TOP STORIES:

ಬಿಲ್ಲವ ಸಭೆ-ಸಮಾರಂಭಗಳಿಗೆ ಜಗದೀಶ್ ಅಧಿಕಾರಿಗೆ ಆಹ್ವಾನವಿಲ್ಲ: ಮೂಲ್ಕಿ ಬಿಲ್ಲವ ಸಂಘ ನಿರ್ಧಾರ…!


ಮೂಲ್ಕಿ:
ಬಿಲ್ಲವ ಆರಾಧ್ಯ ಶಕ್ತಿಗಳಾದ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾಯದ ನಾಯಕರುಗಳ ಬಗ್ಗೆ ತುಚ್ಚವಾಗಿ ನಿಂದಿಸಿರುವ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಪ್ರತಿಯೊಬ್ಬ ಬಿಲ್ಲವ ಸಮುದಾಯದವರು ಹಾಗೂ ಬಿಲ್ಲವ ಸಂಘಟನೆಗಳು ಯಾವುದೇ ವೈಯಕ್ತಿಕ ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಇನ್ನು ಮುಂದೆ ಆಹ್ವಾನ ನೀಡದಿರಲು ನಿರ್ಧರಿಸಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ಕೊಕ್ಕರ್‌ಕಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಂಡಿದೆ.
ಬಿಲ್ಲವ ಸಮುದಾಯ ಸಹಿತ ತುಳುನಾಡಿನ ಸರ್ವಧರ್ಮದವರು ಸಹ ಆರಾಧ್ಯ ದೈವ-ದೇವರುಗಳಾಗಿ ನಂಬಿಕೊಂಡು ಬಂದಿರುವ ಕೋಟಿ ಚೆನ್ನಯ್ಯ ಅವಳಿ ವೀರರಿಗೆ ಸಮಸ್ತ ಜನರು ಗರಡಿಯ ಇನ್ನಿತರ ದೈವ ಸಾನ್ನಿಧ್ಯದ ಮೂಲಕ ವಿಶೇಷ ಸ್ಥಾನಮಾನವನ್ನು ನೀಡಿರುವುದನ್ನು ತನ್ನ ಹೀನ ಬುದ್ದಿಯಿಂದ ಜಗದೀಶ್ ಅಧಿಕಾರಿ ಸಾರ್ವಜನಿಕವಾಗಿ ಹೇಳಿರುವುದರ ಬಗ್ಗೆ ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಅವರ ಮನಸ್ಥಿತಿಯನ್ನು ಅರಿತು ಅವರು ಕೇಳಿರುವ ಕ್ಷಮೆಯು ಆಧಾರ ರಹಿತವಾಗಿ ಕೇವಲ ಕಾಲ್ಪನಿಕವಾಗಿದೆ. ಮನಸ್ಸಿನಲ್ಲಿ ದುಷ್ಟ ಬುದ್ದಿಯನ್ನಿಟ್ಟುಕೊಂಡು ಯಾರದೋ ಒತ್ತಡಕ್ಕೆ ಮಣಿದು ಕ್ಷಮೆ ಕೇಳಿದ್ದರೂ ಸಹ ಬಿಲ್ಲವ ಸಮಾಜ ಅವರನ್ನು ಕ್ಷಮಿಸೋಲ್ಲ ಎಂದು ನಿರ್ಧರಿಸಲಾಗಿದೆ.

ಸಭೆಯಲ್ಲಿ ನಿರ್ಧರಿಸಿದಂತೆ ಜಗದೀಶ್ ಅಧಿಕಾರಿಯನ್ನು ಮೂಲ್ಕಿಯ ಬಿಲ್ಲವ ಸಮಾಜದವರು ತಮ್ಮ ವೈಯಕ್ತಿಕ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂಬ ನಿರ್ಣಯಕ್ಕೆ ಗೌರವ ನೀಡಬೇಕು, ಇಂತಹ ಸಮಾಜ ವಿಘಟನೆ ಮಾಡುವ ವ್ಯಕ್ತಿಗಳಾಗಲಿ, ಶಕ್ತಿಗಳು ಬಿಲ್ಲವ ಸಮಾಜವನ್ನು ಒಡೆದು ಆಳುವ ನೀತಿಯ ವಿರುದ್ಧವಾಗಿ ಈ ಮಹತ್ವದ ನಿರ್ಧಾರವಾಗಿದೆ. ವಿಶ್ವದಲ್ಲಿರುವ ಎಲ್ಲಾ ಬಿಲ್ಲವ ಸಂಘಟನೆಗಳು ಸಹ ಜಗದೀಶ್ ಅಧಿಕಾರಿಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಹ್ವಾನಿಸದೇ ತಿರಸ್ಕರಿಸಬೇಕು ಎಂದು ಬಿಲ್ಲವ ಸಂಘಗಳ ಒಕ್ಕೂಟವಾದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲಕ್ಕೆ ಮನವಿ ಮಾಡುವುದು ಎಂದು ನಿರ್ಣಯಿಸಿಕೊಂಡು,
ರಾಜಕೀಯವಾಗಿ ಇಂತಹ ವ್ಯಕ್ತಿಗಳು ಸಮಾಜದಲ್ಲಿ ತಪ್ಪು ಸಂದೇಶವನ್ನು ನೀಡುವ ಹಾಗೂ ತನ್ನ ಬೇಜವಬ್ದಾರಿಯ ಉದ್ಧಟತನ ತೋರಿರುವುದರಿಂದ ಇವರನ್ನು ಕೂಡಲೆ ರಾಜಕೀಯ ಪಕ್ಷದಿಂದ ಶಾಶ್ವತವಾಗಿ ನಿವೃತ್ತಿಗೊಳಿಸಬೇಕು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹಾಗೂ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರಲ್ಲಿ ಮನವಿ ಮಾಡಿ ಹಕ್ಕೊತ್ತಾಯ ನಡೆಸುವುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಘು ಸುವರ್ಣ ಕೊಳಚಿಕಂಬಳ, ಯದೀಶ್ ಅಮೀನ್ ಕೊಕ್ಕರ್‌ಕಲ್, ಡಾ.ಹರಿಶ್ಚಂದ್ರ ಪಿ. ಸಾಲಿಯಾನ್, ಮೂಲ್ಕಿ ನಗರ ಪಂಚಾಯತ್‌ನ ಉಪಾಧ್ಯಕ್ಷ ಸತೀಶ್ ಅಂಚನ್ ಬಾಳೆಹಿತ್ಲು, ಬಿರುವೆರ್ ಕುಡ್ಲದ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಶ್ರೀ ನಾರಾಯಣಗುರು ಸೇವಾದಳದ ಪರವಾಗಿ ಉಮೇಶ್ ಮಾನಂಪಾಡಿ, ಶ್ರೀ ನಾರಾಯಣಗುರು ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜಿನಿ ಸುವರ್ಣ, ಸಾಮಾಜಿಕ ಚಿಂತಕ ದಿನೇಶ್ ಬಪ್ಪನಾಡು ಮತ್ತಿತರ ಸಂಘದ ಸದಸ್ಯರು ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡುಗುಹಿತ್ಲು ನಿರ್ಣಯವನ್ನು ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು.

“ಇಂತಹ ನಿರ್ಣಯ ಪ್ರತೀ ಬಿಲ್ಲವ ಸಂಘದಲ್ಲಿ ನಡೆಯಲಿ ಎಂಬ ಆಶಯ ನಮ್ಮದು…. ಇದು ಬಿಲ್ಲವರ ಸ್ವಾಭಿಮಾನದ ಪ್ರಶ್ನೆ” ….-ರಮೇಶ್ ಅಮೀನ್
ಅಧ್ಯಕ್ಷರು
ಬಿಲ್ಲವ ಸಮಾಜ ಸೇವಾ ಸಂಘ ( ರಿ) ಮೂಲ್ಕಿ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »