TOP STORIES:

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ


ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ – ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕೆ.ಜಿ. ಜೇನು ಸಂಗ್ರಹಿಸಿದ್ದೂ ಇದೆ.ಬೆಟ್ಟಂಪಾಡಿಯಿಂದ ಮೈಸೂರುವರೆಗೆ 75 ಕಡೆ ಪೆಟ್ಟಿಗೆ ಇಟ್ಟಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ ಜಮೀನಿನಲ್ಲಿ. ಸ್ಥಳ ಬಾಡಿಗೆಯಾಗಿ ಮಾಲೀಕನಿಗೆ ಒಂದಷ್ಟು‌ ಜೇನು ಮತ್ತು ಪರಾಗಸ್ಪರ್ಶದಿಂದ ಫಸಲು ಹೆಚ್ಚಳದ ಖುಷಿ.

ವಾರ್ಷಿಕವಾಗಿ 16000 ಕೆ. ಜಿ. ಜೇನು, 250 ಕೆ. ಜಿ. ಮೇಣ ಸಂಗ್ರಹ, 2000 ಜೇನುಕುಟುಂಬ ಮಾರಾಟ ಮನಮೋಹನರ‌ ಸಾಧನೆ. ‘ಹನಿ ವರ್ಲ್ಡ್’ ಇವರ ಬ್ರಾಂಡ್‌. ಜೇನು ಕುಟುಂಬ ಮಾರಾಟ ಮಾಡುವ , ಅಧಿಕ ಶುದ್ಧ ಜೇನು ಸಂಗ್ರಹಿಸುವ ಕರ್ನಾಟಕದ ಏಕೈಕ ಯುವ ಕೃಷಿಕ.ಜೇನು ನಿರ್ವಹಣೆಗಾಗಿ ಒಂದಷ್ಟು ಮಂದಿಗೆ ಕೆಲಸ ಕೊಟ್ಟ‌ ಉದ್ಯೋಗದಾತ. ಪ್ರತಿ ವರ್ಷ ಸಾವಿರಕ್ಕೂ ಅಧಿಕ ಮಂದಿಗೆ ಇವರ ಮನೆಯಲ್ಲಿ ತರಬೇತಿಯಾಗುತ್ತದೆ. ಅದೆಷ್ಟೋ ಮಂದಿಯನ್ನು‌ ಸ್ವಾವಲಂಬಿಯಾಗಿಸಿದ್ದಾರೆ.

ಜೇನು‌‌ನಿರ್ವಹಣೆ ಬಗ್ಗೆ ಯಾವುದೇ ಹೊತ್ತಿನಲ್ಲಿ ‌ಕರೆ ಮಾಡಿದರೂ ಆತ್ಮೀಯವಾಗಿ ತಿಳಿಹೇಳುವರು. ಹೊಸಬರಿಗೆ ಸಂಪೂರ್ಣ ಪ್ರಾತ್ಯಕ್ಷಿಕೆ ಇದ್ದೇ ಇದೆ. ಇವರಲ್ಲಿ ಪೆಟ್ಟಿಗೆ ಖರೀದಿಸಿದರೆ, ಒಂದರಿಂದ ಸಾವಿರವಾಗಲಿ ಎಂದು ದೇವರನ್ನು ಪ್ರಾರ್ಥಿಸಿಯೇ ಹಸ್ತಾಂತರಿಸುವುದು.

ಹಮ್ಮುಬಿಮ್ಮಿಲ್ಲದ ಮುಕ್ತ ಮನಸ್ಸು, ನನ್ನಂತೆ ಇನ್ನೊಬ್ಬರು ಬೆಳೆಯವೇಕೆಂಬ ಚಿಂತನೆ ಮನಮೋಹನರನ್ನು ಯಶಸ್ವಿ ರೈತೋದ್ಯಮಿಯನ್ನಾಗಿಸಿದೆ ಎನ್ನುವುದು ಸತ್ಯ.


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »