನೇ ಉಳಿದರು.

ನಂತರ 2006 ರಲ್ಲಿ ಗಾಯನದ ಜೊತೆ ಸಂಗೀತ ನಿರ್ದೇಶಕರಾಗಿ ರಂಗಭೂಮಿ ಪ್ರವೇಶಮಾಡಿದ ಇವರು ಮತ್ತೆ ಹಿಂದೆ ನೋಡಲಿಲ್ಲ, ಒಂದು ಕಾಲದಲ್ಲಿ ನಾಟಕದಲ್ಲಿ ಹಿನ್ನಲೆ ಹಾಡುಗಾರ ನಾಗಿದ್ದ ಇವರು ನಾಟಕ ಸೂಪರ್ ಹಿಟ್ ಆಗುವುದರಲ್ಲಿ ಎರಡು ಮಾತಿಲ್ಲ ಮತ್ತು ಆ ಕಾಲದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಡುಗಾರರು ಆಗಿದ್ದರು ಸ್ಥಳೀಯ ನಾಟಕ ನಿಂತು, ಟೀಮ್ ನಾಟಕ ಆದಾಗ ಲ್ಯಾಪ್ ಟಾಪ್ ಸಂಗೀತ ಶುರು ಆದಾಗ ರಂಗ ಭೂಮಿಯಿಂದ ದೂರ ಸರಿದು ಸಂಗೀತ ರಸ ಮಂಜರಿ ಕಾರ್ಯಕ್ರಮ ನೀಡಲು ಶುರು ಮಾಡಿದ ಇವರು ಅನೇಕ ಹೊಸ ಪ್ರತಿಭೆಗಳು ಪರಿಚಯ ಮಾಡಿ ಕೊಟ್ಟು ಅವರಿಗೆ ವೇದಿಕೆ ಕಲ್ಪಿಸಿ ಕೊಟ್ಟರು.

20ವರ್ಷದಿಂದ ಸಂಗೀತ ಕ್ಷೇತ್ರದಲ್ಲಿ ಇದ್ದ ಇವರು ಕಳೆದ ನಾಲ್ಕು ವರ್ಷದಿಂದ ಉತ್ತಮ ಸಂಗೀತ ನಿರೂಪಕರಾಗಿ ಹೆಸರು ಗಳಿಸಿದ್ದಾರೆ.

ಇಡೀ ಜಗತ್ತಿನಲ್ಲಿ ಮಹಾಮಾರಿ ಕೋರೋಣ ಬಂದು ಲಾಕ್ಡೌನಿಂದ ಬೇಸತ್ತ ಜನರ ಮನಸ್ಸನ್ನು ಮುದಗೊಳಿಸಲು ಸಂಗೀತ ಫೇಸ್ಬುಕ್ ಲೈವ್ ಪ್ರೋಗ್ರಾಮ್ ಪ್ರಾರಂಭಿಸಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ 40ಕ್ಕೂ ಹೆಚ್ಚು ಲೈವ್ ಪ್ರೋಗ್ರಾಮ್ ಯಶಸ್ವಿ ಮಾಡಿ ಅನೇಕ ಪ್ರತಿಭೆಗಳ ಪರಿಚಯ ಮಾಡಿ ಅವರಿಗೆ ಮುನ್ನಡೆಯಲು ಅವಕಾಶ ಮಾಡಿಕೊಟ್ಟ ಹೆಮ್ಮೆ ಇವರದ್ದು. ಇವರ ಈ ಲೈವ್ ಪ್ರೋಗ್ರಾಮ್ ಲಕ್ಷಾಂತರ ವೀಕ್ಷಕರು ನೋಡುವುದರ ಮೂಲಕ ಇವರ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯಿತ್ತು.

ತನ್ನ ಪ್ರತಿಭೆ ಜೊತೆ ಇನ್ನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಇವರ ಒಳ್ಳೆಯ ಮನಸ್ಸಿಗೆ ದೇವರ ಅನುಗ್ರಹ ಸದಾ ಇರಲಿ ಸಂಗೀತದಲ್ಲಿ ಇನ್ನಷ್ಟು ಎತ್ತರದ ಸಾಧನೆ ಮಾಡವಲಿ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡುವ.

ಪ್ರಶಾಂತ್ ಅಂಚನ್ – ಮಸ್ಕತ್ತ್ (Billava warriors)


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »