TOP STORIES:

FOLLOW US

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ


ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.

✍️ಸುಖ್ ಪಾಲ್ ಪೊಳಲಿ


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »