TOP STORIES:

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »