TOP STORIES:

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »