TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »