TOP STORIES:

FOLLOW US

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…


ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು.

ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ ಉಪಯೋಗಿಸಲಾಗುತ್ತದೆ. ದಾಳಿಂಬೆಯು ಹಲವಷ್ಟು ಔಷಧೀಯ ಗುಣಗಳನ್ನು ಹೊಂದಿದ್ದು, ಸೇವನೆಗೆ ಉಪಯುಕ್ತವಾಗಿದೆ. ಮಾರುಕಟ್ಟೆಯಲ್ಲಿ ದೊರೆಯುವ ದಾಳಿಂಬೆಗೆ ಬಹಳಷ್ಟು ಬೇಡಿಕೆಯಿದ್ದು, ಇದನ್ನು ಎಲ್ಲ ಕಡೆಗಳಲ್ಲಿ ಬೆಳೆಯುವುದು ಸಾಧ್ಯವಾಗದ ಮಾತು. ಸಮಶೀತೋಷ್ಣ ವಾತಾವರಣ ಶೀತವಲಯಗಳಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ. ಹಿಮಾಚಲಪ್ರದೇಶ, ಜಮ್ಮು ಇಲ್ಲಿನ ಕಾಡುಗಳಲ್ಲಿ ಕಾಡು ದಾಳಿಂಬೆಗಳು ಹೆಚ್ಚಾಗಿ ಕಂಡು ಬರುತ್ತವೆ.

ಈಗಾಗಲೇ ಹಲವು ರೈತರು ದಾಳಿಂಬೆ ಬೆಳೆದು ಬದುಕು ಕಂಡುಕೊಂಡಿದ್ದಾರೆ. ಇತ್ತೀಚೆಗೆ ಹಲವು ತಳಿಗಳು ಬಂದಿವೆ. ಬಹಳಷ್ಟು ಕಡೆಗಳಲ್ಲಿ ತಮ್ಮ ಮನೆಯ ಹಿತ್ತಲಲ್ಲಿ ಗಿಡನೆಟ್ಟು ಬೆಳೆಸುವುದು ಕೂಡ ಕಾಣಸಿಗುತ್ತದೆ. ದಾಳಿಂಬೆ ವಾಣಿಜ್ಯಿಕವಾಗಿ ಆದಾಯ ತರುವುದನ್ನು ಆಚೆಗಿಟ್ಟು ಆರೋಗ್ಯದ ದೃಷ್ಠಿಯಿಂದ ಸಿಗುವ ಲಾಭವನ್ನು ಅರಿತರೆ ಮನೆ ಪಕ್ಕದಲ್ಲೊಂದು ಗಿಡನೆಡೋಣ ಎಂದೆನಿಸದಿರದು. ಕಾರಣ ಇದರ ಹಣ್ಣು ಮಾತ್ರವಲ್ಲದೆ, ಮರದ ಬೇರಿನಿಂದ ಹಿಡಿದು ತೊಗಟೆ, ಹೂ, ಬೀಜ ಎಲ್ಲವೂ ಔಷಧೀಯ ಗುಣಗಳಿಂದ ಕೂಡಿದ್ದು ಬಹು ಉಪಯುಕ್ತವಾಗಿವೆ.

ದಾಳಿಂಬೆ ರಸವನ್ನು ಸೇವಿಸುವುದರಿಂದ ಅಮಶಂಕೆಯನ್ನು ತಡೆಯಬಹುದಾಗಿದೆ. ಗಿಡದ ತೊಗಟೆಯ ಕಷಾಯಕ್ಕೆ ಚಿಟಿಕೆ ಉಪ್ಪು ಬೆರೆಸಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಇದರ ಚಿಗುರು ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಅಗೆಯುವುದರಿಂದ ವಸಡಿನಿಂದ ರಕ್ತ ಬರುವುದನ್ನು ತಡೆಯಲು ಸಾಧ್ಯವಿದೆ. ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಅದರೊಂದಿಗೆ ಸ್ವಲ್ಪ ಕರಿಮೆಣಸು, ಉಪ್ಪು ಬೆರೆಸಿ ನುಣ್ಣಗೆ ಪುಡಿ ಮಾಡಿ ಆ ಪುಡಿಯಿಂದ ಹಲ್ಲು ಉಜ್ಜಿದರೆ ಹಲ್ಲು ಹೊಳಪು ಬರುತ್ತದೆ. ಜತೆಗೆ ದೃಢತ್ವ ಹೊಂದುತ್ತದೆ.

ದಾಳಿಂಬೆ ಹಣ್ಣು ಸೇವಿಸುವುದರಿಂದ ವಿಷಮ ಶೀತ ಜ್ವರ, ಅಸ್ತಮಾ, ಮಾನಸಿಕ ಒತ್ತಡ ಹಾಗೂ ನರಗಳ ದೌರ್ಬಲ್ಯದಿಂದ ಉಂಟಾಗುವ ತಲೆನೋವು ಕಡಿಮೆಯಾಗುತ್ತದೆ. ಇದು ಪಿತ್ತಶಮನ ಗುಣ ಹೊಂದಿದ್ದು, ಬಾಯಾರಿಕೆಯನ್ನು ನೀಗಿಸುವಲ್ಲಿ ಮತ್ತು ದೇಹಕ್ಕೆ ಶಕ್ತಿ ನೀಡುವಲ್ಲಿ ಸಹಕಾರಿಯಾಗಿದೆ. ರಸದೊಂದಿಗೆ ಅಷ್ಟೇ ಪ್ರಮಾಣದ ಜೇನು ಬೆರೆಸಿ ಸೇವಿಸಿದ್ದೇ ಆದಲ್ಲಿ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೇಸಿಗೆಯಲ್ಲಿ ಆಗುವ ಬಾಯಾರಿಕೆ ತಡೆಗೆ ದಾಳಿಂಬೆ ರಸದಿಂದ ಮಾಡಿದ ಪಾನೀಯ ಉತ್ತಮವಾಗಿದ್ದು, ಬಾಯಾರಿಕೆ ನೀಗಿಸಿ ದೇಹವನ್ನು ತಂಪಾಗಿಡುವಲ್ಲಿ ಸಹಾಯ ಮಾಡುತ್ತದೆ.

ದಾಳಿಂಬೆಯ ಬೀಜದಲ್ಲಿ ಜಠರೋತ್ತೇಜಕ ಗುಣವಿದ್ದು, ಬೀಜದ ಪುಡಿಯೊಂದಿಗೆ ಸ್ವಲ್ಪ ಜೇನು ಸೇರಿಸಿ ಸೇವಿಸಿದರೆ ಅತಿಸಾರವನ್ನು ನಿಯಂತ್ರಿಸಬಹುದು. ಒಂದು ಚಮಚದಷ್ಟು ಹಣ್ಣಿನ ಬೀಜಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ನಂತರ ಒಂದು ಲೋಟದ ತುಂಬಾ ಹುರುಳಿ ಕಾಳಿನ ಸೂಪ್ ನ್ನು ತೆಗೆದುಕೊಂಡು ಎರಡನ್ನು ಬೆರೆಸಿ ಕುಡಿಯುವುದರಿಂದ ಮೂತ್ರಕೋಶದ ಮತ್ತು ಮೂತ್ರ ಜನಕಾಂಗಗಳಲ್ಲಿ ಸಿಕ್ಕಿ ಹಾಕಿಕೊಂಡ ಕಲ್ಲುಗಳು ಕರಗುತ್ತವೆ ಎನ್ನಲಾಗಿದೆ.

ಇನ್ನು ದಾಳಿಂಬೆ ಹಣ್ಣಿನ ಒಳಗಡೆ ರಸ ತುಂಬಿದ ಕೆಂಪು ಗುಲಾಬಿ ಹಳದಿ ಬಿಳಿಯ ಸಿಹಿ ಒಗರು ಹುಳಿ ರುಚಿಯ ತಿರುಳಿನ ಬೀಜಗಳನ್ನು ಒಣಗಿಸಿ ಅನಾರ್ ದಾನ್ ತಯಾರಿಸುತ್ತಾರೆ ಇದು ರುಚಿಕಾರಕ ಗುಣ ಹೊಂದಿದ್ದು, ಉತ್ತರ ಭಾರತದಲ್ಲಿ ಹೆಚ್ಚಾಗಿ ಅಡುಗೆಗಳಿಗೆ ಹುಳಿಯ ರುಚಿ ಕೊಡಲು ಬಳಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ದಾಳಿಂಬೆ ಆರೋಗ್ಯದ ದೃಷ್ಠಿಯಿಂದ ಹಲವು ರೀತಿಯಲ್ಲಿ ಉಪಕಾರಿಯಾಗಿದ್ದು, ಅದನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜಾಣತನವಾಗಿದೆ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »