TOP STORIES:

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು – ಬೇಕಿದೆ ಸರಕಾರದ ಸಹಾಯ ಹಸ್ತ


ಉಡುಪಿ: ಒಂದೆಡೆ ಸರಕಾರಗಳು ದೇಶೀಯ ಉತ್ಪನ್ನ, ಸಂಶೋಧನೆಗಳಿಗೆ ಒತ್ತು ನೀಡಿ ಸ್ವದೇಶದಲ್ಲಿ ತಯಾರಾಗುವ ಅವಿಶ್ಕಾರಗಳಿಗೆ ವೇದಿಕೆ ಒಗದಿಸಲು ಚಿಂತನೆ ನಡೆಸುತ್ತಿದೆ. ಆದರೆ ಮತ್ತೊಂದೆಡೆ ಉಡುಪಿಯ ಹೆಜಮಾಡಿ ಎಂಬ ಪುಟ್ಟ ಹಳ್ಳಿಯಲ್ಲಿ ದೇಶದಲ್ಲೇ ಮೊದಲು ಎನ್ನುವ ರೀತಿಯಲ್ಲಿ ಸಂಶೋಧನೆ ಒಂದು ನಡೆದಿದ್ದು ಸರಕಾರದ ಸಹಾಯ ಹಸ್ತದ ನಿರೀಕ್ಷೆಯಲ್ಲಿದೆ.

ಉಡುಪಿಯ ಗಡಿಭಾಗ ಹೆಜಮಾಡಿ ಎಂಬ ಪುಟ್ಟ ಗ್ರಾಮದಲ್ಲಿ ಉತ್ಸಾಹಿ ಯುವ ಪಡೆ ತಮ್ಮದೇ ಸ್ವಂತ ಬಂಡವಾಳದೊಂದಿಗೆ ದೇಶದಲ್ಲೇ ಮೊದಲು ಎಂಬಂತೆ ಮೈಕ್ರೋ ಲೈಟ್ ಸೀ ಪ್ಲೇನ್ ಒಂದನ್ನು ತಯಾರು ಮಾಡಿದ್ದಾರೆ. ಈ ಸೀ ಪ್ಲೇನ್ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಪುಷ್ಪರಾಜ್ ಅಮಿನ್ ಎಂಬವರು ಈ ಯೋಜನೆಯ ರೂವಾರಿ. 8 ಮಂದಿ ಯುವಕ ಯುವತಿಯರ ಜೊತೆ ಗೂಡಿ ಈ ಸೀ ಪ್ಲೇನ್ ಅನ್ನು ತಯಾರಿಸಿದ್ದು ಇಲ್ಲಿನ ಶಾಂಭವಿ ನದಿಯಲ್ಲಿ ಯಶಸ್ವಿ ಪ್ರಾಯೋಗಿಕ ಹಾರಾಟ ಕೂಡಾ ನಡೆದಿದೆ, 1 ವರ್ಷದ ಕಠಿಣ ಪರಿಶ್ರಮ ಮತ್ತು ಸಂಶೋಧನೆಯ ಫಲವಾಗಿ ಸೀ ಪ್ಲೇನ್ ನಿರ್ಮಾಣವಾಗಿದ್ದು ಸುಮಾರು 7 ರಿಂದ 8 ಲಕ್ಷ.ರೂ. ವೆಚ್ಚ ತಗುಲಿದೆ.

“ಸಣ್ಣದಿಂದಲೇ ನನಗೆ ವಿಮಾನ ಹಾರಿಸಬೇಕು ಎಂಬ ಆಸೆ ಇದ್ದಿತ್ತು. ಕಳೆದ ಕೆಲ ವರ್ಷಗಳಲ್ಲಿ ಸಣ್ಣ ಸಣ್ಣ ವಿಮಾನದ ಮಾಡೆಲ್‌‌ಗಳನ್ನು ಮಾಡಿದ್ದೇನೆ. ಹಲವಾರು ಮಕ್ಕಳಿಗೆ ತರಬೇತಿಯನ್ನು ಕೂಡಾ ನೀಡಿದ್ದೇನೆ. ಓರ್ವ ವ್ಯಕ್ತಿ ಕುಳಿತುಕೊಂಡು ಹೋಗುವಂತಹ ವಿಮಾನ ಮಾಡಬೇಕು ಎಂಬ ಆಸೆ ಇದ್ದಿತ್ತು. ಆದರೆ ವಿಮಾನ ಮಾಡುವುದು ತುಂಬಾ ಕಷ್ಟಕರ. ಆಕಾಶದಲ್ಲಿ ಹಾರುವ ವಿಮಾನ ತಯಾರಿಸಲು ಜಾಗದ ಕೊರತೆ ಮತ್ತು ಹಣದ ಅವಶ್ಯಕತೆ ಕೂಡಾ ಇತ್ತು ಹೀಗಾಗಿ ನೀರಿನಲ್ಲಿ ಹೋಗುವ ವಿಮಾನವನ್ನು ತಯಾರಿಸಿದೆವು. ನನ್ನ ಮನೆಯ ಹತ್ತಿರವೇ ನದಿ ಇರುವುದರಿಂದ ಇದರ ಪ್ರಾಯೋಗಿಕ ಪ್ರಯೋಗಕ್ಕೆ ಮತ್ತು ಇನ್ನಿತರ ಕೆಲಸಕ್ಕೆ ಕೂಡಾ ಸುಲಭವಾಗಿತ್ತು. ಈ ಯೋಜನೆಗೆ ಸಹಕಾರಿಯಾಗುವಂತೆ ಸರಕಾರ ನಮಗೆ ಒಂದು ಸಣ್ಣ ಮಟ್ಟದ ವರ್ಕ್ ಶಾಪ್ ಮತ್ತು ಅಗತ್ಯ ಸವಲತ್ತುಗಳನ್ನು ಒದಗಿಸಿ ಕೊಡಬೇಕು” ಎನ್ನುತ್ತಾರೆ ಈ ತಂಡದ ಮುಖ್ಯಸ್ಥರು ಮತ್ತು ಮಾರ್ಗದರ್ಶಕರು ಆದ ಪುಷ್ಪರಾಜ್ ಅಮಿನ್.

ಈ ಇಡೀ ಸೀ ಪ್ಲೇನ್ ತಯಾರಾದದ್ದು ಪುಷ್ಪರಾಜ್ ಅವರ ಮನೆಯ ಅಂಗಳ ಗದ್ದೆ, ಮತ್ತು ತೋಟದಲ್ಲಿ. ಯಾವುದೇ ದೊಡ್ಡ ವರ್ಕ್ ಶಾಪ್ ಇಲ್ಲದೇ, ಆಧುನಿಕ ಉಪಕಣಗಳು ಇಲ್ಲದೇ ತಮ್ಮಲ್ಲಿ ಲಭ್ಯವಿರುವ ಉಪಕರಣಗಳನ್ನು ಬಳಸಿ ಈ ಸೀ ಪ್ಲೇನ್ ಅನ್ನು ತಯಾರು ಮಾಡಿದ್ದಾರೆ, ತಂಡದಲ್ಲಿ ಪುಷ್ಪರಾಜ್ ಅಮೀನ್ ಸೇರಿದಂತೆ, ಟ್ರೈನಿ ಪೈಲಟ್ ವಿನಯಾ ಯು, ಯಾಚ್ ಕ್ಯಾಪ್ಟನ್ ವಸುರಾಜ್ ಅಮಿನ್, ವೃತ್ತಿಪರ ಡ್ರೋನ್‌‌ ಆಪರೇಟರ್ ಅಭಿಷೇಕ್ ಎಂ ಕೋಟ್ಯಾನ್, ಏರೋನಾಟಿಕಲ್ ವಿದ್ಯಾರ್ಥಿ ಉತ್ಸವ್ ಉಮೇಶ್, ಏರೋನಾಟಿಕಲ್ ಪ್ರಾಧ್ಯಾಪಕ ಶಯನಿ ರಾವ್, ರೇಶ್ಮಾ ಬಂಗೇರ, ಅಶ್ವಿನಿ ರಾವ್ ಸೇರಿದ್ದಾರೆ.

“ಈ ಸೀ ಪ್ಲೇನ್ 190 ಕೆಜಿ ಇದ್ದು, ಓರ್ವ ಪೈಲಟ್ ಕುಳಿತುಕೊಂಡು ಸಂಚರಿಸಲು ಸಾಧ್ಯವಿದೆ. ನಮ್ಮ ಪ್ರಥಮ ಪ್ರಯತ್ನದಲ್ಲೇ ನಾವು ಯಶಸನ್ನು ಕಂಡಿದ್ದೇವೆ. ನಮ್ಮ ದೇಶದಲ್ಲಿ ಇಷ್ಟು ಕಡಿಮೆ ವೆಚ್ಚ ಮತ್ತು ಸಮಯದಲ್ಲಿ ತಯಾರಾಗಿರುವ ಪ್ರಥಮ ವಿಮಾನ ಇದು. ಇದನ್ನು ದ್ವೀಪಗಳ ನಡುವೆ ಸಂಚಾರಕ್ಕೆ, ನೆರೆ ಸಂಧರ್ಭದಲ್ಲಿ ಪರಿಹಾರ ಕಾರ್ಯಕ್ಕೆ, ಪ್ರವಾಸೋದ್ಯಮಕ್ಕೆ, ಬಳಕೆ ಮಾಡಬಹುದು. ಆದರೆ ಸರಿಯಾದ ವರ್ಕ್ ಶಾಪ್, ಉಪಕರಣಗಳು ಇಲ್ಲದೇ ಈ ಪ್ರಯೋಗ ಯಶಸ್ವಿಯಾಗಿದೆ” ಎನ್ನುತ್ತಾರೆ ತಂಡದ ಸದಸ್ಯ ಶಯನಿ ರಾವ್.

ದೃತಿ ಮೈಕ್ರೋಲೈಟ್ ಸೀ ಪ್ಲೇನ್ ಎಂದು ಇದನ್ನು ಹೆಸರಿಸಲಾಗಿದ್ದು ಸುಮಾರು 120 ಕೆಜಿ ಭಾರವಿದೆ. 33 ಹೆಚ್.ಪಿ ಮೋಟಾರ್ ಅನ್ನು ಈ ಸೀ ಪ್ಲೇನ್‌‌ಗಾಗಿ ಬಳಸಲಾಗಿದೆ. ಗ್ರೇಡ್ ಅಲುಮಿನಿಯಂ, ಫೋಮ್, ಫೈಬರ್ ಬಟ್ಟೆ, ನೈಲಾನ್ ಬಟ್ಟೆ ಮತ್ತು ಇನ್ನಿತರ ಸಾಮಾಗ್ರಿಗಳನ್ನು ಈ ಸೀ ಪ್ಲೇನ್ ತಯಾರಿಯಲ್ಲಿ ಬಳಸಲಾಗಿದೆ. ತಂಡವು ಸೂಕ್ತ ಪರಿಕರ, ವ್ಯವಸ್ಥೆಗಳು ಲಭ್ಯವಾದಲ್ಲಿ ಮುಂದಿನ ದಿನಗಳಲ್ಲಿ 4,610 ಸೀಟರ್ ಸೀ ಪ್ಲೇನ್ ಗಳನ್ನು ತಯಾರಿಸಲು ಕೂಡಾ ಯೋಜನೆ ಹಾಕಿಕೊಳ್ಳುತ್ತಿದೆ.

ಈ ಪ್ರಯೋಗಕ್ಕೆ ಆಗಿರುವ ಖರ್ಚು ವೆಚ್ಚ ಎಲ್ಲವನ್ನೂ ತಂಡದ ಸದಸ್ಯರು, ಸ್ನೇಹಿತರು, ಮತ್ತು ಸಾಲ ಮಾಡುವ ಮೂಲಕ ನಿಭಾಯಿಸಿದ್ದಾರೆ.

ಈ ಮೊದಲು ಗುಜರಾತಿನ ಅಹಮದಾಬಾದ್‌ನಲ್ಲಿ ವಿದೇಶದಿಂದ ತರಿಸಿದ್ದ ಸೀ ಪ್ಲೇನ್ ಅನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿ ಅದರಲ್ಲಿ ಪ್ರಯಾಣವನ್ನು ಕೂಡಾ ಮಾಡಿದ್ದರು. ಆದರೆ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್‌ಗೆ ಇದೀಗ ಅಗತ್ಯ ಬೆಂಬಲ ಬೇಕಾಗಿದೆ. ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನಹರಿಸಿ ಈ ಯುವ ಅವಿಷ್ಕಾರಿಗಳಿಗೆ ನೆರವಾಗಬೇಕಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »