TOP STORIES:

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »