TOP STORIES:

FOLLOW US

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.


ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ

ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ ಶಾಲಾ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲ ಅಥವಾ ತಾವೇ ಮುಂದೆ ಹೋಗುವಷ್ಟು ಧೈರ್ಯ ಇರಲಿಲ್ಲ. ಹಾಡುಗಾರನಾಗಿ ಬೆಳೆಯಬೇಕು ಎಂಬ ಆಸೆಯೂ ನೆರವೇರಲಿಲ್ಲ . ಆದರೆ ನಿರೂಪಕನಾಗಿ ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು ಇವರ ಕಂಚಿನ ಕಂಠದ ಧ್ವನಿಯಿಂದ ಎಂಟು ವರ್ಷದಿಂದ ನಿರೂಪಣೆಯ ಹಾದಿಯಲ್ಲಿ ಮುಂದುವರಿದರು ಕರ್ನಾಟಕದ ಅನೇಕ ಕಡೆ ಮೈಸೂರ್, ಚಿಕ್ಕಮಂಗಳೂರು, ಶೃಂಗೇರಿ,ಕೊಪ್ಪ,ಉಡುಪಿ, ಮಂಗಳೂರು, ಜೈಪುರ್, ಬಾಳೆಹೊನ್ನೂರು, ಕಾಸರಗೋಡು, ಪುತ್ತೂರು, ಸುಳ್ಯ, ಮುಂಬೈಗಳಲ್ಲಿ ಕಾರ್ಯಕ್ರಮ ನೀಡಿ ತಮ್ಮ ವಾಕ್ ಚಾತುರ್ಯದಿಂದಲೇ ಜನ ಮನ ಗೆದ್ದಿದ್ದಾರೆ. ಓಮನ್ ಬಿಲ್ಲವಾಸ್ ಅವರು ಆಯೋಜಿಸಿದ ಬಲೇ ತೆಲಿಪಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು ಆದರೆ ಕೋರೋನ ದ ಲಾಕ್ ಡೌನ್ ಕಾರಣ ಅವಕಾಶ ಕಳೆದುಕೊಂಡರು

ತನ್ನ ಪ್ರಾಥಮಿಕ ಶಿಕ್ಷಣವನ್ನು ಜೆಪ್ಪಿನಮೊಗರು ಗವರ್ನಮೆಂಟ್ ಸ್ಕೂಲ್ ಮತ್ತು ಪ್ರೌಢ ಶಿಕ್ಷಣವನ್ನು ಕ್ಯಾಸಿಯಾ ಹೈ ಸ್ಕೂಲ್ ನಲ್ಲಿ ಮಾಡಿ ಮುಗಿಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕು ತನ್ನನ್ನು ಎಲ್ಲರೂ ಗುರುತಿಸಬೇಕು ಎಂದು ಕೊಂಡಾಗ ಇವರ ಕೈ ಹಿಡಿದದ್ದು ಕಲಾ ಮಾತೆ ಇವರು ಕೇವಲ ನಿರೂಪಕರಾಗಿರದೆ ಅನೇಕ ತುಳು ಚಿತ್ರಗಳಲ್ಲಿ ನಟಿಸಿ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇವರು ನಟಿಸಿದ ಸಿನಿಮಾ, (ತಂಬಿಲ, ಭೋಜರಾಜ್ ಎಮ್ ಬಿ ಬಿ ಎಸ್, ಭಟ್ಕಳ,)ಧಾರಾವಾಹಿ (ಅಜನೆ) ಮತ್ತು ಕಿರು ಚಿತ್ರ (ಪ್ಲಾನ್ –ಸಿ, ಆ ಒಂದು ಕೆರೆ) ಹೀಗೆ ತನ್ನಲ್ಲೂ ಒಬ್ಬ ಕಲಾವಿದ ಇದ್ದಾನೆ ಎಂದು ತೋರಿಸಿಕೊಟ್ಟಿದ್ದಾರೆ. ಜೀವನದಲ್ಲಿ ದೊಡ್ಡ ಕಲಾವಿದ ಆಗಬೇಕು, ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆಯಂತೆ. ಹಾಗೆಯೇ ನಿರೂಪಣೆ ಯಲ್ಲಿಯೂ ಒಳ್ಳೆಯ ಹೆಸರು ಮಾಡಬೇಕು ಮತ್ತು ಹೊರ ದೇಶದಲ್ಲಿಯೂ ವಾಕ್ ಚಾತುರ್ಯ ತೋರಿಸಬೇಕು ಎನ್ನುವ ಕನಸು ನನಸಾಗಲಿ ಇವರ ಈ ಎಲ್ಲಾ ಆಸೆಗೆ ಮನೆಯವರು ಪ್ರೋತ್ಸಾಹ ಮತ್ತು ಮಡದಿ ಶ್ರೀಮತಿ ಶುಭ ಲಕ್ಷ್ಮಿ ಯವರ ಸಂಪೂರ್ಣ ಪ್ರೋತ್ಸಾಹ, ಬೆಂಬಲ ಇದೆ.

ಪ್ರಸ್ತುತ ಈಗ ಇವರು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಾಮಫಲಕ ಕಲಾಗಾರರ ಸಂಘದ ಅಧ್ಯಕ್ಷರಾಗಿ ಬಿರ್ವೆರ್ ಕುಡ್ಲ ವಕ್ತಾರೆ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ತನ್ನ ಜೀವನಕ್ಕಾಗಿ ತನ್ನದೇ ಆದ ಸುವರ್ಣ ಗ್ರಾಫಿಕ್ಸ್ ಸ್ಟುಡಿಯೋ ನಡೆಸಿಕೊಂಡು ಹೋಗುತ್ತಿದ್ದಾರೆ.(ಕಾರ್, ಬೈಕ್ ಇದರ ಗ್ರಾಫಿಕ್ಸ್, ಸ್ಟಿಕರ್ ಕಟ್ಟಿಂಗ್, ನೇಮ್ ಪ್ಲೇಟ್ )

ತಾನು ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂಬ ಇವರ ಕನಸು ಆದಷ್ಟು ಬೇಗ ಈಡೇರಲಿ.

ಕನ್ನಡ ತುಳು ಚಿತ್ರ ರಂಗದಲ್ಲಿ ಒಳ್ಳೆಯ ಅವಕಾಶ ಸಿಗಲಿ, ಕನ್ನಡದಲ್ಲಿ ಅಭಿನಯಿಸುವ ಆಸೆಯು ಬೇಗ ಫಲಿಸಲಿ, ಕಲಾಮಾತೆ ಮತ್ತು ತುಳುನಾಡಿನ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ನಿಮಗೆ

 

ಬರಹ:✍ಪ್ರಶಾಂತ್ ಅಂಚನ್ ಮಸ್ಕತ್


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »