TOP STORIES:

FOLLOW US

ಗಂಡಸರಿಗೆ ಕೂದಲು ಉದುರಲು ಪ್ರಾರಂಭ ಮಾಡಿದರೆ ಏನು ಅರ್ಥ?


ಮಾನಸಿಕ ಒತ್ತಡ ಹೆಚ್ಚಾದರೆ, ತಲೆ ಕೂದಲು ಹೆಚ್ಚು ಉದುರುತ್ತದೆ. ಇದಕ್ಕೆ ಒತ್ತಡ ನಿವಾರಣಾ ತಂತ್ರಗಳು ಪರಿಹಾರ ಅಷ್ಟೇ.

ಮಾನಸಿಕ ಒತ್ತಡದಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಪರೋಕ್ಷವಾಗಿ ಪ್ರಾರಂಭವಾಗುತ್ತವೆ. ಇದರಿಂದ ಇದ್ದಕ್ಕಿದ್ದಂತೆ ಮನುಷ್ಯನಿಗೆ ಬಿಪಿ, ಸಕ್ಕರೆ ಕಾಯಿಲೆ ಇತ್ಯಾದಿ ಆರೋಗ್ಯ ಸಮಸ್ಯೆಗಳು ಶುರುವಾಗುತ್ತವೆ.

ಕೆಲವರಿಗೆ 30 ವರ್ಷಕ್ಕೆ ಬರುವ ಸಮಯದಲ್ಲಿ ತಲೆಕೂದಲು ಅರ್ಧಕ್ಕೆ ಅರ್ಧ ಉದುರಿ ಹೋಗಿರುತ್ತದೆ. ಇದಕ್ಕೆ ಈಗಿನ ಜೀವನ ಶೈಲಿ ಮತ್ತು ದುಡಿಮೆಯ ಒತ್ತಡ ಜೊತೆಗೆ ಸಂಸಾರದ ತಾಪತ್ರಯಗಳು ಕಾರಣ ಎಂದು ಹೇಳಬಹುದು.

ನಗರ ಪ್ರದೇಶದಲ್ಲಿ ವಾಸ ಮಾಡುವ ಜನರು ಮಾನಸಿಕ ಒತ್ತಡ ನಿವಾರಣೆಗೆ ಕೆಲವೊಂದು ತರಗತಿಗಳನ್ನು ಅಟೆಂಡ್ ಮಾಡುತ್ತಾರೆ. ಇದರ ಜೊತೆಗೆ ಈ ಲೇಖನದಲ್ಲಿ ತಿಳಿಸಿರುವ ಹಾಗೆ ಕೆಲವೊಂದು ಟಿಪ್ಸ್ ಗಳನ್ನು ಅನುಸರಿಸಿದರೆ ಮಾನಸಿಕ ಒತ್ತಡ ಸಮಸ್ಯೆ ನಿಮ್ಮಿಂದ ಶಾಶ್ವತವಾಗಿ ದೂರ ಆಗುತ್ತದೆ ಮತ್ತು ಸಮೃದ್ಧವಾದ ತಲೆ ಕೂದಲಿನ ಬೆಳವಣಿಗೆ ನಿಮ್ಮದಾಗುತ್ತದೆ.

ಮಧುಮೇಹ ಸಮಸ್ಯೆಯಿಂದ ಗಂಡಸರಿಗೆ ನೆತ್ತಿಯ ಕೂದಲು ಉದುರಬಹುದು

1. ಪುರುಷರು ವಯಸ್ಕರಾಗಿ ಜೀವನ ನಡೆಸಿದ ಕೆಲವು ದಿನಗಳಲ್ಲಿ ಹಣೆಯ ಮೇಲ್ಭಾಗದಲ್ಲಿ ಹಾಗೂ ನೆತ್ತಿಯ ಮಧ್ಯಭಾಗದಲ್ಲಿ ನಿಧಾನವಾಗಿ ತಲೆಕೂದಲು ಮಾಯವಾಗಲು ಪ್ರಾರಂಭವಾಗುತ್ತದೆ.

2. ಇದನ್ನು ವೈದ್ಯಕೀಯ ಭಾಷೆಯಲ್ಲಿ ಆಂಡ್ರೂಜನಿಕ್ ಅಲೋಪೆಸಿಯಾ ಎಂದು ಕರೆಯುತ್ತಾರೆ. ಪುರುಷರಲ್ಲಿ ಬಹಳ ಸಾಮಾನ್ಯವಾಗಿ ಈ ಸಮಸ್ಯೆ ಇರುತ್ತದೆ. ಬಹುತೇಕ ಶೇಕಡ 50% ಪುರುಷರಲ್ಲಿ 50 ವರ್ಷ ದಾಟಿದ ನಂತರದಲ್ಲಿ ಮೇಲೆ ಹೇಳಿದ ಹಾಗೆ ತಲೆ ಕೂದಲು ಮಾಯವಾಗುತ್ತಾ ಬರುತ್ತದೆ.

3. ಕೆಲವರಿಗೆ ಒಂದೇ ಕಡೆ ಕೂದಲು ಹೆಚ್ಚು ಉದುರಿದರೆ ಇನ್ನು ಕೆಲವರಿಗೆ M ಆಕಾರದಲ್ಲಿ ತಲೆ ಕೂದಲು ಉದುರುತ್ತದೆ. ಇದಕ್ಕೂ ಮೀರಿದಂತೆ ಮಧ್ಯವಯಸ್ಸಿನಲ್ಲಿ ಮತ್ತು ವಯಸ್ಸಾದ ನಂತರ ತಲೆ ಕೂದಲು ಹೆಚ್ಚು ಉದುರುವುದು ಸಾಮಾನ್ಯ.

ಅನುವಂಶಿಯತೆ ಕೂಡ ಕಾರಣ ಇರಬಹುದು!

ಆದರೆ ಯಾವುದೇ ವಯಸ್ಸಿನಲ್ಲಿ ಕೂಡ ತಲೆಕೂದಲು ಉದುರುವಿಕೆ ಇರುತ್ತದೆ. ಅನುವಂಶಿಯತೆ ಕೂಡ ಇದಕ್ಕೆ ಒಂದು ಕಾರಣ ಆಗಿರಬಹುದು.

ಕುಟುಂಬದಲ್ಲಿ ಈ ಹಿಂದೆ ಯಾರಿಗಾದರೂ ತಲೆ ಕೂದಲು ಹೆಚ್ಚು ಉದುರಿ ಹೋಗಿದ್ದರೆ ಅದು, ನಿಮಗೂ ಹಾಗೂ ನಿಮ್ಮ ಮಕ್ಕಳಿಗೂ ಸಹ ಕಾಣಬಹುದು.

ನಿಮ್ಮ ತಾಯಿಯ ಕಡೆಯ ಸಂಬಂಧದಲ್ಲಿ ಯಾರಿಗಾದರೂ ಈ ಸಮಸ್ಯೆ ಇದ್ದರೆ ನಿಮಗೆ ಇಂತಹ ತಲೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಏಕೆಂದರೆ ದೇಹದಲ್ಲಿ ಟೆಸ್ಟೋಸ್ಟೆರಾನ್ ಹಾರ್ಮೋನ್ ಅಪಾರ ಪ್ರಮಾಣದಲ್ಲಿ ಇರುವುದು ಇದಕ್ಕೆ ಕಾರಣ.

ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎದುರಾಗುವ ಮಾನಸಿಕ ಖಿನ್ನತೆ ಮತ್ತು ಆತಂಕ ಕೂಡ ಒಂದು ಕಾರಣ ಎಂದು ಹೇಳಬಹುದು. ಏಕೆಂದರೆ ಮಾನಸಿಕವಾಗಿ ಹೆಚ್ಚು ದುಗುಡ ಮನೆ ಮಾಡಿದರೆ, ದೇಹದಲ್ಲಿ ಲೈಂಗಿಕ ಹಾರ್ಮೋನುಗಳ ಮಟ್ಟ ಮತ್ತು ಉತ್ಪತ್ತಿ ಹೆಚ್ಚಾಗುತ್ತದೆ.

ಹಾಗಾಗಿ ಮೊದಲು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು. ಮಾನಸಿಕ ಒತ್ತಡ ಹೆಚ್ಚಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಕೂಡ ಏರುಪೇರಾಗುತ್ತದೆ. ಇದರಿಂದಲೂ ಸಹ ತಲೆಕೂದಲು ಉದುರಿ ಹೋಗುವ ಸಾಧ್ಯತೆ ಇರುತ್ತದೆ.

ಈ ಲೇಖನದಲ್ಲಿ ನಿಮ್ಮ ತಲೆ ಕೂದಲು ಉದುರುವಿಕೆಯನ್ನು ಹೆಚ್ಚು ಮಾಡುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಕೆಲವು ವಿಧಾನಗಳನ್ನು ತಿಳಿಸಿ ಕೊಡಲಾಗಿದೆ.

ವೈದ್ಯಕೀಯ ಲೋಕ ಸಹ ಇದನ್ನು ಒಪ್ಪಿಕೊಂಡಿದೆ. ಈ ವ್ಯಾಯಾಮವನ್ನು ಮಾಡುವುದು ಅತ್ಯಂತ ಸುಲಭ. ನೀವು ಸಹ ಅತಿಯಾದ ಮಾನಸಿಕ ಒತ್ತಡ ಎದುರಾದ ಸಂದರ್ಭದಲ್ಲಿ ಹೀಗೊಮ್ಮೆ ಟ್ರೈ ಮಾಡಿ.

ಮೊದಲು ನೆಲದ ಮೇಲೆ ಕಣ್ಣುಮುಚ್ಚಿಕೊಂಡು ನೇರವಾಗಿ ಕುಳಿತುಕೊಳ್ಳಿ

* ಈಗ ನಿಧಾನವಾಗಿ ಉಸಿರನ್ನು ಒಳಗೆ ತೆಗೆದುಕೊಳ್ಳಿ. ದೀರ್ಘವಾಗಿ ಉಸಿರನ್ನು ಒಳಗೆ ತೆಗೆದು ಕೊಳ್ಳುವುದರಿಂದ ನಿಮ್ಮ ಹೊಟ್ಟೆಯ ಭಾಗದಿಂದ ನಿಮ್ಮ ತಲೆಯವರೆಗೆ ಉಸಿರಿನ ಚಲನೆಯನ್ನು ಅನುಭವಿಸಿ.

* ಉಸಿರನ್ನು ಹೊರಬಿಡುವ ಮೂಲಕ ಮತ್ತೊಮ್ಮೆ ಇದೇ ಪದ್ಧತಿಯನ್ನು ಅನುಸರಿಸಿ. ಒಂದು ವೇಳೆ ನಿಮಗೆ ಮಾನಸಿಕ ಒತ್ತಡ ಕಂಡುಬಂದ ಸಮಯದಲ್ಲಿ ಪ್ರತಿ ಬಾರಿ ಐದು ನಿಮಿಷ ಈ ರೀತಿ ಮಾಡಿ. ಇದರಿಂದ ನಿಮಗೆ ಹೆಚ್ಚು ವಿಶ್ರಾಂತಿ ಮತ್ತು ಮನಸ್ಸಿಗೆ ಶಾಂತಿ ಜೊತೆಗೆ ನಿಮ್ಮ ಮನಸ್ಸಿನ ಏಕಾಗ್ರತೆ ಹೆಚ್ಚಾಗುತ್ತದೆ.

50 ವರ್ಷ ಮೇಲ್ಪಟ್ಟವರಿಗೆ ಧ್ಯಾನದ ಟಿಪ್ಸ್

ಧ್ಯಾನ ಮಾಡುವುದು ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳುವುದರ ಸಲುವಾಗಿ. ನೇರವಾಗಿ ಕುಳಿತುಕೊಂಡು ಕಣ್ಣುಮುಚ್ಚಿ ಯಾವುದಾದರೂ ಒಂದು ವಿಚಾರದ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡುವುದು ಧ್ಯಾನದ ಒಂದು ವಿಧಾನ.

ನಿಮಗೆ ಬೇಕಾದರೆ ಓಂ ಎಂಬ ಮಂತ್ರವನ್ನು ಪಠಿಸಬಹುದು. ನಿಧಾನವಾಗಿ ಉಸಿರನ್ನು ತೆಗೆದುಕೊಳ್ಳುತ್ತಾ ಮತ್ತು ಹೊರಗೆ ಬಿಡುತ್ತಾ ಮಂತ್ರವನ್ನು ಪಠಿಸಿ ಧ್ಯಾನವನ್ನು ಮಾಡಬಹುದು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »