TOP STORIES:

FOLLOW US

ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು


ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು……

ಪದ್ಮರಾಜ್ ಸರ್ ರವರು ಕೇವಲ ವ್ಯಕ್ತಿಯಲ್ಲ, ಅವರೊಂದು ಶಕ್ತಿ.ಅವರ ಜೊತೆ ಮಾತನಾಡುವಾಗ ಆ ಶಕ್ತಿಯ ಪ್ರಭಾವ ನಮ್ಮ ಮೇಲೆ ಪ್ರವಹಿಸುತ್ತದೆ ಹಾಗೂ ವಿಶೇಷವಾದ ಭಕ್ತಿಭಾವ,ಗೌರವ ಮೂಡುತ್ತದೆ.ಅಷ್ಟೊಂದು ಆಕರ್ಷಣೀಯ ವ್ಯಕ್ತಿತ್ವ. ಅವರಾಡುವ ಮಾತುಗಳು ಕೇವಲ ಬಾಯಿಂದ ಹೊರಡುವುದಲ್ಲ,ಹ್ರದಯದಿಂದ ಮೂಡುವಂತಹದ್ದು.ಮಾತಿನಲ್ಲಿ ಎಲ್ಲಿಯೂ ಕಲ್ಮಷವಿಲ್ಲ.ನೇರ ನಡೆನುಡಿಯ,ಪ್ರೀತಿ ತುಂಬಿದ, ಸೌಜನ್ಯಯುತ ಮಾತುಗಳು ಎಂತಹವರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ.ಯಾರ ಜೊತೆ ಮಾತನಾಡುವಾಗಲೂ ಮುಖದಲ್ಲಿ ಮೂಡುವ ಮಂದಹಾಸ ಮುಗುಳ್ನಗೆಯಲ್ಲಿ ಪ್ರಾಮಾಣಿಕತೆ, ಪ್ರೀತಿ ತುಂಬಿರುತ್ತದೆ.ನೊಂದವರು,ಶೋಷಿತರು ಯಾರೇ ಅವರನ್ನು ಸಂಪರ್ಕಿಸಲಿ,ಕೂಡಲೇ ಸ್ಪಂದಿಸುವ ಮಾನವೀಯ ಹ್ರದಯವಿದೆ.ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಯಾಗಿ,ಅವರ ತತ್ವಾದರ್ಶದಂತೆ ಸರ್ವಧರ್ಮೀಯರನ್ನು ಸಮಾನರಂತೆ ಕಾಣುವ ಹ್ರದಯ ವೈಶಾಲ್ಯತೆ. ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿ ಕೊಡುವ ಧೀಮಂತ ನಾಯಕ.*
_ಎಳೆಯ ಪ್ರಾಯದಲ್ಲೇ ಎಲ್ಲಾ ಸದ್ಗುಣಗಳನ್ನು ಮೈಗೂಡಿಸಿ, ನಾರಾಯಣ ಗುರುಗಳು ತಮ್ಮ ದಿವ್ಯಹಸ್ತದಿಂದ ಪ್ರತಿಷ್ಠಾಪಿಸಿದ ಕರ್ನಾಟಕ ರಾಜ್ಯದ ಏಕೈಕ ಕ್ಷೇತ್ರವಾದ ಕುದ್ರೋಳಿ ದೇವಾಲಯದಲ್ಲಿ ದೀರ್ಘಕಾಲದಿಂದ ಕೋಶಾಧಿಕಾರಿಯಾಗಿ ಆಡಳಿತ ಮಂಡಳಿಯೊಳಗಡೆ ಹಳೇ ಬೇರು,ಹೊಸ ಚಿಗುರು ಎಂಬಂತೆ ಎಲ್ಲಾ ಹಿರಿಯರ ಗೌರವಕ್ಕೆ ಪಾತ್ರರಾಗಿ,ಬಡವರ ಕಣ್ಮಣಿ – ನಡೆದಾಡುವ ದೇವರೆಂದೇ ಖ್ಯಾತರಾದ ಶ್ರೀ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಬೆಳಗಿದ ಬಿಲ್ಲವ ಸಮಾಜದ ಕಣ್ಮಣಿಯಾಗಿ,ಯುವಕರ ಪಾಲಿಗೆ ಸ್ಪೂರ್ತಿಯ ಚಿಲುಮೆಯಾದ ಪದ್ಮರಾಜ್ ರವರಿಗೆ ನಿಜಕ್ಕೂ ಬಿಲ್ಲವ ಸಮಾಜವನ್ನು ಮುನ್ನಡೆಸುವ ಶಕ್ತಿ ಇದೆ.ಈಗಾಗಲೇ ಅದೆಷ್ಟೋ ಬಿಲ್ಲವ ಸಮಾಜದ ಸಂಘಟನೆಯೊಳಗೆ ಭಿನ್ನಮತ ತಲೆದೋರಿದಾಗ ಎಲ್ಲರೂ ಹುಡುಕಿಕೊಂಡು ಬರುವುದು ಪದ್ಮರಾಜ್ ರವರ ಬಳಿಗೆ. ಎರಡೂ ಕಡೆಯವರನ್ನು ಕುಳ್ಳಿರಿಸಿ,ತನ್ನ ಮಾತಿನ ಶಕ್ತಿಯಿಂದ ಐಕ್ಯತೆ ಸಾಧಿಸಿದ ಸಮನ್ವಯಕಾರ. ರಾಜಕೀಯದಲ್ಲಿ ಎಲ್ಲಿಯೂ ಗುರುತಿಸಿಕೊಳ್ಳದೆ,ಎಲ್ಲರ ಪ್ರೀತಿ ವಿಶ್ವಾಸಗಳಿಸಿದ ಪದ್ಮರಾಜ್ ರವರನ್ನು ಅಜಾತಶತ್ರು ಎಂದರೆ ತಪ್ಪಾಗಲಾರದು.ದೇಶದಲ್ಲೇ ಗಮನ ಸೆಳೆದಿರುವ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತಾಧಿಗಳ ನೇರ ಸಂಪರ್ಕ ಹಾಗೂ ಅವರನ್ನು ಹೆಸರು ಕರೆದು ಪ್ರೀತಿಯಿಂದ ಮಾತನಾಡಿಸುವ ಗುಣದ ಮೂಲಕ ಅವರ ನೆನಪು ಶಕ್ತಿಯ ಅಗಾಧತೆಯನ್ನು ಎತ್ತಿ ತೋರಿಸುತ್ತದೆ._
*ಇಂತಹ ಅಪಾರ ಪಾಂಡಿತ್ಯ ಹೊಂದಿದ ಪದ್ಮರಾಜ್ ರವರು ಗೋಕರ್ಣಾ ದೇವರ ದಯೆಯಿಂದ,ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರೇರಣೆಯಿಂದ ಕೊರೋನಾ ಸಂಕಷ್ಟದ ಕಾಲದಲ್ಲೂ ಯಾವ ಕ್ಷೇತ್ರದಿಂದಲೂ ಸಾಧ್ಯವಾಗದ ಕೆಲಸವನ್ನು ಪದ್ಮರಾಜ್ ರವರು ಸ್ವತಃ ಮುಂದಡಿಯಿಟ್ಟು, ಅದೆಷ್ಟೋ ಮಾನವೀಯ ಹ್ರದಯಗಳನ್ನು ಒಟ್ಟು ಸೇರಿಸಿ, ಸುಮಾರು 350 ಕ್ವಿಂಟಾಲ್ ಅಕ್ಕಿಯನ್ನು ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸಾವಿರಾರು ಕುಟುಂಬಗಳಿಗೆ ನೇರವಾಗಿ ಮನೆ ಬಾಗಿಲಿಗೆ ತಲುಪಿಸಿದ್ದು ನಿಜಕ್ಕೂ ಅತ್ಯದ್ಭುತವಾಗಿದೆ. ಕೋರೋನಾ ನೆಪದಲ್ಲಿ ದಸರಾ ಉತ್ಸವವನ್ನು ಮಾಡಲು ಜಿಲ್ಲಾಡಳಿತ ನಿರಾಕರಿಸಿದಾಗ, ಜನರ ಪರವಾಗಿ ತಮ್ಮ ವಾದವನ್ನು ಸಮರ್ಥವಾಗಿ ಮಂಡಿಸಿ ಜಿಲ್ಲಾಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಹುಬ್ಬೇರಿಸುವಂತೆ ಮಾಡಿದ ನಿಜವಾದ ಜನನಾಯಕ.ಇವರ ಮುತುವರ್ಜಿಯಿಂದ ಹಾಗೂ ಜನಾರ್ದನ ಪೂಜಾರಿಯವರ ಮಾರ್ಗದರ್ಶನದಿಂದಲೇ ಈ ಬಾರಿ ನಮ್ಮ ದಸರಾ ನಮ್ಮ ಸುರಕ್ಷೆ ಎಂಬ ಘೋಷವಾಕ್ಯದೊಂದಿಗೆ ಯಶಸ್ವಿ ದಸರಾ ನಡೆದಿರುವುದನ್ನು ನಾವೆಂದೂ ಮರೆಯಬಾರದು.ದಸರಾ ಉತ್ಸವದಲ್ಲಿ ಹುಲಿವೇಷಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದಾಗ ಹುಲಿ ವೇಷ ದಸರಾ ಹಬ್ಬದ ವಿಶೇಷತೆ,ಹಿಂದೂ ಧಾರ್ಮಿಕತೆಯ ಪ್ರತೀಕವೆಂದು ಸಾರಿ ಜಿಲ್ಲಾಡಳಿತದ ಮೇಲೆ ಒತ್ತಡ ಹಾಕಿ ಹುಲಿವೇಷಕ್ಕೆ ಅವಕಾಶ ದೊರಕಿಸಿ ಕೊಟ್ಟ ನಿಜವಾದ ಧಾರ್ಮಿಕ ನಾಯಕರು. ಈ ಬಾರಿಯ ದಸರಾ ಉತ್ಸವವನ್ನು ಸವಾಲಾಗಿ ಸ್ವೀಕರಿಸಿ, ಸಂಘಸಂಸ್ಥೆಗಳನ್ನು ಹಾಗೂ ಹಿರಿಯ ಕಿರಿಯರೆನ್ನದೆ ಎಲ್ಲರನ್ನೂ ಪ್ರೀತಿಯಿಂದ ತನ್ನತ್ತ ಸೆಳೆದು,ಸ್ವಯಂಸ್ಪೂರ್ತಿಯಿಂದ ಸ್ವಯಂಸೇವಕರಾಗಿ ದುಡಿಯುವಂತೆ ಪ್ರೇರೇಪಿಸಿ, ಜಗದ್ವಿಖ್ಯಾತ ಮಂಗಳೂರು ದಸರಾವನ್ನು ಮತ್ತೊಮ್ಮೆ ಯಶಸ್ವಿಗೊಳಿಸಿ ವಿಶ್ವಭೂಪಟದಲ್ಲಿ ಅಜರಾಮರವಾಗಿ ಬೆಳಗುವಂತೆ ಮಾಡಿದ ಕಾರ್ಯದಲ್ಲಿ ಪದ್ಮರಾಜ್ ರವರು ನಿಜಕ್ಕೂ ಕೇಂದ್ರಬಿಂದು.*

ನಿತೀಶ್ ಪೂಜಾರಿ ಮರೋಳಿ
ಮಂಗಳೂರು


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »