TOP STORIES:

ರಂಜು ತುಳುರಂಗ ಪ್ರೇಮಿ‌ ರಂಜಿತ್ ಕಕ್ಕಿಂಜೆ


ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ‌ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ.

ಇಂತಹ ನೈಜ ಪಾರದರ್ಶಕ ಗುಣವಿರುವಂತಹ ವ್ಯಕ್ತಿಯೇ ರಂಜಿತ್ ಕಕ್ಕಿಂಜೆ.ಅದರಲ್ಲಿಯೂ ತಾನು ನಿಂತ ನೆಲೆಯಾದ ತುಳುನಾಡಿನ ಪ್ರತಿಭೆಗಳು ಎತ್ತರೆತ್ತರ ಬೆಳೆಯಬೇಕು ದೇಶದೆಲ್ಲೆಡೆ ಪಸರಿಸಬೇಕೆಂಬುದೇ ಇವರ ಮುಖ್ಯ ಉದ್ದೇಶವಾಗಿದೆ.ಈ ಅಸಮಾನ್ಯ ವ್ಯಕ್ತಿಯ ಬಗ್ಗೆ ತಿಳಿಯೋಣ.

ಬರಹ-ತೃಪ್ತಿ.ಜಿ.ಕುಂಪಲ.

ರಂಜಿತ್ ಕಕ್ಕಿಂಜೆ ಇವರು ವಸಂತ್ ಪೂಜಾರಿ ಹಾಗೂ ಉಷಾ ದಂಪತಿಯವರ ಸುಪುತ್ರ.ಇವರು ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ ಎಸ್.ಡಿ.ಎಂ.ಐಟಿಸಿ ವೇಣೂರಿನಲ್ಲಿ‌ ಐಟಿಐ ಮುಗಿಸಿ,ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಪ್ರಸ್ತುತ ಸೌದಿ ಅರೇಬಿಯಾದ ಅಬ್ಹಾ ಏರ್ಪೋರ್ಟಿನಲ್ಲಿ ಗ್ರೌಂಡ್ ಸಪೋರ್ಟ್ ಸರ್ವಿಸಸ್ ಮೈಂಟೇನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಕಲಾಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಲಾವಿದನಾಗಿ,ಭಜಕನಾಗಿ,ನಾಯಕನಾಗಿ ಮುಂದುವರಿಯುತ್ತಿರುವ ಇವರು ಯುವ ಸಾಹಿತಿಯೂ ಹೌದು.ಒಬ್ಬ ಕಲಾವಿದನ ಸಾಧನೆಯನ್ನು ಎಳೆ ಎಳೆಯಾಗಿ ತನ್ನ ಬರವಣಿಗಯಲ್ಲಿ ಅಲಂಕರಿಸಿ ಸಾಧಕನ ಸಾಧನೆಗೆ ತನ್ನ ಲೇಖನಿಯ ಮುಖಾಂತರ ಜೀವ ತುಂಬುವ ಕಲಾ ಪೋಷಕರು ಇವರು.

ಭಜನೆಯೆಂದರೆ ಇವರಿಗೆ ಅಪಾರ ಪ್ರೀತಿ.ಬಾಲ್ಯದಲ್ಲೇ ಭಜನೆ ಮಾಡುತ್ತಾ ಬೆಳೆದವರು ಇವರು.ತನ್ನ ಊರಿನವರಾದ ಕಮಲಾಕ್ಷ ಪೂಜಾರಿಯವರ ಪ್ರೋತ್ಸಾಹದಿಂದ “ಶ್ರೀ ಶಬರಿ ಭಜನಾ ಮಂಡಳಿ” ಯನ್ನು ತೋಟತ್ತಾಡಿಯಲ್ಲಿ ಕಟ್ಟಿದರು.ನಂತರ ವೃತ್ತಿಯನ್ನು ಹರಸಿ ಬೆಂಗಳೂರಿಗೆ ನಡೆದವರು ತನ್ನ ಕಲೆಯಲ್ಲಿನ ಉತ್ಸಾಹವನ್ನು ಬಿಡದೆ ಬೆಂಗಳೂರಿನಲ್ಲಿಯೂ “ಮಕರ ಶ್ರೀ ಭಜನಾ ಮಂಡಳಿ” ಯನ್ನು ಹೊಸಳ್ಳಿಯ ಬಾಲಗಂಗಾಧೇಶ್ವರ ದೇವಸ್ಥಾನದಲ್ಲಿ ರಚಿಸಿದರು.ಹೀಗೇ ಕಲಾ ಆಸಕ್ತಿಯಿಂದ ಕಲಾಮಾತೆಯ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಧು ಬಂಗೇರ ಕಲ್ಲಡ್ಕ ಹಾಗೂ ಕಿಶನ್ ಪೂಜಾರಿ ಯವರೊಂದಿಗೆ ಕೂಡಿ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಬೆಂಗಳೂರು ಘಟಕವನ್ನು ಸ್ಥಾಪಿಸಲು ಶ್ರಮಿಸಿದರು.ಈ ಸಂಸ್ಥೆಯ ಮೊದಲ ವರ್ಷಾವಧಿಯಲ್ಲಿ ಸಾಂಸ್ಕೃತಿಕ ನಿರ್ದೇಶಕರಾಗಿ ಕಲಾ ಸೇವೆಯನ್ನು ಸಲ್ಲಿಸಿದರು.

ರಂಗದಲ್ಲಿ ಸಾಹಿತಿಯಾಗಿ ಬರವಣಿಗೆಯ ಮಾಲಾರ್ಪಣೆಯನ್ನು ಗೈಯುತ್ತಾ ಇವರು ಶಬರಿ ಭಜನಾ ತಂಡದ ಯುವಕರಿಗೆ ಅಭಿನಯವನ್ನು ಕಲಿಸಿ ಕಿರಣ್ ಕಕ್ಕಿಂಜೆಯವರ ಸಹಕಾರದಿಂದ “ಬುದ್ಧಿ ಬನ್ನಗ” ಎಂಬ ತುಳು ನಾಟಕದ ಸಾಹಿತ್ಯವನ್ನು ಸ್ವತಃ ತಾನೇ ಬರೆದು ನಿರ್ದೇಶಿಸಿ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾದರು.ತದನಂತರ “ಗೌಜಿ ಗಮ್ಮತ್ತ್”, ” ಎನ್ನ ತಂಗಡಿ”, “ಮಲ್ಲಸ್ತಿಕೆದ ಮರ್ಮಾಲ್”,” ಒಂಜೆಕ್ ಒಂಜರೆ ಮಲ್ಪೊರ್ಚಿ” ಮೊದಲಾದ ನಾಟಕಗಳಿಗೆ ಸಾಹಿತ್ಯ ಬರೆದು ನಿರ್ದೇಶಿಸಿ ನಟಿಸಿರುವ ಹೆಗ್ಗಳಿಕೆ ಇವರದ್ದು.ಇವರು “ಗೋಲ್ಮಾಲ್” ಎಂಬ ತುಳು ಚಲನಚಿತ್ರದಲ್ಲಿಯೂ ನಟಿಸಿರುವರು. ತನ್ನ ವೃತ್ತಿಜೀವನದಲ್ಲೂ ತುಳುನಾಡಿನ ಯುವ ಪ್ರತಿಭೆಗಳಿಗೆ ನಿರಂತರ ನಿಸ್ವಾರ್ಥ ಸೇವೆಯಲ್ಲಿ ಇವರು “ಕಲಾವಿದೆರೆ ಕಡಲ್” ಎಂಬ ವಾಟ್ಸ್ ಆ್ಯಪ್ ಗ್ರೂಪ್ ನಿರ್ಮಿಸಿ ತುಳುನಾಡ ಪ್ರತಿಭೆಗಳಿಗೆ ತನ್ನ ಬರವಣಿಗೆಯ ಮೂಲಕ ಪ್ರೋತ್ಸಾಹವನ್ನು ನೀಡುತ್ತಾ,ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರ ನಿಸ್ವಾರ್ಥ ಕಲಾ ಸೇವೆಗೊಂದು ಗುರುತು ಎಂಬಂತೆ ಪ್ರಶಸ್ತಿ,ಪುರಸ್ಕಾರಗಳು ಇವರಿಗೆ ದೊರಕದೆ ಉಳಿದಿಲ್ಲ.ಯುವವಾಹಿನಿ(ರಿ).ಬೆಂಗಳೂರು ಘಟಕದ ವತಿಯಿಂದ ಸನ್ಮಾನ,ಮಡಿಲು ಸಂಸ್ಥೆಯಿಂದ “ಮಡಿಲು” ಪುರಸ್ಕಾರ,”ತೆಲಿಕೆದ ತೆನಾಲಿ” ಕಾರ್ಲ ತಂಡದಿಂದ “ಕಲಾವಿದರ ಕಣ್ಮಣಿ” ಎಂಬ ಬಿರುದು ನೀಡಿ ಗೌರವಿಸಲಾಗಿದೆ.ನಿಜವಾಗಿಯೂ ಇವರು ಕಲಾವಿದರ ಕಣ್ಮಣಿಯೆ ಹೌದು.ತೆರೆಮರೆಯಲ್ಲಿ ಅಡಗಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ರಂಜುರವರಂತಹ ಕಲಾ ಪೋಷಕ ಹುಟ್ಟಲೇಬೇಕು.ಕಲಾವಿದನು ಅರಳಲು ಪ್ರಶಂಸೆಗಿಂತ ಇತರರ ಪ್ರೋತ್ಸಾಹದಲ್ಲಿ ಖುಷಿಪಟ್ಟು ತ‌ನಗೆ ತಾನು ಪ್ರಶಂಸೆಯನ್ನು ಪಡೆವ ನಿಸ್ವಾರ್ಥ ಕಲಾಸೇವಕನ ಅಡಿಯಲ್ಲಿ ಮತ್ತಷ್ಟು ಪ್ರತಿಭೆಗಳು ಚಿಗುರಲಿ.ನಾಟಕ ಪ್ರೇಮಿಗಳ ಮನರಂಜಿಸಲು “ರಂಜು” ರವರಿಗೆ ಕಲಾಮಾತೆಯ ಆಶೀರ್ವಾದ ಸದಾ ಇರಲಿ. ದೇವರು ಒಳಿತನ್ನು ಕರುಣಿಸಲಿ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »