TOP STORIES:

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್


ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ.
ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರುವಿರಿ. ಅದೆಷ್ಟೋ ಜನ ಅಮಿತ್ ರಾಜ್ ರವರ ಬಗ್ಗೆ ಹೇಳುವ ಮಾತು… ಅವರೊಂದು ಶಕ್ತಿ!!ಹಿಂದುತ್ವಗೋಸ್ಕರ ದುಡಿಯುವಂತಹ ಪ್ರಾಮಾಣಿಕ ನಾಯಕ, ಹಾಗೆ ಬಡವರ ಸೇವೆ ಮಾಡುವಂತಹ ಸಮಾಜಸೇವಕ..
ತನ್ನ ಬಾಲ್ಯಜೀವನದಿಂದಲೇ “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ” ಸಂಘ ಶಿಕ್ಷಣ ಪಡೆದು ಸ್ವಯಂ ಸೇವಕರಾಗಿದ್ದು, ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.
ಬಾಲ್ಯದಿಂದಲೇ ಒಂದು ಆಸೆಯನ್ನ ತನ್ನೊಳಗೆ ಬಚ್ಚಿಟ್ಟುಕೊಂಡಿದ್ದರು. ಸಮಾಜದಲ್ಲಿ ನಾನು ಮತ್ತೊಬ್ಬರಿಗೆ ಒಳ್ಳೆಯದನ್ನ ಮಾಡಬೇಕು, ಸಮಾಜಕ್ಕೆ ಒಳಿತಿನ ಹಸ್ತವಾಗಿ ದುಡಿಯಬೇಕು ಎಂಬ ಮನಸ್ಥಿತಿಯಲ್ಲಿ ಬೆಳೆದು ತಾನು ಅಂದುಕೊಂಡ ಹಾಗೆ ಬದುಕುತ್ತಿದ್ದಾರೆ.
ಅಮಿತ್ ಅಣ್ಣ ನಂತರದ ದಿನಗಳಲ್ಲಿ ಬಡವರ ಸೇವೆಯನ್ನ ಮಾಡಲು ಮುಂದಾದರು. ಇವತ್ತಿಗೂ ಅದೆಷ್ಟೋ ಬಡವರ ಕಷ್ಟಕ್ಕೆ ಮರುಗಿ, ಅವರ ಕಣ್ಣೀರ ನೋವಿಗೆ ಆಸರೆಯಾಗಿರೋದು ನಿಜಕ್ಕೂ ಶ್ಲಾಘನೀಯ ವಿಚಾರ. ಪ್ರಾಮಾಣಿಕತೆಗೆ ಮತ್ತೊಂದು ಪ್ರತೀಕವೆನ್ನಬಹುದು.
“ಅಮಿತ್ ಅಣ್ಣ”ನಿಗೆ ಅದೆಷ್ಟೇ ಹೆಸರಿದ್ದರೂ ಯಾವತ್ತು ತನ್ನ ಕಾರ್ಯಕರ್ತರ ಜೊತೆ ನಾಯಕನಂತೆ ಮೆರೆಯದೆ, ಅಹಂಕಾರವನ್ನ ತೋರದೆ ಸಾಮಾನ್ಯವಾಗಿ ಅವರೊಂದಿಗೆ ಕೆಲಸ ಮಾಡೋ ಆ ಕಾರಣಕ್ಕಾಗಿ ಅಭಿಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಎಂತಹ ಸಾರ್ಥಕ ಜೀವನ…ಅವರ ನಿಲುವು ಹಾಗೆ!! ಅವರ ಮಾರ್ಗದರ್ಶನದ ಪ್ರತಿಯೊಂದು ಹೆಜ್ಜೆಯಲ್ಲೂ ಅರ್ಥವಿದೆ..

ಸಮಾಜಕ್ಕಾಗಿ ಅಮಿತ್ ಅಣ್ಣ  ಎಂದರೆ ಏನು?

ಅವರ ನೇತೃತ್ವದಲ್ಲಿ ಬಡಮಕ್ಕಳ ಶಾಲೆಗೆ ಭೇಟಿ ನೀಡಿ ಹಾಗೂ ಹಲವಾರು ಅಶಕ್ತ ಕುಟುಂಬದ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡುವುದರೊಂದಿಗೆ ಅನೇಕ ಸಮಾಜಮುಖಿ ‌ಕೆಲಸ ಮಾಡಿರುತ್ತಾರೆ.

ಅಲ್ಲದೆ 26-01-2018 ಮಂಗಳೂರಿನಲ್ಲಿ ಸುಮಾರು ನೂರು ಜನರ ನೇತ್ರದಾನ ಸಂಕಲ್ಪ ಮಾಡಿಸುವ ಮೂಲಕ #ನೇತ್ರದಾನ_ಶಿಬಿರ ನಡೆಸಿರುತ್ತಾರೆ..
ಇದಕ್ಕಿಂತ ಪುಣ್ಯದ ಕೆಲಸ ಬೇರೇನಿದೆ..ಇವೆಲ್ಲ ಸಮಾಜಕ್ಕೆ ಪ್ರಾಮುಖ್ಯತೆ ನೀಡೋ ಕೆಲಸವಾದರೆ ಇನ್ನು ಪರದೆಯ ಹಿಂದೆ ಅದೆಷ್ಟೋ ಒಳಿತಿನ ಸಹಾಯವನ್ನ ಇವರು ಮಾಡುತ್ತಲೇ ಬರುತ್ತಿದ್ದಾರೆ..ಕಾರಣವಿಷ್ಟೇ… ತಾನು ಮಾಡೋ ಕೆಲಸ ದೇವರಿಗೆ ಗೊತ್ತಾದರೆ ಸಾಕು ಸಮಾಜಕ್ಕೆ ಬೇಡ ಎಂಬ ಅರ್ಥದೊಳು ಕೆಲಸ ಮಾಡೋ ಸರಳತೆಯ ನಾಯಕನೇ ಇವರು.

ಹೆಚ್ಚು ಹೇಳಬೇಕೆಂದರೆ

ಅತ್ತಾಗ ಕಣ್ಣೀರು ಒರೆಸೋ ನಾಯಕ
ಸೋತಾಗ ಹೆಗಲು ಕೊಡೊ ನಾಯಕ
ಬಡವರ ನೋವಿಗೆ ಶಕ್ತಿ ತುಂಬೋ ನಾಯಕ
ಕಾರ್ಯಕರ್ತರಿಗೆ ಧೈರ್ಯ ತುಂಬೋ ನಾಯಕ ಎಲ್ಲೇ ಯಾರಿಗೂ ತೊಂದರೆಯಾದರೂ ಕ್ಷಣ ಮಾತ್ರದಲ್ಲಿ ಸ್ಪಂದಿಸೋ ನಾಯಕ
ಅನ್ಯಾಯದ ವಿರುದ್ಧ ಗರ್ಜಿಸೋ ನಾಯಕ
ನೊಂದ ಜೀವಕ್ಕೆ ಆಸರೆಯಾಗೋ ನಾಯಕ
ಪ್ರಾಮಾಣಿಕ ಸಿದ್ದಾಂತಕ್ಕೆ ಸೈ ಎನ್ನೋ ನಾಯಕ
ಸರಳತೆಯಲ್ಲಿ ಬದುಕೋ ನಾಯಕ
ಒಟ್ಟಿನಲ್ಲಿ ನಾಯಕ ಅನ್ನೋ ಪದಗಳಿಗೆ ಅರ್ಹತೆಯ ಮಡಿಲು ತುಂಬೋ ನಿಸ್ವಾರ್ಥ ವ್ಯಕ್ತಿ
ಅನ್ಯಾಯ ಮಾಡುವರನ್ನ ಹತ್ತಿರವೂ ಸೇರಿಸದೆ ನ್ಯಾಯದ ಪರ ಕೆಲಸ ಮಾಡೋ ಜನರ ಜೊತೆ ಬೆರೆತು ನಾನಿದ್ದೇನೆ ಎಂಬ ಭರವಸೆಯ ಶಕ್ತಿಯಾಗಿ ದುಷ್ಟರಿಗೆ ಅಂಜದೆ, #ದೈವ_ದೇವರುಗಳ ಆಶೀರ್ವಾದ ಪಡೆದು ಹಿಂದೂ ಧರ್ಮದ ತತ್ವಗಳನ್ನ ಪಾಲಿಸುತ್ತ,
ಹಿಂದೂಭದ್ರಕೋಟೆಗೆ ಕಾವಲಿರೋ ಈ ನಾಯಕನ ಬಗ್ಗೆ ಅದೆಷ್ಟೇ ಮಾತುಗಳ ವರ್ಣನೆ ನೀಡಿದರು ಅದು ಕಡಿಮೆಯೇ..
ಇಲ್ಲಿಯವರೆಗೆ ನಾ ಇವರನ್ನ ಭೇಟಿಯಾಗಿಲ್ಲ..ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ #ನಿಜ!! ಆದರೆ ಭೇಟಿಯಾಗದಿದ್ದರು ಹತ್ತಿರದಿಂದ ನೋಡಿದ್ದೇನೆ ಎಂಬ ಅರಿವು ಅಭಿಮಾನಿಗಳ ಮಾತುಗಳಿಂದ ಹಾಗು ಅವರ ಕೆಲಸದಿಂದ ಗೊತ್ತಾಗುತ್ತದೆ..
ಸ್ವಾರ್ಥ ತುಂಬಿರೋ ಈ ಪ್ರಪಂಚದಲ್ಲಿ ಇಂತಹ ನಾಯಕರು ಹಲವರಿಗೆ ಮಾದರಿಯಾಗಬೇಕು..”#ಅಮಿತ್_ಅಣ್ಣ” ವೇದಿಕೆಯ ಮುಂಭಾಗ ನಿಂತು ಕೆಲಸ ಮಾಡುವರಲ್ಲ, ಪರದೆಯ ಹಿಂದೆ ದುಡಿಯುವಂತಹ ಕಾಯಕ..
ಹಾಗೆ “ಅಮಿತ್ ಅಣ್ಣ” “ರಾಷ್ಟ್ರೀಯ ಸ್ವಯಂಸೇವಕ ಸಂಘದ” ಸಂಘ ಶಿಕ್ಷಣ ಪಡೆದು RSS ನಲ್ಲಿ ಬಹಳ ಒಲವನ್ನು ಇಟ್ಟುಕೊಂಡವರು..ಆರ್ ಎಸ್ ಎಸ್ ಪ್ರಮುಖ ಅಂಶಗಳನ್ನ ತನ್ನೊಳಗೆ ಅಳವಡಿಸಿ ಹಿಂದೂರಾಷ್ಟ್ರದ ಭಗವಧ್ವಜ ಪತಾಕೆ ಬಹಳ ಎತ್ತರಕ್ಕೆ ಹಾರಲಿ ಎಂಬ ಕನಸು ಕಂಡವರು..
ಅಣ್ಣ ನೀವು ಹಿಂದೂ ಸಮಾಜಗೋಸ್ಕರ ಕೊಟ್ಟಿರೋ ಕೊಡುಗೆಗೆ ಬೆಲೆಕಟ್ಟಲಾಗದು..ನಿಮ್ಮಿಂದ ಇನ್ನು ಅನೇಕ ಒಳಿತಿನ ವಿಚಾರಗಳು ಮೂಡಿ ಬರೆಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ..ನಿಮ್ಮ ಹೊಸ ಪಯಣದ ಆರಂಭ ಅದೆಷ್ಟೋ ಜನರಿಗೆ ಪ್ರೇರಣೆಯಾಗಲಿ..ಸದಾ ನಿಮ್ಮ ವ್ಯಕ್ತಿತ್ವದ ಅಭಿಮಾನಿ ನಾ

ಬರಹ-ಪ್ರವೀಣ್ ಪೂಜಾರಿ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »