TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »