TOP STORIES:

” ದೀಪಾವಳಿ ಮಾಂಕಾಳಿ ಕುಣಿತ “


ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ) ಜನಾಂಗದವರು ಈ ಕುಣಿತವನ್ನು ನಡೆಸುತ್ತಾರೆ. ಗ್ರಾಮದ ಗುತ್ತು ಅಥವಾ ಗೂಡಿನ ಮನೆಯಿಂದ ಆರಂಭಿಸಿ ಎಲ್ಲಾ ಮನೆಗಳಿಗೂ ಹೋಗುತ್ತಾರೆ. ಇವರಿಗೆ ಸಂಭಾವನೆಯಾಗಿ ಮನೆಮನೆಯಿಂದ ಹಣ ಸಿಗುವುದಿಲ್ಲ. ಬದಲಿಗೆ ಅಕ್ಕಿ, ಎಣ್ಣೆ, ಉಪ್ಪು, ಮೆಣಸು ದೊರೆಯುತ್ತದೆ.ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಇರುತ್ತಾನೆ. ಈತ ಕಂಗಿನ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತಾನೆ. ಮುಖವಾಡವೆಂದರೆ ಕಣ್ಣು, ಮೂಗು, ತೆರೆದ ಬಾಯಿ, ಚಾಚಿದ ನಾಲಿಗೆಯನ್ನು ಬಿಳಿ, ಹಳದಿ, ಕಪ್ಪು, ಹಸಿರು, ಕೆಂಪು ಬಣ್ಣಗಳಿಂದ ತಯಾರಿಸುತ್ತಾರೆ. ಕುಣಿಯುವವ ಸೀರೆಯನ್ನು ನೆರಿಗೆ ಹಾಕಿ ಒಂದರ ಮೇಲೊಂದರಂತೆ ಹಂತಹಂತವಾಗಿ ಹಾಕಿ ಸೊಂಟಕ್ಕೆ ಕಟ್ಟಿಕೊಳ್ಳುತ್ತಾನೆ. ಕಾಲಿಗೆ ಗಗ್ಗರ ಕಟ್ಟಿ ಮೈಯನ್ನು ದೊಗಲೆ ಅಂಗಿಯಿಂದ ಮುಚ್ಚಿಕೊಳ್ಳುತ್ತಾನೆ. ಮುಖವಾಡದ ಹಿಂದಿನಿಂದ ಒಂದು ಸೀರೆಯನ್ನು ಇಳಿ ಬಿಟ್ಟಿರುತ್ತಾನೆ. ಇದು ಮುಖವಾಡ ಇಟ್ಟುಕೊಂಡ ವ್ಯಕ್ತಿಯ ಬೆನ್ನನ್ನು ಆವರಿಸುತ್ತದೆ. ಮುಖವಾಡವನ್ನು ಮುಖಕ್ಕೆ ಕಟ್ಟಿಕೊಳ್ಳುವುದಿಲ್ಲ. ಬದಲಿಗೆ ಎರಡು ಕೈಗಳಿಂದ ಮುಖದೆದುರು ಹಿಡಿದುಕೊಳ್ಳುತ್ತಾರೆ.

Watch Video is here:  https://www.facebook.com/watch/?v=698187894157792

ಹಾಡು ಹೇಳುವಾತ ತೆಂಬರೆಯನ್ನು ಬಡಿದು ಹಾಡು ಹೇಳುತ್ತಿದ್ದಂತೆ ಇದರ ಲಯಕ್ಕನುಗುಣವಾಗಿ ನರ್ತಕ ಸಣ್ಣ ಹೆಜ್ಜೆಗಳನ್ನಿಟ್ಟು ಸುತ್ತು ಬರುತ್ತಾನೆ. ತೆಂಬರೆಯ ಬಡಿತ ನಿಧಾನವಾಗಿರುತ್ತದೆ. ಕೈಗಳಲ್ಲಿ ಮುಖವಾಡವನ್ನು ಮುಖಕ್ಕೆ ಎದುರಾಗಿ ಹಿಡಿದುಕೊಂಡಿರುವುದರಿಂದ ಕೈಗಳಲ್ಲಿ ಯಾವುದೇ ಭಂಗಿಯನ್ನು ಅಭಿನಯಿಸುವಂತಿಲ್ಲ. ಮುಖವಾಡವನ್ನೆತ್ತಿ ಕುಣಿತಗಾರ ನೆಲವನ್ನು ನೋಡಬೇಕಾಗಿರುವುದರಿಂದ ಕುಣಿತದಲ್ಲಿ ವೇಗ ಇರುವುದಿಲ್ಲ. ಈ ಸಂದರ್ಭದಲ್ಲಿ ಹೇಳುವ ಹಾಡು ತುಳು ಭಾಷೆಯಲ್ಲಿರುತ್ತದೆ. ಊರಿನ ರೋಗ ರುಜಿನಗಳನ್ನು ಹೋಗಲಾಡಿಸಲು ಘಟ್ಟದಿಂದ ಇಳಿದು ಮಾಂಕಾಳಿ ಬರುತ್ತಾಳೆ ಎಂಬ ನಂಬಿಕೆ ಜನಪದರಲ್ಲಿದೆ. ತುಳು ನಾಡಿನಲ್ಲಿ ಆಚರಣೆಯಲ್ಲಿರುವ ಅಟಿಕಳಿಂಜನು ಊರಿನ ಮಾರಿಯನ್ನು ನಿವಾರಿಸುವುದಕ್ಕಾಗಿ ಆಷಾಢ ಮಾಸದಲ್ಲಿ ವರ್ಷಕ್ಕೆ ಒಂದಾವರ್ತಿ ಗ್ರಾಮದಲ್ಲಿ ಬರುವುದು. ತುಳಸಿ ಪೂಜೆಯ ದಿನ ಮಾಂಕಾಳಿ ಕುಣಿತದ ಅಂತ್ಯ ಪೂಜೆ. ಆ ದಿನ ಸಂಭಾವನೆಯಾಗಿ ದೊರೆತ ಭತ್ತ, ಅಕ್ಕಿ, ತೆಂಗಿನಕಾಯಿ, ಉಪ್ಪು, ಹುಳಿ, ಮಸಿ, ಮೆಣಸುಗಳನ್ನು ಸರಳೀ ಎಲೆಯಲ್ಲಿ ಸಾಂಕೇತಿಕವಾಗಿ ಮನೆಯ ಪಕ್ಕದಲ್ಲಿ ಬಡಿಸಿಡುತ್ತಾರೆ, ಅದರ ಎದುರು ಮಾಂಕಾಳಿಯ ಮುಖವಾಡವನ್ನಿಟ್ಟು ಊರಿನ ಮಾರಿಯನ್ನು ಕಳೆಯುವಂತೆ ಪ್ರಾರ್ಥಿಸುತ್ತಾರೆ, ಹಾಗೂ ಮುಖವಾಡವನ್ನು ತೆಗೆದು ಹೊಳೆಯಲ್ಲಿ ಬಿಡುತ್ತಾರೆ. ಈ ಮೂಲಕವಾಗಿ ಊರಿನ ಮಾರಿಯನ್ನು ಹೊಳೆ ದಾಟಿಸುವ ಆಶಯವನ್ನು ಕಾಣಬಹುದಾಗಿದೆ.

(ಸಂಪಾದಕರು: ಪ್ರೊ. ಹಿ. ಚಿ. ಬೋರಲಿಗಯ್ಯ, ಕರ್ನಾಟಕ ಜನಪದ ಕಲೆಗಳ ಕೋಶ. ಪುಟ ೨೬.)

Credits: Beauty of Tulunad  facebook page


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »