TOP STORIES:

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು


ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳಿಂದ ಫೆಬ್ರವರಿ 25ರಂದು ಮನವಿ ಸಲ್ಲಿಸಲಾಗಿದ್ದರೂ ದುಷ್ಕರ್ಮಿಗಳನ್ನು ಇನ್ನೂ ಬಂಧಿಸದಿರುವುದರಿಂದ ಇಂದು ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಯಾಗಿ ಸಭೆ ಸೇರಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ನಗರ ಸಭೆಯ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಂಘಟಿತ ಹೋರಾಟದ ಮೂಲಕ ನಾವು ಮುಂದಿನ ಹೆಜ್ಜೆ ಇಡಬೇಕಾಗಿದೆ. ಹತಾಶೆ ಭಾವನೆಯನ್ನು ಬಿಟ್ಟು ಧನಾತ್ಮಕತೆಯಲ್ಲಿ ನಾವು ಮುನ್ನಡೆಯುವ ಎಂದರು.

ರಾಮ ಮಾಸ್ಟರ್ ಶಂಕರ್ ಶಾಂತಿಯವರಿಗೆ ಧೈರ್ಯ ತುಂಬುವ ಕಾರ್ಯದೊಂದಿಗೆ ದುಷ್ಕರ್ಮಿಗಳನ್ನು ಪೋಲಿಸ್ ಇಲಾಖೆ ಬಂಧಿಸಿ ಸರಿಯಾದ ಶಿಕ್ಷೆ ಸಿಗುವವರೆಗೆ ಹೋರಾಡಬೇಕಿದೆ ಎಂದರು.

ಸಮಾನ ಮನಸ್ಕರಾದ ಕಿರಣ್ ಮಾತನಾಡಿ ಶಂಕರ್‌ ಪೂಜಾರಿ ನಿಸ್ವಾರ್ಥ ಸಮಾಜ ಸೇವಕರಾಗಿ ಸಮಾಜದಲ್ಲಿಯ ಭೃಷ್ಟರ ಭೃಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ ಮಾಡುತ್ತಿದ್ದು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗಿದೆ. ಆದರೆ ಭೃಷ್ಟರಿಗೆ ಕಂಟಕವಾಗಿದೆ. ಹಲ್ಲೆ ಪೂರ್ವನಿಯೋಜಿತವಾಗಿದ್ದು, ಶಂಕರ ಶಾಂತಿಯವರಿಗೆ ನ್ಯಾಯ ಸಿಗುವವರೆಗೆ ಹೋರಾಡುವ ಎಂದರು.

ಬಿಲ್ಲವ ಚಿಂತಕ‌ ದಯಾನಂದ ಉಗ್ಗೆಲ್ ಬೆಟ್ಟು ಮಾತನಾಡಿ ಸಮಾಜದಲ್ಲಿಯ ಅನ್ಯಾಯಕ್ಕೆ ತುಡಿಯುವ ಮನಸ್ಥಿತಿಯ ಶಂಕರ್ ಶಾಂತಿಯವರ ಹೋರಾಟ ಮುಂದೆಯೂ ಸಾಗಲು ನಾವೆಲ್ಲ ಅವರಿಗೆ ಧೈರ್ಯ ತುಂಬಬೇಕಾಗಿದೆ. ಕೆಲವು ಕ್ಷುಲ್ಲಕ ಮನಸಿನ ವ್ಯಕ್ತಿಗಳು ಈ ಹೋರಾಟದ‌ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು

ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ವಹಿಸಿ ಮಾತನಾಡಿ ಘಟನೆ ನಡೆದು 6 ದಿವಸವಾದರೂ ಇನ್ನೂ ದುಷ್ಕರ್ಮಿಗಳನ್ನು ಬಂಧಿಸದಿರುವುದು ಪೋಲಿಸ್ ಇಲಾಖೆಯ ಮೇಲೆ ನಮಗೆ ಅನುಮಾನ ಮೂಡಿಸುತ್ತಿದೆ. ಒಂದು ವೇಳೆ ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಬಾಂಧವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಪದಾಧಿಕಾರಿಗಳು, ಬಿಲ್ಲವ ಸಮಾಜದ ಸಮಾನ ಮನಸ್ಕರು ಉಪಸ್ಥಿತರಿದ್ದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »