TOP STORIES:

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »