TOP STORIES:

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*


ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ*

ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ ಕುಂದಾಪುರದ ಬೀದಿಯಲ್ಲಿ ತನ್ನ ಭಯಾನಕ ವರ್ತನೆಯಿಂದ ಸಾರ್ವಜನಿಕ ವಲಯದಲ್ಲಿ ಆಂತಕ ಸ್ರಷ್ಟಿಸಿದ್ದ ಸುದ್ದಿ ವಾಟ್ಸಪ್ಪ್ ನಲ್ಲಿ ಹರಿದಾಡಿತ್ತು.

ವೇಗವಾಗಿ ನಡೆಯುತ್ತಾ ಸಾರ್ವಜನಿಕರ ಮೇಲೆ ಮುಗಿ ಬೀಳುವ ಈತನಿಂದ ಈಗಾಗಲೇ ಹಲವರು ಮಾರಕ ಹಲ್ಲೆಗೊಳಗಾಗಿದ್ದಾರೆ. ಅಲ್ಲದೇ ಮಹಿಳೆಯರ ಬೆಂಬತ್ತುವ ಈತ ನೇರವಾಗಿ ಅವರ ದೇಹದ ಮೇಲೆ ಕೈಹಾಕುತ್ತಿರುವ ಘಟನೆಗಳು ನಡೆದಿದ್ದು  ವಿದ್ಯಾರ್ಥಿನಿಗಳ ಸಹಿತ ಇನ್ನಿತರ ಮಹಿಳೆಯರು ಈತನ ವಿಕಾರತೆಗೆ ಸಿಲುಕಿದ್ದಾರೆನ್ನಲಾಗಿದೆ. ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಈತನ  ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ಮ್ಯಾನರ್ ವಾಟ್ಸಪ್ಪ್ ಗ್ರೂಪ್ ನಲ್ಲಿ ಹಾಕಿದ್ದು ಇದಕ್ಕೆ ಆದಷ್ಟು ಬೇಗ ಸಾಮಾಜಿಕ ಕಾರ್ಯಕರ್ತರು ಸ್ಪಂದಿಸಬೇಕು ಎಂದು ರವಿ ಮ್ಯಾನರ್ ವಿನಂತಿಸಿದ್ದರು.

ಈ ಸುದ್ದಿ ತಿಳಿದ ಕೂಡಲೇ ಸಾಮಾಜಿಕ ಕಾರ್ಯಕರ್ತ ಮತ್ತು ಕುಂದಾಪರ ಮಿತ್ರ ವರದಿಗಾರ ಕಿರಣ್ ಪೂಜಾರಿಯವರು ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಅವರ ಗಮನಕ್ಕೆ ತಂದು, ದಿನಾಂಕ 15/10/2020ರಂದು ಬೆಳ್ಳಿಗೆ ಆ ವ್ಯಕ್ತಿ ಚಲನವಲನ್ನು ಗಮನಿಸಿದ್ದ ಕಿರಣ್ ರವರು ಕೂಡಲೇ ಪಿ.ಎಸ್.ಐ ಸದಾಶಿವ ಆರ್ ಗವರೋಜಿರವರಿಗೆ ಮಾಹಿತಿ ನೀಡಿ, ಕುಂದಾಪುರ ಪೊಲೀಸ್ ಸುಧಾಕರ್, ರಾಘವೇಂದ್ರ, ಆನಂದ ಹಾಗೂ ಸ್ಥಳೀಯ ಪುರಸಭೆ ಸದಸ್ಯರಾದ ಪ್ರಭಾಕರ ಮತ್ತು ಹುಸೈನ್ ಹೈಕಾಡಿ ಅವರ ನೆರವಿನೊಂದಿಗೆ ಮಾನಸಿಕ ಅಸ್ವಸ್ಥನ ಮನವೊಲಿಸಿ ಅವರನ್ನು ಕೋಟ ನಾಗರಾಜ್ ರವರ ಆಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾರ್ಡ್ ಸರಕಾರಿ ಆಸ್ಪತ್ರೆಗೆ ಚಿಕ್ಸಿತೆಗೆ ಕೊಂಡೊಯ್ಯಲಾಗಿದೆ. ಜನತೆಗೆ ನೆಮ್ಮದಿ ದೊರೆತ್ತಿದು, ಕುಂದಾಪುರ ಪೊಲೀಸರ ಮಾನವೀಯ ಕಾರ್ಯಕ್ಕೆ ಕುಂದಾಪುರ ಜನತೆ ತಲೆದೂಗಿದೆ. ಕುಂದಾಪುರದ ಸಮಸ್ತ ಜನತೆ ಪರವಾಗಿ ಧನ್ಯವಾದವನ್ನು ಸಮರ್ಪಿಸುತ್ತೇವೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶ ಪಡೆದು ಧಾರವಾಡ ಡಿಮ್ಯಾನ್ಸ್ ಆಸ್ಪತ್ರೆಗೆ ಕೋಡಿಯ NMA ಆಸ್ಪತ್ರೆಯವರ ಹಾಗೂ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ NMA ಯಾ ಶಾಬಾನ್ ಹಂಗಳೂರ್ NMA ಯಾ ಅಧ್ಯಕ್ಷ ರಫೀಕ್ ಬಿ ಎಸ್ ಎಫ್ ಇವರ ಸಹಕಾರ ದಿಂದ ಅಂಬ್ಯುಲೆನ್ಸ್ ಮೂಲಕ ಸಿಬ್ಬಂದಿವರ ಭದ್ರಿಕೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »