TOP STORIES:

FOLLOW US

ಒಂದು ಗೌರವಯುತ ವಿದಾಯದ ವೇದಿಕೆಯತ್ತ…ಜನಾರ್ಧನ ಪೂಜಾರಿ


“ಒಂದು ಗೌರವಯುತ ವಿದಾಯದ ವೇದಿಕೆಯತ್ತ”

“ಸಾಲ ಮೇಳದ ಸಂಗ್ರಾಮ”

“ಜನಾರ್ಧನ ಪೂಜಾರಿ”

ಇದು ಕರಾವಳಿಯ ಮಾನವೀಯತೆಯ ಪ್ರಶ್ನೆ…!!

 

ಬಹು ದಿನಗಳಿಂದ ಸಾಮಾಜಿಕ ಜಾಲತಾಣದ ವೇದಿಕೆಯತ್ತ ಒಂದು ವಿಚಾರದ ಕುರಿತು ತಡಬಡಿಸುತ್ತಲೇ ಇದ್ದೇ. ಜನಾರ್ಧನ ಪೂಜಾರಿಯವರ ಸ್ವ ಪಕ್ಷಿಯವರಿಂದ ಒಂದು ಮಾತನ್ನು ನಿರೀಕ್ಷಿಸುತ್ತಿದ್ದೆ..!! ಆದರೆ ಅಲ್ಲಿಂದ ಉತ್ತರವೇ ಬರಲಿಲ್ಲ.ಕಾಯುವಿಕೆ ಸಾಕಿನ್ನು ಎಂದು ಪೂಜಾರಿಯವರ ಪಕ್ಷದ ಕಾರ್ಯಕರ್ತನಲ್ಲದಿದ್ದರು, ಭಾ.ಜ.ಪಾ. ದ ಕಾರ್ಯಕರ್ತನಾಗಿದ್ದುಕೊಂಡೆ ಈ ಬರಹವನ್ನು ನಿಮ್ಮ ಮುಂದೆ ತರಲೇಬೇಕಿತ್ತು ಅಂತನಿಸಿತು..!

ಜನಾರ್ಧನ ಪೂಜಾರಿ ದೇಶ ಕಂಡ ಭ್ರಷ್ಟಾಚಾರ ರಹಿತ ರಾಜಕಾರಣಿ ಎಂದು ನಾನು ಪುನಃ ಹೇಳುವ ಅಗತ್ಯವಿಲ್ಲವೆಂದು ಭಾವಿಸುತ್ತೇನೆ.ಅದು ಎಲ್ಲಾ ಪಕ್ಷದವರಿಗೂ ತಿಳಿದ ವಿಷಯವೇ ಆಗಿದೆ.

ಬಡ ಜನರು ಬ್ಯಾಂಕಿನ ಒಂದಿಷ್ಟು ಜ್ಞಾನವನ್ನು , ಸಾಲವನ್ನು ಎಲ್ಲರಿಗೂ ಕೊಡುವಂತೆ ಮಾಡಿದ್ದೇ ಈ ಜನಾರ್ಧನ ಪೂಜಾರಿಯವರು..!!

ಅಂದಿನ ಸರಕಾರದಲ್ಲಿ ಕೇಂದ್ರದ ಸಚಿವನಾಗಿ ಅನೇಕ ಜವಾಬ್ದಾರಿಗಳನ್ನು ಜವಾಬ್ದಾರಿಯುತವಾಗಿ ನಿಭಾಯಿಸಿ,ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸ್ಥಾನವನ್ನು ಪ್ರೀತಿಯಿಂದ ತಿರಸ್ಕರಿಸಿದ ವ್ಯಕ್ತಿ ಇವರು..!

ಈಗಿನ ರಾಜಕೀಯದಲ್ಲಿ ಪಂಚಾಯತಿನ ಸದಸ್ಯನಾದವನು ಕೂಡ ಮಹಡಿಯ ಮೇಲೆ ಇನ್ನೊಂದು ಮನೆ ಮಾಡುವ ತನಕ ದುಡಿಯುವ ಕಾಯಕ ಯೋಗಿಗಳು ನಮ್ಮ ಮುಂದೆ ಇದ್ದಾರೆ,ಅಲ್ಲವೇ..!? ಆದರೆ ಪೂಜಾರಿಯವರು…!??

ದಶಕಗಳ ಕಾಲ ರಾಜಕೀಯದಲ್ಲಿ ಅಭಿಶಕ್ತ ದೊರೆಯಾಗಿ ವಿಜೃಂಭಿಸಿದವರು,ಇಂದು ಅವರ ಕೈಯಲ್ಲಿ ಇರೋದು ಹಳೆಯ ಮನೆ ಮಾತ್ರ..! ಬಂದ ಗೌರವ ಧನ ಯಾವುದೋ ಅನಾಥಾಶ್ರಮ,ಬಡವರ ಮನೆಯ ದಾರಿಯನ್ನು ಕೇಳಿಕೊಂಡು ಸಾಗುತ್ತಿದೆ.!

ಇವರ ಬಗ್ಗೆ ತುಂಬಾ ಬರೆಯಬೇಕೆನ್ನಿಲ್ಲ..! ಯಾಕೆಂದರೆ ಎಲ್ಲಾ ರಾಜಕೀಯ ಪ್ರಮುಖರಿಗೆ ಇಂದು ಇವರ ಕುರಿತು ಒಂದು ಗೌರವಯುತ ಗೌರವ ಇದ್ದೆ ಇದೇ ಎಂದೇ ಹೇಳಬಹುದು.! ಚುನಾವಣೆ ಬಂದಾಗ ಇವರ ಆಶೀರ್ವಾದದ ಅಭಯಕ್ಕಾದರು ಮನೆಯ ಕಡೆ ದಾರಿಯನ್ನು ನೋಡುತ್ತಾರೆ..!

ಇಂದಿನ ರಾಜಕೀಯದಲ್ಲಿ ಪೂಜಾರಿಯವರಿಗೆ ಸರಿ ಸಮಾನವಾಗಿ ನಿಲ್ಲುವ ರಾಜಕಾರಣಿ ಹುಡುಕಿದರೂ ಸಿಗಲಾರರು.!

“ಇರಲಿ ಬಿಡಿ ವಿಷಯಕ್ಕೆ ಬರೋಣ..”

ಜನಾರ್ಧನ ಪೂಜಾರಿ ಎಂಬ ಸಹೃದಯಿ ಮನಸ್ಸಿಗೆ ಗೌರವಯುತ ವಿದಾಯದ ವೇದಿಕೆಯನ್ನು ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ.!
ಇದು ಕರಾವಳಿಯ ಮೇಲೆ ಬೆಟ್ಟದಷ್ಟಿದೆ..!
ಮಂಗಳೂರಿನ ಒಂದು ದೊಡ್ಡ ವೇದಿಕೆಯಲ್ಲಿ ಜನಾರ್ಧನ ಪೂಜಾರಿರವರಿಗೆ,ಕರಾವಳಿಯ ಎಲ್ಲಾ ರಾಜಕೀಯ ಪಕ್ಷದ ನಾಯಕರು,ಜಾತಿ-ಭೇದವನ್ನು ಮೀರಿ ಅದರಲ್ಲೂ ಧರ್ಮ, ಜಾತಿ ಎಂಬ ಅನ್ವರ್ಥ ನಾಮವನ್ನು ಬದಿಗೊತ್ತಿ ಗೌರವಿಸಬೇಕು,ಈ ಸಂಭ್ರಮದಲ್ಲಿ ಎಲ್ಲರೂ ಭಾಗಿಯಾಗಬೇಕು.

ಕರಾವಳಿಯಲ್ಲಿ ಧರ್ಮ ಧರ್ಮದ ನಡುವೆ ಆಳವಾದ ಕಂದಕವೇ ನಿರ್ಮಾಣವಾಗಿದೆ.! ದಿನೇ ದಿನೇ ಅದು ಬಿಗಡಾಯಿಸುತ್ತಲೇ ಇದೆ. ಇದನ್ನು ಸ್ವಲ್ಪವಾದರೂ,ಒಂದು ದಿನಕ್ಕಾದರು ಪೂಜಾರಿಯವರ ಗೌರವಯುತ ವೇದಿಕೆಯ ನಡುವೆ ಸಹಬದಿಗೆ ತರೋಣ..!!

ಜನಾರ್ಧನ ಪೂಜಾರಿಯವರಿಗೆ ಅಂದು ನಡೆಯುವ ಅಭಿಮಾನದ ಬೃಹತ್ ಕಾರ್ಯಕ್ರಮಕ್ಕೆ ಮಂಗಳೂರಿಗೆ ಮಂಗಳೂರೇ ನವ ವಧುವಿನಂತೆ ಶೃಂಗಾರಗೊಳ್ಳಬೇಕು.!
ಕರಾವಳಿ ಇಂತಹ ಕಾರ್ಯಕ್ರಮವನ್ನು ಇಷ್ಟರವರೆಗೆ ನೋಡಿರಲು ಸಾಧ್ಯವಿರಬಾರದು.ಅಂತಹ ಕಾರ್ಯ ಯೋಜನೆ ಸಿದ್ಧವಾಗಬೇಕು.ಜಾತಿ,ಮತ, ಧರ್ಮ ಮತ್ತು ಪಕ್ಷವನ್ನು ಬದಿಗೆ ಸರಿಸಿ ಸಾಮಾನ್ಯ ವ್ಯಕ್ತಿಯಾಗಿ ಆ ಸಂಭ್ರಮದಲ್ಲಿ ಭಾಗಿಯಾಗಬೇಕು. ಕಾರ್ಯಕ್ರಮದಲ್ಲಿ “ಪೂಜಾರಿಯವರೇ ಕೇಂದ್ರ ಬಿಂದು”ಆಗಿದ್ದು,ರಾಜ್ಯದ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಮತ್ತು ಕೇಂದ್ರದ ಉನ್ನತ ಸಚಿವರು ಭಾಗಿಯಾಗಬೇಕು.ಅದರ ಜೊತೆಗೆ 100 ಸಾಧಕರಿಗೆ ವಿಶೇಷ ಸನ್ಮಾನವನ್ನು ಏರ್ಪಡಿಸಬೇಕು.ಬಡತನದಿಂದ ಮೇಲೆದ್ದು ಬಂದ ಸಾಧಕರಾಗಿರಬೇಕು.

ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ” ಬಿಲ್ಲವ ಸಂಘಟನೆಗಳು” ಹೊರಬೇಕು.(ಇದು ಬಿಲ್ಲವ ಸಂಘಟನೆಗಳ ಅಸ್ಥಿತ್ವದ ಪ್ರಶ್ನೆ.) ಬಿಲ್ಲವ ಸಂಘಟನೆಗಳೇ ಹೊರಲೇಬೇಕು..!! ಅಷ್ಟೇ..
ನಿಮ್ಮ ಜೊತೆ ಎಲ್ಲಾ ಸಂಘಟನೆಗಳನ್ನು ಜೊತೆ ಸೇರಿಸಿಕೊಂಡು ಸಾಗಬೇಕು.(ದೇಶ ವಿದೇಶದಲ್ಲಿರುವ ಸಾವಿರಾರು ಸಂಘಟನೆಗಳು ಬಿಲ್ಲವರಲ್ಲಿ ಇದೆ.)

ಒಂದು ರಾಜಕೀಯ ರಹಿತ ಉತ್ತಮ ವ್ಯಕ್ತಿ ಇದರ ಮೇಲ್ವಿಚಾರಣೆಯನ್ನು ನಡೆಸಬೇಕು.

ಕರಾವಳಿ ಒಮ್ಮತ ನೀಡುವುದರಲ್ಲಿ ಸಂದೇಹವಿಲ್ಲ ..!! ಒಂದು ಉತ್ತಮ ದಿನವನ್ನು ಆಯ್ಕೆ ಮಾಡಿ ಮುಂದಿನ ದಿನಗಳಲ್ಲಿ ಕಾರ್ಯ ಪ್ರವೃತ್ತರಾಗುವುದು ಒಳ್ಳೆಯದು.. ಆದಷ್ಟು ಬೇಗ..!!

ಮುಂದೊಂದು ದಿನ ಕಣ್ಣೀರಿನ ದಾರಿಯಲ್ಲಿ ನೆನೆಯುವುದು ಬೇಡ.. ಅಲ್ಲವೇ…

wwww.billavaswarriors.com

✍️ ವಿಜೇತ್ ಪೂಜಾರಿ ಶಿಬಾಜೆ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »