TOP STORIES:

ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನಟಿ ನವ್ಯಾ ಪೂಜಾರಿ


ಜೀವನವೆ ನಾಟಕ ರಂಗ. ನಾವೆಲ್ಲಾ ಸೃಷ್ಟಿಯ ಸೂತ್ರದ ಬೊಂಬೆಗಳು. ಸುಖ ದುಃಖಗಳ ಪರೀಕ್ಷೆಯ ನಡುವೆ ನಮ್ಮೆಲ್ಲರ ಮುಖದಲ್ಲಿ ಮಂದಹಾಸವ ಬರಿಸಲು ನಮ್ಮೆಲ್ಲರನ್ನು ಮನೊರಂಜಿಸಲು ತೆರೆಯ‌ ಮೇಲೆ ಬಣ್ಣ ಹಚ್ಚಿ ನಾಟಕ, ಸಿನಿಮಾ ರಂಗದಲ್ಲಿ ಜನರ ಮನಸೆಳೆವರು ರಂಗದ ಕಲಾವಿದರು. ಅಂತಹ ಸಿನಿಮಾ ರಂಗದಲ್ಲಿ ನಮ್ಮ ಬಿರುವ ಕುಲಕೆ ಹೆಮ್ಮೆಯ ಗುರುತಾಗಿ ಸದ್ದಿಲ್ಲದೆ ಮಿಂಚುತ್ತಿರುವ ನಗುಮುಖದ ಚೆಲುವೆ ನವ್ಯ ಪೂಜಾರಿ. ಮುಖದಲ್ಲಿ ಚೈತನ್ಯದ ಚಿಲುಮೆ, ಭೂಲೋಕದ ಅಪ್ಸರೆ, ನಕ್ಕರೆ ಮಲ್ಲಿಗೆ ಅರಳಿದಂತೆ, ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನವ್ಯಾ ಪೂಜಾರಿ.

ಯಾದವ ಪೂಜಾರಿ ಹಾಗೂ ಸುಮಿತರವರ ಇಬ್ಬರು ಮಕ್ಕಳಲ್ಲಿ ಮೊದಲ ಮಗಳು ನವ್ಯಾ ಹಾಗೂ ಇವರ ತಂಗಿಯ ಹೆಸರು ಕಾವ್ಯಾ.ಈ ಸುಂದರ ಸಂಸಾರ ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಾಗಿದ್ದಾರೆ. N.I.TK ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಧ್ಯಾಭ್ಯಾಸ ಹಾಗೂ ನಿಟ್ಟೆ ಕರ್ನಾಟಕ ಕಾಲೇಜ್ ನಲ್ಲಿ Computer Science ವಿಭಾಗದಲ್ಲಿ ಕಲಿತು ಮೊದಲಿಗೆ ಒಂದು ಕಚೇರಿಯಲ್ಲಿ ವೃತ್ತಯನ್ನು ಮಾಡುತ್ತಿದ್ದ ಅನುಭವ ಇವರದ್ದು. ತದನಂತರ ಉಮಿಲ್ ಚಲನಚಿತ್ರದ ಆಡಿಷನ್ ನಲ್ಲಿ ಆಯ್ಕೆಯಾಗಿ ಸಿನೆಮಾ ರಂಗಕ್ಕೆ ಕಾಲಿಟ್ಟರು.

ಸಿನಿಮಾ ಕ್ಷೆತ್ರವು ಇವರಿಗೆ ಬಯಸದೆ ಬಂದ ಭಾಗ್ಯವಾಯಿತು. ಆ ಕಲೆಯ ಕಳೆ ಇವರ ಮೊಗದಲ್ಲಿ ಹೊಳೆಯುತ್ತಿತ್ತು. ಅದೇ ಕಾರಣ ಇವರಿಗೆ ಮೊದಲು ತುಳು ಸಿನೆಮಾ ಉಮಿಲ್ ಚಿತ್ರದಲ್ಲಿ ನಟಿಸಲು ಅವಕಾಶ ದೊರಕಿತು. ಸಣ್ಣ ವಯಸ್ಸಿನಲ್ಲೇ ಸಿನೆಮಾ ರಂಗದ ಪುಟ್ಟ ಕನಸು ಬೆಳೆಸಿದ್ದರೂ ಕೂಡ ವಿದ್ಯಾಭ್ಯಾಸಕ್ಕೋಸ್ಕರ ಆ ಕನಸನ್ನೇ ಮರೆತ ಇವರು ಮುಂದೆ ಜೀವನದಲ್ಲಿ ತಾನೊಬ್ಬಳು ಸಿನಮಾ ನಟಿ ಆಗುವೆ ಅಂತಹ ಅವಕಾಶ ಸಿಗಬಹುದು ಎಂದು ಅಂದುಕೊಂಡಿರಲಿಲ್ಲ. ಕಾಲದ ಮಹಿಮೆ ಯಾರು ಅರಿಯರು ಸಾಮರ್ಥ್ಯವಿದ್ದರೆ ಯಾವುದೇ ಕ್ಷೇತ್ರದಲ್ಲಿ ಅನುಭವ ರಹಿತ ಮಿಂಚಬಹುದು. ಹಾಗೇ ಇವರ ಕಥೆ ತನಗೆ ಬಯಸದೆ ಬಂದ ಅವಕಾಶವಾದರೂ ಮೊದಲ ಸಿನೆಮಾದಲ್ಲೇ ಜನರ ಮನಮುಟ್ಟಿ ಒಬ್ಬ ಅದ್ಭುತ ಕಲಾವಿದೆಯಾಗಿ ಮುಂದೆ ಈ ಕ್ಷೇತ್ರದಲ್ಲಿ ನಿರ್ದಿಷ್ಟವಾದ ಗುರಿಯೊಂದನ್ನು ಇಟ್ಟುಕೊಂಡು ನವನವೀನತೆಯಿಂದ ಭವಿಷ್ಯದ ಬಾಗಿಲ ತರೆದರು‌. ಸಿನೆಮಾ ಕ್ಷೇತ್ರಕ್ಕೆ ಕಾಲಿಡುವ ಮೊದಲು ಕಲಿಕೆಯ ಸಂದರ್ಭದಲ್ಲಿ ಇವರು ನೃತ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಅಪಾರ ಒಲವು ಹೊಂದಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿದ ಉತ್ಸಾಹಿ ವಿಧ್ಯಾರ್ಥಿಯಾಗಿದ್ದರು.

ಉಮಿಲ್ ಇವರ ಮೊದಲ ತುಳು ಚಲನಚಿತ್ರವಾಗಿದ್ದು.ರಂಜಿತ್ ಬಜ್ಪೆರವರ ನಿರ್ದೇಶನದಲ್ಲಿ ಡಿಸೆಂಬರ್ ೨೦೧೮ ರಂದು ಬಿಡುಗಡೆಯಾಗಿದ್ದು. ಹೊಸ ಪರಿಚಯದ ಹೆಜ್ಜೆಯ ಗುರುತು ಸದ್ದಿಲ್ಲದೆ ಸಿನೆಮಾ ರಂಗದಲ್ಲಿ ಸುದ್ಧಿ ಮಾಡ ತೊಡಗಿತು.

ತದನಂತರ ಇವರು ತ್ರಿಬಲ್ ತಲಾಕ್ ಎಂಬ ಆರ್ಟ್ ಮೂವಿಯಲ್ಲಿ ನಟಿಸಿದರು. ಇದು ಇವರ ಮೊದಲ ಆರ್ಟ್ ಮೂವಿಯಾಗಿದೆ. ಈ ಚಲನಚಿತ್ರವು ಹೊಸ ತಂಡದ ಹೊಸ ಪ್ರಯತ್ನದಲ್ಲಿ ಲಂಡನ್ ನಲ್ಲಿ ಬಿಡುಗಡೆಯಾಗಿದೆ. ಚಲನಚಿತ್ರವು ವಿಭಿನ್ನವಾಗಿದ್ದು ಬ್ಯಾರಿ ಸಂಸ್ಕೃತಿಯ ಕುರಿತಾಗಿತ್ತು. ಇದರಲ್ಲಿ ನವ್ಯಾರವರು ಒಬ್ಬ ಮುಸ್ಲಿಂ ಮಹಿಳೆಯಾಗಿ ಪಾತ್ರ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿರುವರು. ದ್ವಿರುಕ್ತಿ ಎಂಬ ಕನ್ನಡ ಚಲನಚಿತ್ರದಲ್ಲಿ ಪಾತ್ರವಹಿಸಿದ್ದು ಇದುವರೆಗಿನ ಇವರ ಮೊದಲ ಕನ್ನಡ ಚಲನಚಿತ್ರವಾಗಿದೆ.

ಸುಂದರ ಕನಸಿನೊಂದಿಗೆ ಇತ್ತೀಚಿಗೆ ತೆರೆಕಂಡ ವಿಶೇಷ ಚಲನಚಿತ್ರ ಕನಸು ಮಾರಾಟಕ್ಕಿದೆ ಎಂಬ ಸಿನೆಮಾದಲ್ಲಿಯೂ ಇವರು ಅಭಿನಯಿಸಿರು. ಚಿತ್ತದಲ್ಲಿರುವ ಉದಯೋನ್ಮುಖ ಕಲಾವಿದರ ನಡುವೆ ತಾನು ಒಬ್ಬ ಯುವ ನಟಿಯಾಗಿ ಪಾತ್ರವಹಿಸಿರುವರು.

ಸಿನೆಮಾ ರಂಗದಲ್ಲಿ ಮುಂದುವರಿಯಲು ಇವರಿಗೆ ಇವರ ಮನೆಯವರ ಅಪಾರ ಪ್ರೋತ್ಸಾಹವಿದ್ದು‌. ಇದೇ ಇವರಿಗೆ ಮುನ್ನಡೆಯಲು ದೀಕ್ಷೆ ಎನ್ನುತ್ತಾರೆ ನವ್ಯಾ ಪೂಜಾರಿಯವರು.

ಎರಡೆಕ್ರೆ, ಇಂಗ್ಲಿಷ್, ಬೋಜರಾಜ್ ಎಂ.ಬಿ.ಬಿ.ಎಸ್, ಗಬ್ಬರ್ ಸಿಂಗ್, ತುಳುನಾಡ ಮಡಿಲು, ಬಿಂದಾಸ್, ಗೂಗ್ಲಿ ಮೊದಲಾದ ಸಿನೆಮಾಗಳು ಬಿಡುಗಡೆಯಾಗಲಿದ್ದು ಈ ಉದಯೋನ್ಮುಖ ನಟಿಗೆ ಪ್ರೋತ್ಸಾಹದ ಜೊತೆಗೆ ಮತ್ತಷ್ಟು ಅವಕಾಶಗಳು ದೊರಕಲಿ. ಮುಖ್ಯವಾಗಿ ತುಳು ರಂಗದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಇವರು ಆದಷ್ಟು ತುಳು ಸಿನೆಮಾಗಳಲ್ಲಿ ನಟಿಸಲು ಬಯಸುತ್ತಾರೆ. ಹುಟ್ಟಿದ ಮಣ್ಣಿನ ಮೇಲಿನ ಅಭಿಮಾನವೇ ಇವರನ್ನು ಎತ್ತರಕ್ಕೆ ಬೆಳೆಸಲು ಕಾರಣವಾಗಬಹುದು. ಹಾಗೆಯೇ ತುಳು, ಕನ್ನಡ ಇತರ ಭಾಷಾ ರಂಗದಲ್ಲೂ ಅವಕಾಶಗಳು ನಿಮ್ಮ ಮುಡಿಗೇರಲಿ. ನಟನೆಯ ಹಾದಿಯಲ್ಲಿ ಯಶಸ್ವಿ ನಟಿಯಾಗಿ ಮಿಂಚುವ ತೌಳವ ಸಿರಿಗೆ ಸವಿನಯದ ಶುಭಾಶಯಗಳು.

✍️ ತೃಪ್ತಿ.ಜಿ.ಕುಂಪಲ


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »